ಮಂಗಳವಾರದ ರಾಶಿ ಭವಿಷ್ಯ ಇಲ್ಲಿದೆ ಓದಿ: vishwanews24

ಮೇಷ ರಾಶಿ

ಉದ್ಯೋಗಸ್ಥರಿಗೆ ನಂಬಲಸಾಧ್ಯವಾದಂಥ ಬೆಳವಣಿಗೆಗಳು ನಡೆಯುತ್ತವೆ. ಒತ್ತಡದ ಸನ್ನಿವೇಶದಲ್ಲೂ ಅದ್ಭುತವಾದ ಕೆಲಸವನ್ನು ಮಾಡಲಿದ್ದೀರಿ. ತಾಳ್ಮೆಯಿಂದ ವರ್ತಿಸಿದರೆ ಅಂದುಕೊಂಡ ಕೆಲಸವನ್ನು ಇನ್ನಷ್ಟು ಉತ್ಸಾಹದಿಂದ ಮಾಡಲು ಸಾಧ್ಯವಾಗುತ್ತದೆ. ಆದಾಯ ಮೂಲವನ್ನು ಹೆಚ್ಚು ಮಾಡಿಕೊಳ್ಳಲು ಪ್ರಯತ್ನ ಆರಂಭಿಸಲಿದ್ದೀರಿ.

ವೃಷಭ ರಾಶಿ

ಮೌನವಾಗಿದ್ದು ಕೆಲಸಗಳನ್ನು ಪೂರ್ತಿ ಮಾಡಿಕೊಳ್ಳುವಂಥ ದಿನ ಇದು. ಮುಖ್ಯ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ವಾಸ್ತವ ನೆಲೆಗಟ್ಟಿನಲ್ಲಿ ನಿಂತು, ಆಲೋಚನೆ ಮಾಡಿ. ಭಾವನಾತ್ಮಕವಾಗಿ ಆಲೋಚಿಸಿದರೆ ಕೆಲಸಗಳು ವಿಳಂಬ ಆಗುವ ಸಾಧ್ಯತೆ ಇದೆ. ಮನೆಯಲ್ಲಿ ಸಂಭ್ರಮದ ವಾತಾವರಣ ಇರಲಿದೆ.

ಮಿಥುನ ರಾಶಿ

ನೀವಾಗಿಯೇ ಆರಿಸಿಕೊಂಡ ದಾರಿಯಲ್ಲಿ ಸಾಗುವುದು ಸವಾಲು ಎಂದೆನಿಸಬಹುದು. ಬಂಧುಗಳು, ಸ್ನೇಹಿತರ ಅಗತ್ಯಗಳಿಗಾಗಿ ನಿಮ್ಮ ಉಳಿತಾಯದ ಹಣವನ್ನು ತೆಗೆಯಬೇಕಾದ ಸನ್ನಿವೇಶ ಸೃಷ್ಟಿಯಾಗಬಹುದು. ಸಂಗಾತಿ- ಮಕ್ಕಳಿಗೆ ಮುಖ್ಯ ಎನಿಸಿದ ಸಂಗತಿಗಳು ನಿಮಗೆ ಮುಖ್ಯವಲ್ಲ ಎನಿಸಬಹುದು. ಇದರಿಂದ ತಿಕ್ಕಾಟಕ್ಕೆ ಕಾರಣ ಆಗಬಹುದು.

ಕರ್ಕಾಟಕ ರಾಶಿ

ಎಲ್ಲವೂ ಅಂದುಕೊಂಡಂತೆ ಸಾಗುತ್ತಿದೆ ಎಂದುಕೊಳ್ಳುವಷ್ಟರಲ್ಲಿ ಸಣ್ಣ- ಪುಟ್ಟ ಆತಂಕಗಳು ಎದುರಾಗುತ್ತದೆ. ಆದರೆ ನಿಮ್ಮ ಸಮಯಪ್ರಜ್ಞೆಯಿಂದ ಅವುಗಳನ್ನು ದಾಟಿಕೊಳ್ಳುತ್ತೀರಿ. ಕಲಾವಿದರಿಗೆ ಹೊಸ ಅವಕಾಶಗಳು ಸಿಗಲಿವೆ. ಆದರೆ ಗಟ್ಟಿಯಾದ ಪ್ರಯತ್ನ ಬೇಕು. ಅಗತ್ಯ ಬಿದ್ದಲ್ಲಿ ಇತರರ ನೆರವು ಪಡೆಯಿರಿ.

