ಮಂಗಳೂರು: ಮಂಗಳೂರನ್ನು ರಾಜ್ಯದ ಎರಡನೆ ಬೆಂಗಳೂರು ನಗರದ ರೀತಿ ಅಭಿವೃದ್ಧಿ ಮಾಡಲು ಸರಕಾರ ಬದ್ಧವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಅವರು ಶನಿವಾರ ನಗರದ ವೆಲೆನ್ಸಿಯಾ ವೃತ್ತದ ಬಳಿ ವೆಲೆನ್ಸಿಯಾ -ನಾಗನಕಟ್ಟೆ ರಸ್ತೆ ಕಾಂಕ್ರಿಟ್, ಸೇರಿದಂತೆ 3.47 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡುತ್ತಿದ್ದರು.
ಸುಸಜ್ಜಿತ ರಸ್ತೆ ಕಾಮಗಾರಿಯನ್ನು ಕ್ಲಪ್ತ ಸಮಯದಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಿರುವುದಾಗಿ ದಿನೇಶ್ ಗುಂಡೂರಾವ್ ತಿಳಿಸಿದರು.
ಇದನ್ನೂ ಓದಿ :
ಸ್ವಾಗತಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ವೆಲೆನ್ಸಿಯಾ ಪ್ರದೇಶದ ಜನರ ಬಹುದಿನದ ಬೇಡಿಕೆಯ ಪ್ರಕಾರ ಕಾಂಕ್ರಿಟ್ ರಸ್ತೆ ಯೋಜನೆ ಮಂಜೂರಾಗಿದೆ ಎಂದರು
ವೆಲೆನ್ಸಿಯಾ ಚರ್ಚ್ ನ ಸಹಾಯಕ ಧರ್ಮಗುರು ಫಾ.ಪ್ರದೀಪ್ ಶಿಲಾನ್ಯಾಸದ ಧಾರ್ಮಿಕ ವಿಧಿ ನೆರವೇರಿಸಿದರು.
ಮಾಜಿ ಶಾಸಕ ಜೆ.ಆರ್.ಲೋಬೊ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ದ.ಕ. ಜಿಲ್ಲಾಧಿಕಾರಿ ದರ್ಶನ್, ಮನಪಾ ಆಯುಕ್ತ ರವಿಚಂದ್ರ ನಾಯಕ್, ಮಾಜಿ ಮೇಯರ್ ಗಳಾದ ಹರಿನಾಥ್, ಶಶಿಧರ ಹೆಗ್ಡೆ, ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಸ್ಟ್ಯಾನಿ ಆಲ್ವಾರಿಸ್, ಆರ್.ಪದ್ಮರಾಜ್, ಶಾಹುಲ್ ಹಮೀದ್, ಮನಪಾ ಮಾಜಿ ಸದಸ್ಯ ನವೀನ್ ಡಿಸೋಜ, ಅನಿಲ್, ಪ್ರವೀಣ್ ಚಂದ್ರ ಆಳ್ವ, ವಿಶ್ವಾಸ್ ದಾಸ್, ಅಬ್ದುಲ್ ರವೂಫ್, ಲೂಯಿ ಪಿಂಟೋ, ರೊನಾಲ್ಡ್, ಅನಿಲ್ ಲೋಬೊ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ :
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…