Featured

ಮಂಗಳೂರಿಗೆ ಪ್ರಧಾನಿ ಆಗಮನ ಕಾರ್ಯಕ್ರಮ ಸಮಯ ಬದಲಾವಣೆ: ಮಧ್ಯಾಹ್ನ 1ಗಂಟೆಗೆ ಕರಾವಳಿಗೆ ಮೋದಿ – Vishwanews24

ಮಂಗಳೂರಿಗೆ ಪ್ರಧಾನಿ ಆಗಮನ ಕಾರ್ಯಕ್ರಮ ಸಮಯ ಬದಲಾವಣೆ: ಮಧ್ಯಾಹ್ನ 1ಗಂಟೆಗೆ ಕರಾವಳಿಗೆ ಮೋದಿ

ಮಂಗಳೂರು: ‘ಸೆ.2ಕ್ಕೆ ದೇಶದ ಪ್ರಧಾನಿಗಳು ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಕಾರ್ಯಕ್ರಮದ ವ್ಯತ್ಯಾಸದಲ್ಲಿ ಸ್ವಲ್ಪ ಬದಲಾವಣೆಯಾಗಿದೆ. ಈಗ ಬಂದಿರುವ ಮಾಹಿತಿಯ ಪ್ರಕಾರ ಮಧ್ಯಾಹ್ನ 1 ಗಂಟೆಗೆ ಪ್ರಧಾನಿ ಆಗಮಿಸಿ 1.15ಕ್ಕೆ ಕಾರ್ಯಕ್ರಮ ಆರಂಭವಾಗುತ್ತದೆ. ಸುಮಾರು 3ಗಂಟೆಯ ತನಕ ಕಾರ್ಯಕ್ರಮ ಇರಲಿದೆ’ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ ತಿಳಿಸಿದರು.

ಪ್ರಧಾನಿ ಕಾರ್ಯಕ್ರಮದ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು ‘ಇದು ಸರ್ಕಾರದ ಕಾರ್ಯಕ್ರಮ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಮುಂದಾಳತ್ವದಲ್ಲಿ ಮತ್ತು ನಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತದ ಮುತುವರ್ಜಿಯಿಂದ ಕೆಲಸ ಮಾಡಲಾಗುತ್ತಿದೆ.

ಸಾಕಷ್ಟು ಯೋಜನೆಗಳ ಶಿಲಾನ್ಯಾಸ, ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. 1,461 ಬಸ್‌ಗಳ ಬುಕ್ಕಿಂಗ್ ಆಗಿದೆ. 200ಕ್ಕೂ ಮಿಕ್ಕಿದ ಟೆಂಪೋ ಟ್ರಾವೆಲರ್‌ಗಳ ಬುಕ್ಕಿಂಗ್ ಆಗಿದೆ. ಇನ್ನುಂದೆ ಉಡುಪಿ ನಗರಸಭೆ ಬ್ರೋಕರ್ ಗಳಿಗೆ ನೋ ಎಂಟ್ರಿ: ರಘುಪತಿ ಖಡಕ್ ವಾರ್ನಿಂಗ್ – Vishwnaews24 

ಲಭ್ಯವಿರುವ ಮಾಹಿತಿಯ ಪ್ರಕಾರ ಸುಮಾರು 1ಲಕ್ಷಕ್ಕಿಂತಲೂ ಅಧಿಕ ಪಕ್ಷದ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಜ್ಜಾಗಿದ್ದಾರೆ.

ಭದ್ರತೆಯ ದೃಷ್ಠಿಯಿಂದ ಕಾರ್ಯಕ್ರಮ ಮುಂಚಿತವಾಗಿ ಪ್ರಾರಂಭವಾಗಲಿದೆ. ಕಾರ್ಯಕರ್ತರು 12.30 ರ ಸುಮಾರಿಗೆ ಕಾರ್ಯಕ್ರಮದ ವೆರಾಂಡವನ್ನು ತಲುಪಬೇಕು ಎಂದು ಮನವಿ ಮಾಡುತ್ತೇನೆ.

ಬಂದವರಿಗೆ ಉಪಾಹಾರದ ವ್ಯವಸ್ಥೆ ಇದೆ. ಕಾರ್ಯಕ್ರಮ ಮುಗಿದ ಬಳಿಕ ಪಾರ್ಟಿಯ ವತಿಯಿಂದ ಉಪಾಹಾರವನ್ನು ಪೊಟ್ಟಣದ ಮೂಲಕ ನಾವು ಬಸ್ಸಿಗೆ ಕೊಡಲು ನಿಶ್ಚಯಿಸಿದ್ದೇವೆ’ ಎಂದು ಹೇಳಿದರು. ಭಟ್ಕಳ : ಅಲೆಗಳ ಅಬ್ಬರಕ್ಕೆ ಸಿಲುಕಿ ಮೀನುಗಾರಿಕಾ ದೋಣಿ ಮುಳುಗಡೆ: ಓರ್ವ ನಾಪತ್ತೆ; ಇಬ್ಬರ ರಕ್ಷಣೆ – Vishwanews24

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

19 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

20 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

20 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

21 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

21 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

21 hours ago