Featured

ಮಂಗಳೂರಿಗೆ ಇಂತಹ ಅಧಿಕಾರಿಯ ಅವಶ್ಯಕತೆ  ಇತ್ತು , ಪೊಲೀಸ್ ಕಮಿಷನರ್ ವರ್ಗಾವಣೆ ಆದೇಶವನ್ನು ಹಿಂಪಡೆಯಲು ಸರಕಾರಕ್ಕೆ ಎಸ್‌ಡಿಪಿಐ ಒತ್ತಾಯ  – Vishwanews24

ಮಂಗಳೂರು ಪೊಲೀಸ್ ಕಮಿಷನರ್ ವರ್ಗಾವಣೆಯ ಹಿಂದೆ ಕಾಣದ ಕೈಗಳ ಕೈವಾಡ:ಎಸ್‌ಡಿಪಿಐ ಆರೋಪ

ಮಂಗಳೂರು : ದಕ್ಷ ಪ್ರಾಮಾಣಿಕ ಅಧಿಕಾರಿ,ಮಾದಕ ದ್ರವ್ಯದ ವಿರುದ್ಧ ಪರಿಣಾಮಕಾರಿ ಕ್ರಮ ಕೈಗೊಂಡು ಡ್ರಗ್ಸ್ ಪೆಡ್ಲರ್ ಗಳ ಎದೆಯಲ್ಲಿ ನಡುಕ ಹುಟ್ಟಿಸಿದ್ದ ಯಾವುದೇ ಭ್ರಷ್ಟಾಚಾರ ನಡೆಸದೆ ಯಾವುದೇ ಪ್ರಚಾರ ಬಯಸದೆ ನಿಷ್ಠಾವಂತಿಗೆಯಿಂದ ಜನಪರವಾಗಿ ಕೆಲಸ ಮಾಡುತ್ತಿದ್ದ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ರನ್ನು ದಿಡೀರ್ ವರ್ಗಾವಣೆ ಮಾಡಿದ ಸರ್ಕಾರದ ನಡೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲಾ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ. ಹಾಗೂ ಅವರ ವರ್ಗಾವಣೆ ಆದೇಶವನ್ನು ಸರಕಾರ ಕೂಡಲೇ ಹಿಂಪಡೆಯಲು ಒತ್ತಾಯಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಗೊಳಿಸಿರುವ ಎಸ್‌ಡಿಪಿಐ ದ.ಕ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ರವರು ನಿಷ್ಠಾವಂತ ಅಧಿಕಾರಿಯ ವರ್ಗಾವಣೆಯ ಹಿಂದೆ ಡ್ರಗ್ಸ್ ಮಾಫಿಯಾ ಅಥವಾ ಕಾಣದ ಕೈಗಳ ಕೈವಾಡ ನಿಚ್ಚಳವಾಗಿ ಗೋಚರಿಸುತ್ತಿದೆ. ಇವರು ಮಂಗಳೂರಿನಲ್ಲಿ ಅಧಿಕಾರ ವಹಿಸಿಕೊಂಡ ನಂತರ ಯಾವುದೇ ರಾಜಕೀಯ ಪ್ರಭಾವ ಹಾಗೂ ಒತ್ತಡಗಳಿಗೆ ಮಣಿಯದೆ ನಿಷ್ಠೆಯಿಂದ ತಮ್ಮ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದರು.ಇವರು ಅಧಿಕಾರ ಪಡೆದು ಕೇವಲ ಐದೇ ತಿಂಗಳಲ್ಲೇ ಡ್ರಗ್ಸ್ ಮಾಫಿಯಾದ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು ಅಲ್ಲದೆ ಯುವ ಸಮೂಹದಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸಗಳನ್ನು ಮಾಡಿದರು.

ಅದೇ ರೀತಿ ಟ್ರಾಫಿಕ್ ವ್ಯವಸ್ಥೆ ಸುಗಮ ಗೊಳಿಸುವ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಹಲವಾರು ವಿನೂತನ ಕ್ರಮಗಳನ್ನು ಕೈಗೊಂಡಿದ್ದರು.ಕೆಲವು ದಿನಗಳ ಹಿಂದೆ ನಂತೂರಿನಲ್ಲಿ ಸಿಟಿ ಬಸ್ ನಿಂದ ನಿರ್ವಾಹಕ ಬಿದ್ದು ಮೃತಪಟ್ಟ ಘಟನೆ ನಂತರ ಖಾಸಗಿ ಬಸ್ ಚಾಲಕ ಮಾಲೀಕರಿಗೆ ಹಲವು ಕಟ್ಟುನಿಟ್ಟಿನ ಆದೇಶಗಳನ್ನು ನೀಡಿ ,ನಿರ್ವಾಹಕರು ಹಾಗೂ ಪ್ರಯಾಣಿಕರು ಫುಟ್ ಬೋರ್ಡ್ ನಲ್ಲಿ ನಿಂತು ಪ್ರಯಾಣಿಸುವುದನ್ನು ನಿಷೇಧಿಸಿ,ಬಸ್ಸುಗಳಿಗೆ ಬಾಗಿಲು ಅಳವಡಿಸಬೇಕೆಂದು ಆದೇಶವನ್ನು ಹೊರಡಿಸಿದ್ದರು.ಅದಲ್ಲದೇ ನಿನ್ನೆ ಬಜ್ಪೆಯಲ್ಲಿ ಸಂಘಪರಿವಾರದ ಗೂಂಡಗಳು ಮುಸ್ಲಿಂ ಯುವಕರಿಬ್ಬರ ಮೇಲೆ ಮಾರಣಾಂತಿಕ ದಾಳಿ ನಡೆಸಿದ ಕೆಲವೇ ಗಂಟೆಗಳಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಲ್ಲದೆ ಮಂಗಳೂರಿನಲ್ಲಿ ಅವರು ಅಧಿಕಾರ ವಹಿಸಿಕೊಂಡ ನಂತರ ಅನೈತಿಕ ಪೋಲಿಸ್ ಗಿರಿ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಪ್ರಚಾರ ರಹಿತವಾಗಿ ಹಲವಾರು ಉತ್ತಮ ಕೆಲಸಗಳನ್ನು ಮಾಡಿದ್ದರು. ಇಂತಹ ಅಧಿಕಾರಿಯ ಅವಶ್ಯಕತೆ ಮಂಗಳೂರಿಗೆ ಇತ್ತು. ಆದರೆ ಇದೀಗ ಕಾಣದ ಕೈಗಳು ಇವರನ್ನು ವರ್ಗಾವಣೆ ಮಾಡಿಸುವುದರಲ್ಲಿ ಕೆಲಸ ಮಾಡಿರುವುದು ಮೇಲ್ನೋಟಕ್ಕೆ ಗೋಚರವಾಗುತ್ತಿದೆ. ಕುಲದೀಪ್ ಜೈನ್ ರವರ ವರ್ಗಾವಣೆ ಆದೇಶವನ್ನು ಸರಕಾರ ಕೂಡಲೇ ಹಿಂಪಡೆದು ಮಂಗಳೂರು ಪೋಲಿಸ್ ಆಯುಕ್ತರಾಗಿ ಮುಂದುವರೆಯುವ ಆದೇಶ ಹೊರಡಿಸಬೇಕೆಂದು ಅನ್ವರ್ ಸಾದತ್ ಪತ್ರಿಕಾ ಪ್ರಕಟಣೆಯಲ್ಲಿ ಸರಕಾರವನ್ನು ಒತ್ತಾಯಿಸಿದ್ದಾರೆ.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

2 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

2 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

20 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago