Featured

ಮಂಗಳೂರಿಗರಿಗೆ ನೈರುತ್ಯ ರೈಲ್ವೆಯಿಂದ ಡಬಲ್ ಆಘಾತ : ಇತ್ತ ವಂದೇ ಭಾರತ್ ಗೂ ಖೋತಾ, ಅತ್ತ ಗೊಮ್ಮಟೇಶ್ವರ ಎಕ್ಸ್ ಪ್ರಸ್‌ಗೂ ಕೊಕ್ಕೆ? vishwanews24

ಮಂಗಳೂರಿಗರಿಗೆ ನೈರುತ್ಯ ರೈಲ್ವೆಯಿಂದ ಡಬಲ್ ಆಘಾತ : ಇತ್ತ ವಂದೇ ಭಾರತ್ ಗೂ ಖೋತಾ, ಅತ್ತ ಗೊಮ್ಮಟೇಶ್ವರ ಎಕ್ಸ್ ಪ್ರಸ್‌ಗೂ ಕೊಕ್ಕೆ?

ಮಂಗಳೂರು: ಬೆಂಗಳೂರು ಮತ್ತು ಮಂಗಳೂರು ಮಧ್ಯೆ ವಂದೇ ಭಾರತ್ ರೈಲು ಸಂಚಾರ ಆರಂಭಿಸುವುದಾಗಿ ಸಿಹಿ ಸುದ್ದಿ ನೀಡಬೇಕಿದ್ದ ರೈಲ್ವೆ ಇಲಾಖೆ ಕರಾವಳಿಗರಿಗೆ ಡಬಲ್ ಆಘಾತವನ್ನು ನೀಡಿದೆ. ಹೆಚ್ಚಿನ ಸೌಕರ್ಯ ಕೊಡುವ ಬದಲು ಇದ್ದ ಸೌಕರ್ಯವನ್ನೂ ಕಿತ್ತುಕೊಳ್ಳುವ ಸೂಚನೆಯ ನಿರ್ಧಾರಕ್ಕೆ ಮಂಗಳೂರಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಮೊದಲನೆಯದಾಗಿ, ವಂದೇಭಾರತ್ ರೈಲು ಬೆಂಗಳೂರು ಹಾಗೂ ಮಂಗಳೂರು ಮಧ್ಯೆ ಓಡಲಿದೆಯಾದರೂ ಅದು ಮಂಗಳೂರು ನಗರಕ್ಕೆ ಬರುವುದಿಲ್ಲ. ಬದಲಿಗೆ ಪಡೀಲ್ ಮೂಲಕ ನೇರ ಗೋವಾಕ್ಕೆ ಹೋಗಲಿದೆ.ಎರಡನೆಯದಾಗಿ, ಈ ಗೋವಾಕ್ಕೆ ಹೋಗುವ ರೈಲಿನ ವೇಳಾಪಟ್ಟಿಗೋಸ್ಕರ ಹಗಲಿನಲ್ಲಿ ಬೆಂಗಳೂರು-ಮಂಗಳೂರು ಮಧ್ಯೆ ಸಾವಿರಾರು ಪ್ರಯಾಣಿಕರನ್ನು ಬೆಸೆಯುವ ಗೊಮ್ಮಟೇಶ್ವರ ಎಕ್ಸ್ ಪ್ರಸ್ (16575/16576) ವೇಳಾಪಟ್ಟಿಯನ್ನು ಬದಲಿಸಲು ನಿರ್ಧರಿಸಿದೆ. ಈ ಮೂಲಕ ಸಿಹಿಸುದ್ದಿಯ ಬದಲು ಡಬಲ್ ಶಾಕ್ ನೀಡಿದೆ.