ಸಿಂಹ ರಾಶಿ

ಹೆಚ್ಚುವರಿ ಆದಾಯ ಮೂಲದಿಂದ ಲಾಭದ ಪ್ರಮಾಣ ಹೆಚ್ಚಾಗಲಿದೆ. ನಿಮ್ಮ ಸಾಮರ್ಥ್ಯವನ್ನು ಗುರುತಿಸಿ, ಹೆಚ್ಚಿನ ಜವಾಬ್ದಾರಿ ನೀಡಲಾಗುತ್ತದೆ. ಸ್ನೇಹಿತರು- ಸಂಬಂಧಿಕರು ಔತಣ ಕೂಟಕ್ಕೆ ಆಹ್ವಾನ ನೀಡಬಹುದು. ಕಚೇರಿ ಅಥವಾ ಮನೆ ಬದಲಾವಣೆಗೆ ಪ್ರಯತ್ನ ಮಾಡಲಿದ್ದೀರಿ.

ಕನ್ಯಾ ರಾಶಿ

ವಾಹನ, ಮನೆ ಖರೀದಿಗೆ ಸಾಲ ಪಡೆಯಲು ಪ್ರಯತ್ನ ಮಾಡಲಿದ್ದೀರಿ. ವೃತ್ತಿನಿರತರಿಗೆ ಹೊಸ ಪರಿಚಯಗಳಿಂದ ಸಹಾಯ ಆಗಲಿದೆ. ನೇರವಂತಿಕೆಗಿಂತ ಆಲೋಚಿಸಿ, ಮಾತನಾಡುವುದು ಬಹಳ ಮುಖ್ಯ. ತಾಯಿಯ ಆರೋಗ್ಯದ ಕಡೆಗೆ ಗಮನ ವಹಿಸಿ. ಹಿರಿಯರ ಸಲಹೆಯನ್ನು ಪಾಲಿಸಿ.

ತುಲಾ ರಾಶಿ

ಇತರರು ಮಾನಸಿಕವಾಗಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಆದ್ದರಿಂದ ಎಲ್ಲ ಸಂಗತಿಗಳಿಗೂ ಪ್ರತಿಕ್ರಿಯಿಸಬೇಡಿ. ಊಟ- ತಿಂಡಿಯೇ ಆಗಲಿ, ಮಾತೇ ಆಗಲಿ ನಾಲಗೆ ಮೇಲೆ ಹಿಡಿತ ಇರಲಿ. ಅವಿವಾಹಿತರಿಗೆ ಸೂಕ್ತ ವಿವಾಹ ಸಂಬಂಧಗಳು ದೊರೆಯುವ ಸಾಧ್ಯತೆ ಇದೆ.

ವೃಶ್ಚಿಕ ರಾಶಿ

ಪ್ರೇಮಿಗಳಿಗೆ ಸುಮಧುರ ಕ್ಷಣಗಳನ್ನು ಕಳೆಯುವ ಅವಕಾಶ ದೊರೆಯಲಿದೆ. ಮೇಲಧಿಕಾರಿಯ ಜತೆಗೆ ವಿವಿಧ ವಿಚಾರಗಳಲ್ಲಿ ಭಿನ್ನಾಭಿಪ್ರಾಯ ಮೂಡಲಿದೆ. ನಿಮ್ಮ ಕೈ ಕೆಳಗೆ ಕೆಲಸ ಮಾಡುವವರ ಸಹಕಾರದಿಂದ ಹಲವು ಬಗೆಯಲ್ಲಿ ಅನುಕೂಲ ಒದಗಿ ಬರಲಿದೆ. ಸ್ವಾದಿಷ್ಟವಾದ ಆಹಾರ ಸವಿಯುವ ಯೋಗ ಇದೆ.

