ಬೆಂಗಳೂರು : ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ ಪ್ರದೇಶಗಳಾಗಿ ಪರಿಗಣಿಸಿ, ಸರಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸರಕಾರ ಗಂಭೀರವಾಗಿ ಪರಿಗಣಿಸಿದೆ. ಯಾವುದೇ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರತಿಸಾರಿ ಈ ರೀತಿ ಆಗುತ್ತಿದ್ದರೆ ಸುಮ್ಮನೆ ಕೂರಲು ಆಗುವುದಿಲ್ಲ. ಕಾನೂನನ್ನು ಮತ್ತಷ್ಟು ಬಿಗಿ ಮಾಡುತ್ತೇವೆ ಎಂದರು.
ಕಳೆದ ಬಾರಿ ಘಟನೆ ನಡೆದಾಗ ಪರಿಸ್ಥಿತಿ ಅರ್ಥೈಸಿಕೊಂಡು, ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಪರಿಶೀಲನೆ ಮಾಡಿ, ತಕ್ಷಣ ಜಾರಿಗೆ ಬರುವ ನಿಟ್ಟಿನಲ್ಲಿ ಸರಕಾರ ಆದೇಶ ಹೊರಡಿಸಿದೆ.
ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಕ್ರಮ ತೆಗೆದುಕೊಳ್ಳುತ್ತಾರೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ ಪ್ರದೇಶಗಳಾಗಿ ಪರಿಗಣಿಸುತ್ತೇವೆ. ಕೋಮು ಹಿಂಸೆಯನ್ನು ಹತ್ತಿಕ್ಕಲು, ಸರಕಾರ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.
ನಕ್ಸಲ್ ನಿಗ್ರಹ ಕಾರ್ಯಪಡೆಯಲ್ಲಿನ ಅರ್ಧ ಸಿಬ್ಬಂದಿಗಳನ್ನು ಕೋಮು ಹಿಂಸೆ ನಿಗ್ರಹ ಪಡೆಗೆ ನಿಯೋಜಿಸಲಾಗುವುದು. ಅವರಿಗೆ ಅಗತ್ಯ ಅಧಿಕಾರ, ಸವಲತ್ತುಗಳನ್ನು ನೀಡುತ್ತೇವೆ. ಮೂರು ಜಿಲ್ಲೆಗಳಲ್ಲಿ ಹೆಚ್ಚು ಗಮನ ಹರಿಸುತ್ತೇವೆ ಎಂದು ಹೇಳಿದರು.
ಮಂಗಳೂರಿನಲ್ಲಿ ನಡೆದ ಯುವಕನ ಹತ್ಯೆ ಪ್ರಕರಣದ ತನಿಖೆಯಲ್ಲಿ ಗಂಭೀರವಾದ ಮಾಹಿತಿ ಸಿಕ್ಕಿದೆ. ಅದರ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಜನಪ್ರತಿನಿಧಿಗಳು ಶಾಂತಿ ನೆಲೆಸುವ ನಿಟ್ಟಿನಲ್ಲಿ ಸಹಕಾರ ಮಾಡಬೇಕು. ಪ್ರಚೋದನೆ ಮಾಡಲು ಹೋದರೆ ನಿಲ್ಲಿಲು ಹೇಗೆ ಸಾಧ್ಯ. ಧಾರ್ಮಿಕ ಮುಖಂಡರೊಂದಿಗೆ ಶಾಂತಿ ಸಭೆಗಳನ್ನು ಮಾಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…