ದಕ್ಷಿಣ ಕನ್ನಡ, ಹಾಸನ ಹಾಗೂ ಬೆಂಗಳೂರಿನ ಪ್ರಯಾಣಿಕರು ಸುಲಭವಾಗಿ ದಿನದ ಪ್ರಯಾಣದಲ್ಲಿ ರಾತ್ರಿಗೆ ಮೊದಲು ಗೊಮ¾ಟೇಶ್ವರ ಎಕ್ಸ್ ಪ್ರಸ್ ನಲ್ಲಿ ಬೆಂಗಳೂರು/ಮಂಗಳೂರು ತಲುಪುತ್ತಿದ್ದರು. ಇನ್ನು ಮುಂದೆ ಮಧ್ಯಾಹ್ನ ಪ್ರಯಾಣ ಆರಂಭಿಸಿ, ತಡರಾತ್ರಿ ಮಂಗಳೂರು/ಬೆಂಗಳೂರು ತಲುಪುವ ಸಂಭವವಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದರಿಂದ ಸಾವಿರಾರು ಪ್ರಯಾಣಿಕರಿಗೆ ಮುಖ್ಯವಾಗಿ ವಿದ್ಯಾರ್ಥಿಗಳು, ರೋಗಿಗಳು, ಉದ್ಯೋಗಿಗಳು, ಮಹಿಳೆಯರಿಗೆ ಈ ರೈಲಿನ ಅನುಕೂಲವೇ ತಪ್ಪಿಹೋಗಲಿದೆ ಎಂಬ ಆಕ್ರೋಶ ರೈಲ್ವೇ ಯಾತ್ರಿಗಳಿಂದ ವ್ಯಕ್ತವಾಗಿದೆ.

ಇದನ್ನೂ ಓದಿ:

ಪ್ರಮುಖ ನಗರಗಳಾದ ಬೆಂಗಳೂರು ಮತ್ತು ಮಂಗಳೂರು ಮಧ್ಯೆ ಜಿಲ್ಲೆಯ ಜನರು, ವಿವಿಧ ಸಂಘಟನೆಗಳ ಪ್ರಯತ್ನದ ಫಲವಾಗಿ ರಾತ್ರಿ ಹೊತ್ತು 2 ರೈಲು ಸೇವೆ ಹಾಗೂ ಹಗಲು 3 ರೈಲು ಸೇವೆ (ವಾರದಲ್ಲಿ ಮೂರು ದಿನದ ಎರಡು ರೈಲುಗಳು ಹಾಗೂ ವಾರದಲ್ಲಿ ಒಂದು ದಿನದ 1 ರೈಲು) ದೊರಕಿದ್ದವು.

2017 ರ ಎಪ್ರಿಲ್ 9 ರಂದು ಆಗಿನ ಕೇಂದ್ರ ರೈಲ್ವೆ ಮಂತ್ರಿ ಸುರೇಶ್ ಪ್ರಭು ಅವರು ಮಂಗಳೂರು ಜಂಕ್ಷನ್‌ನಿಂದ ಗೋಮಟೇಶ್ವರ ಎಕ್ಸ್‌ಪ್ರೆಸ್ ಎಂಬ ಹೆಸರಿನ ಈ ರೈಲಿಗೆ ಚಾಲನೆ ನೀಡಿದ್ದರು. ಹಿಂದೆ ರೈಲು ಸಂಖ್ಯೆ 16575 ಯಶವಂತಪುರ -ಮಂಗಳೂರು ಜಂಕ್ಷನ್ ಮಧ್ಯೆ ಗೊಮ¾ಟೇಶ್ವರ ಎಕ್ಸ್‌ಪ್ರೆಸ್ ರೈಲು ಯಶವಂತಪುರ ಜಂಕ್ಷನ್‌ನಿಂದ ಬೆಳಗ್ಗೆ7 ಕ್ಕೆ ಹೊರಟು ಮಂಗಳೂರು ಜಂಕ್ಷನ್ ಗೆ ಸಂಜೆ 4:40 ಕ್ಕೆ ತಲುಪುತ್ತಿತ್ತು. ಮರುದಿನ 16576 ರೈಲು ಬೆಳಗ್ಗೆ 11:30 ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು ರಾತ್ರಿ 8:45 ಕ್ಕೆ ಯಶವಂತಪುರ ತಲುಪಬೇಕಿತ್ತು. ಮಾರ್ಗ ಮಧ್ಯೆ ತಡವಾಗಿ ಸಂಚರಿಸುವಾಗ ನಿಗದಿತ ಸಮಯದ ಬದಲು ತಡರಾತ್ರಿ ಬೆಂಗಳೂರು ತಲುಪುತ್ತಿದ್ದುದು ಸಮಸ್ಯೆಯಾಗಿತ್ತು. ಸತತ ಒತ್ತಾಯದ ಬಳಿಕ 2024 ರಿಂದ 16576 ರೈಲು ಮಂಗಳೂರು ಜಂಕ್ಷನ್‌ನಿಂದ ಬೆಳಗ್ಗೆ 7 ಗಂಟೆಗೆ ಹೊರಟು ಸಂಜೆ 4:30ಕ್ಕೆ ಯಶವಂತಪುರ ಜಂಕ್ಷನ್ ತಲುಪುತ್ತಿದೆ.