ಧನಸ್ಸು ರಾಶಿ

ಸ್ವಂತ ಮನೆಯಿರುವವರು ದುರಸ್ತಿ ಹಾಗೂ ಗೃಹಾಲಂಕಾರಕ್ಕೆ ಹೆಚ್ಚಿನ ಖರ್ಚು ಮಾಡಲಿದ್ದೀರಿ. ವಾಹನ ಚಾಲನೆ ಮಾಡುವವರು ಬಹಳ ಎಚ್ಚರಿಕೆಯಿಂದ ಇರಬೇಕು. ನಾನು ಮಾಡಿದ್ದೆಲ್ಲ ಸರಿ ಎಂಬ ಧೋರಣೆ ಒಳ್ಳೆಯದಲ್ಲ. ಹಳೇ ಜಗಳವನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಯಾರ ಜತೆಗೂ ವೈಮನಸ್ಯ ಮಾಡಿಕೊಳ್ಳಬೇಡಿ.

ಮಕರ ರಾಶಿ

ಮಕರ ರಾಶಿ

ಸಂಗಾತಿಯ ಅಗತ್ಯ ಹಾಗೂ ಆಸೆಗಳನ್ನು ಪೂರೈಸುವ ಸಲುವಾಗಿ ಹೆಚ್ಚಿನ ಖರ್ಚು ಮಾಡಲಿದ್ದೀರಿ. ಭವಿಷ್ಯದ ಬಗ್ಗೆ ಇರುವ ಆತಂಕ ದೂರ ಆಗುವ ಸಾಧ್ಯತೆ ಇದೆ. ಮಧುಮೇಹ, ರಕ್ತದೊತ್ತಡದಂಥ ಸಮಸ್ಯೆ ಇರುವವರು ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಅಗತ್ಯ ಇದ್ದಲ್ಲಿ ಸೂಕ್ತ ವೈದ್ಯರಿಂದ ಚಿಕಿತ್ಸೆ ಪಡೆಯಿರಿ.

ಕುಂಭ ರಾಶಿ

ಯಾರದೋ ಮೇಲಿನ ಸಿಟ್ಟಿಗೆ ಇನ್ಯಾರ ಮೇಲೋ ಆಕ್ರೋಶ ವ್ಯಕ್ತಪಡಿಸುವುದು ಸರಿಯಲ್ಲ. ಸಾಧ್ಯವಾದಷ್ಟೂ ಈ ದಿನ ನೀವು- ನಿಮ್ಮ ಕೆಲಸ ಎಂಬಂತೆ ಇದ್ದುಬಿಡುವುದು ಉತ್ತಮ. ಬೇಡದ ವಾದ- ವಿವಾದಗಳನ್ನು ಮೈ ಮೇಲೆ ಎಳೆದುಕೊಂಡರೆ ಮಾನಸಿಕ ನೆಮ್ಮದಿ ಹಾಳಾಗುತ್ತದೆ.

ಮೀನ ರಾಶಿ

ರಾಜಕಾರಣ, ಸಾಮಾಜಿಕ ಜೀವನದಲ್ಲಿ ಇರುವವರಿಗೆ ಬಿಡುವಿಲ್ಲದ ದಿನವಾಗಿರುತ್ತದೆ. ಮನರಂಜನೆಗಾಗಿ ಹೆಚ್ಚಿನ ಖರ್ಚು ಮಾಡಲಿದ್ದೀರಿ. ಹೋಟೆಲ್, ರೆಸ್ಟೋರೆಂಟ್ ಗಳಿಗೆ ಕುಟುಂಬದ ಸಮೇತ ತೆರಳಲಿದ್ದೀರಿ. ವೃತ್ತಿಪರ ಕಾರಣಗಳಿಗಾಗಿ ದೂರ ಪ್ರಯಾಣ ಮಾಡುವ ಯೋಗ ಇದೆ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

17 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

17 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

19 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

19 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

19 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

19 hours ago