ರಾಮ ಭಕ್ತ ಹನುಮಂತನನ್ನು ಬಜರಂಗಿ ಆಂಜನೇಯ ಮುಂತಾದ ಹೆಸರುಗಳಿಂದ ಪ್ರಪಂಚದಾದ್ಯಂತ ಭಕ್ತರು ಪೂಜಿಸುತ್ತಾರೆ. ಧೈರ್ಯ, ಸ್ಥೈರ್ಯಗಳಿಗೆ ಪ್ರಸಿದ್ಧಿಯನ್ನು ಪಡೆದುಕೊಂಡಿರುವ ಆಂಜನೇಯ ಸ್ವಾಮಿ ನಿಷ್ಠೆಗೆ ಹೆಸರುವಾಸಿಯಾದವರು.
ಮಂಗಳವಾರದಂದು ವಿಶೇಷವಾಗಿ ಹನಮಂತನ ಪೂಜೆಯನ್ನು ಮಾಡಲಾಗುತ್ತದೆ. ಪ್ರಾತಃ ಕಾಲದಲ್ಲಿಯೇ ಎದ್ದು ಹನುಮಾನ್ ಪೂಜೆಯನ್ನು ಮಾಡಿದರೆ ಭಕ್ತರು ಹನುಮಂತನ ಕೃಪಾಕಟಾಕ್ಷಕ್ಕೆ ಪಾತ್ರರಾಗಬಹುದು ಎಂಬುದು ಹಿಂದಿನಿಂದಲೂ ನಂಬಿಕೊಂಡು ಬಂದಿರುವ ಆಚರಣೆಯಾಗಿದೆ. ಶಕ್ತಿ, ಬಲ ಮತ್ತು ಗೌರವವನ್ನು ಹೆಚ್ಚಿಸಿಕೊಳ್ಳಲು ಹನಮಂತನ ಪೂಜೆಯನ್ನು ಮಾಡಬೇಕು.
ಹನಮಾನ್ ಪೂಜೆಗೆ ನಿಮಗೆ ಬೇಕಾದ ಪೂಜಾ ಪರಿಕರಗಳು
*ದೀಪ
*ಅಗರ್ಬತ್ತಿ
*ಯಾವುದೇ ಹಣ್ಣು ನಿರ್ದಿಷ್ಟವಾಗಿ ಬಾಳೆಹಣ್ಣು
*ನೀರು
*ಹೂವು
*ಕುಂಕುಮ
*ಕೆಂಪು ಬಣ್ಣದ ಬಟ್ಟೆ
*ಹನುಮಂತನ ಫೋಟೋ ಅಥವಾ ವಿಗ್ರಹ ಇಲ್ಲವೇ ಹನುಮಂತನ ಯಂತ್ರ
ಹನುಮಾನ್ ಪೂಜಾ ವಿಧಿ
*ನೀವು ಪೂಜೆ ಮಾಡಬೇಕಾಗಿರುವ ಸ್ಥಳವನ್ನು ಶುದ್ಧ ಮಾಡಿ ಹನುಮಂತನಿಗೆ ಪೂಜೆಯನ್ನು ಅರ್ಪಿಸಿ
*ಹನುಮಂತನ ವಿಗ್ರಹವನ್ನು ನೀರಿನಿಂದ ಶುದ್ಧೀಕರಿಸಿ ನೀವು ಪೂಜೆ ಮಾಡಬೇಕಾಗಿರುವ ಸ್ಥಳಕ್ಕೆ ನೀರಿನ ಪ್ರೋಕ್ಷಣೆಯನ್ನು ಮಾಡಿ *ಕೆಂಪು ಬಟ್ಟೆಯ ಮೇಲೆ ಹನುಮಾನ್ ವಿಗ್ರಹವನ್ನು ಇರಿಸಿ
*ಹನುಮಂತನ ಮೂರ್ತಿಯ ಮೇಲೆ ಕುಂಕುಮದ ಪೇಸ್ಟ್ ಹಚ್ಚಿ
*ಅಗರ್ಬತ್ತಿ ಮತ್ತು ದೀಪವನ್ನು ಹಚ್ಚಿ
ದೇವರಿಗೆ ಹೂವು ಮತ್ತು ಹಣ್ಣು ಸಮರ್ಪಿಸಿ
ಪೂಜೆಯನ್ನು ಮಾಡುವ ಸಮಯದಲ್ಲಿ ಗಮನಿಸಬೇಕಾದ ಅಂಶಗಳು
*ಆ ದಿನ ನೀವು ತಲೆಸ್ನಾನ ಮಾಡಬೇಕು
*108 ಅಕ್ಷತೆ, 108 ವೀಳ್ಯದೆಲೆ, 108 ಹಣ್ಣುಗಳನ್ನು ಇರಿಸಿ
*ಈ ದಿನ ಸಾತ್ವಿಕ ಆಹಾರವನ್ನು ಸೇವಿಸಿ.
ಮಾಂಸಾಹಾರ ಸೇವನೆ ಬೇಡ
*ಹನುಮಂತನಿಗೆ 5 ಬಾಳೆಹಣ್ಣು ಅರ್ಪಿಸಿ
*ಈಶಾನ್ಯ ದಿಕ್ಕಿನಲ್ಲಿ ಹನುಮಂತನ ಪ್ರಾರ್ಥನೆಯನ್ನು ಮಾಡಿ ಮಂಗಳವಾರದ ವ್ರತ ವಿಧಾನ 21 ದಿನಗಳ ಕಾಲ ಸತತವಾಗಿ ಉಪವಾಸವನ್ನು ಕೈಗೊಳ್ಳಬೇಕು. ಪ್ರಾತಃ ಕಾಲದಲ್ಲಿ ಏಳಬೇಕು. ಸ್ನಾನವನ್ನು ಮಾಡಿ ಗಂಗಾಜಲವನ್ನು ಮನೆಯಲ್ಲಿ ಪ್ರೋಕ್ಷಿಸಿ ಕೆಂಪು ವಸ್ತ್ರವನ್ನು ಧರಿಸಿ. ಮೇಲೆ ತಿಳಿಸಿದ ವಿಧಾನದಲ್ಲಿ ಪೂಜೆಯನ್ನು ಮಾಡಿ.
ಪೂಜೆಯ ನಂತರ ಹನುಮಾನ್ ಚಾಲೀಸವನ್ನು ಪಠಿಸಿ 15 ನಿಮಿಷ ಧ್ಯಾನ ಮಾಡಿ ನಿಮ್ಮ ಪ್ರಾರ್ಥನೆಗಳನ್ನು ದೇವರಿಗೆ ಅರ್ಪಿಸಿ.
ಬೆಲ್ಲದಿಂದ ಮಾಡಿದ ಆಹಾರವನ್ನು ಒಂದು ಬಾರಿ ಸೇವಿಸಿ. ಸಂಜೆ ಚಾಲೀಸವನ್ನು ಪಠಿಸಿ ಮತ್ತು ವೃತವನ್ನು ಮುರಿಯುವ ಮೊದಲು ದೇವರಿಗೆ ನೈವೇದ್ಯ ಅರ್ಪಿಸಿ.
” ಪ್ರಯೋಜನಗಳು
*ಬಲ ಮತ್ತು ಶಕ್ತಿ ಸಾಧನೆ
*ಧನ ಲಾಭ ಎಲ್ಲಾ ಆರ್ಥಿಕ ಸಂಕಷ್ಟ ದೂರಾಗುತ್ತದೆ
*ನಿಮ್ಮ ಇಚ್ಛೆಯ ಕೆಲಸ ದೊರೆಯುತ್ತದೆ
*ಮಕ್ಕಳ ಭಾಗ್ಯ
*ಪಾಪ ವಿಮೋಚನೆ
*ನಿಮ್ಮ ಉದ್ಯೋಗವನ್ನು ಯಶಸ್ವಿಯಾಗಿಸುತ್ತದೆ
*ಬುದ್ಧಿವಂತಿಕೆ ಮತ್ತು ಜಾಣ್ಮೆಯನ್ನು ಹೆಚ್ಚಿಸಲು ಹುಡುಗರು
*ವ್ರತವನ್ನು ಕೈಗೊಳ್ಳಬಹುದು.
ಶನಿ ದೋಷ ನಿವಾರಣೆಗೆ ನೀವು ಹನುಮಂತನ ಪೂಜೆಯನ್ನು ಶನಿವಾರ ಮಾಡಬಹುದು. ಇನ್ನು ಮಂಗಳವಾರ ಹನುಮಂತ ದೇವರಿಗೆ ಸಿಹಿ ಇಷ್ಟವಾಗಿರುವ ಕಾರಣದಿಂದ ಕಡಲೆಹಿಟ್ಟಿನ ಲಾಡನ್ನು ಅರ್ಪಿಸಿ. ವಾನರಗಳಿಗೆ ಬಾಳೆಹಣ್ಣನ್ನು ಅರ್ಪಿಸಬಹುದು.
ವಾನರಗಳು ಪತ್ತೆಯಾಗದೆ ಇದ್ದರೆ ಹನುಮಂತನ ಮೂರ್ತಿಗೆ ಬಾಳೆಹಣ್ಣನ್ನು ಅರ್ಪಿಸಿ. ಪುರುಷರು ಈ ಮೂಲಕ ಹನುಮಂತನನ್ನು ಪೂಜಿಸಬಹುದಾಗಿದೆ.
ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…