ಈಗ ಬೆಂಗಳೂರಿನಿಂದ ಮಂಗಳೂರಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ಓಡಿಸಬೇಕೆಂಬ ಬೇಡಿಕೆ ಕಡೆಗಣಿಸಿ, ಮಂಗಳೂರು ನಗರ ಪ್ರವೇಶಿಸದೆ ಪಡೀಲ್ ಬೈಪಾಸ್ ಮೂಲಕವೇ ಬೆಂಗಳೂರಿನಿಂದ ಗೋವಾಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ಓಡಿಸುವ ಪ್ರಸ್ತಾವನೆ ರೈಲ್ವೆ ಇಲಾಖೆಯಲ್ಲಿದೆ. ಈ ರೈಲು ಓಡಿಸುವ ಸಲುವಾಗಿ ಮಂಗಳೂರು-ಬೆಂಗಳೂರು ನಡುವೆ ಪ್ರಯಾಣಿಕರು ಆಶ್ರಯಿಸಿರುವ ಗೊಮಟೇಶ್ವರ ಎಕ್ಸ್ ಪ್ರಸ್ ನ ವೇಳಾಪಟ್ಟಿಯಲ್ಲಿ ಮಾರ್ಪಾಡು ಮಾಡುತ್ತಿರುವುದಕ್ಕೆ ಕರಾವಳಿಗರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಪ್ರಸ್ತಾವಿತ ಬೆಂಗಳೂರು-ಗೋವಾ ವಂದೇ ಭಾರತ್ ಎಕ್ಸ್‌ಪ್ರೆಸ್ ಮಂಗಳೂರು ನಗರಕ್ಕೆ ಬಾರದೆ ಇದ್ದರೂ ಸಮಸ್ಯೆಯಿಲ್ಲ, ಆದರೆ ಜನಸಾಮಾನ್ಯರು ನೆಚ್ಚಿಕೊಂಡಿರುವ ರೈಲು ಸಂಖ್ಯೆ 16575/76 ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಬಾರದು ಎಂಬುದು ಕರಾವಳಿಗರ ಆಗ್ರಹ.ದ್ದಾರೆ.

ಇದನ್ನೂ ಓದಿ:

ರೈಲ್ವೇ ಮಂಡಳಿಯವರು ಈ ತೀರ್ಮಾನವನ್ನು ಮಾಡಿದ್ದರೂ, ನೈರುತ್ಯ ರೈಲ್ವೇ ಅಧಿಕಾರಿಗಳು ಯಾವುದೇ ಮಾಹಿತಿ ನೀಡಿಲ್ಲ. ನಮಗೆ ಯಾವುದೇ ವೇಳಾಪಟ್ಟಿ ಬಂದಿಲ್ಲ, ಹಾಗಾಗಿ ಈಗಲೇ ಏನೂ ಹೇಳುವಂತಿಲ್ಲ ಎನ್ನುತ್ತಾರೆ ಇಲಾಖೆಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು.

ಈ ಬಗ್ಗೆ ರೈಲ್ವೆ ಇಲಾಖೆ, ರೈಲ್ವೆ ಮಂತ್ರಿಗಳಿಗೆ ಜಿಲ್ಲೆಯ ರೈಲ್ವೆ ಪ್ರಯಾಣಿಕರ ಹಿತರಕ್ಷಣ ಸಮಿತಿಗಳು ಮನವಿ ಮಾಡಿವೆ. ಬೆಂಗಳೂರು-ಗೋವಾ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಪಡೀಲ್ ಬೈಪಾಸ್ ಮೂಲಕ ಓಡಲಿ, ಮಂಗಳೂರು ಜಂಕ್ಷನ್ ಮೂಲಕ ಬೇಕಾದರೂ ಓಡಲಿ. ಆದರೆ ಗೊಮ್ಮಟೇಶ್ವರ ಎಕ್ಸ್‌ಪ್ರೆಸ್‌ ಬಲಿಯಾಗದೆ ಇರಲಿ ಎಂದು ಪ್ರಯಾಣಿಕರು ಒತ್ತಾಯಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನಗಳು ಆರಂಭಗೊಂಡಿದ್ದು, ಒಂದು ವೇಳೆ ಗೊಮ್ಮಟೇಶ್ವರ ಎಕ್ಸ್ ಪ್ರಸ್ ರೈಲು ತಡೆ ಮೂಲಕ ಪ್ರತಿಭಟನೆಗೂ ಸಿದ್ಧ ಎಂದು ಹೇಳಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

6 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

6 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

6 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

7 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago