ಮಂಗಳೂರು: ನಗರದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಮಾಹಿತಿ ತಂತ್ರಜ್ಞಾನ ಉದ್ಯಾನ (ಐಟಿ ಪಾರ್ಕ್)ದ ಕಾಮಗಾರಿಗೆ ಡಿ. 15ರಿಂದ ಬಿಡ್ ತೆರೆಯಲಾಗುತ್ತದೆ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಬಿಜೆಪಿಯ ಡಾ| ಭರತ್ ಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಅವರು, ಮಂಗಳೂರಿನ ದೇರೆಬೈಲು (ಬ್ಲೂಬೆರಿ ಹಿಲ್ಸ್ ರಸ್ತೆ) ಗ್ರಾಮದ ಸರ್ವೇ ನಂ.129.1ಎ ಮತ್ತು 113/2ರಲ್ಲಿ 3.285 ಎಕರೆಯಲ್ಲಿ ಐಟಿ ಪಾರ್ಕ್ ನಿರ್ಮಿಸಲು ಟೆಂಡರ್ ಆಹ್ವಾನಿಸಲಾಗಿದೆ. ಡಿ. 15ರಿಂದ ಬಿಡ್ ತೆರೆಯಲಾಗುವುದು ಎಂದರು.
ವಾಣಿಜ್ಯ ಕಚೇರಿ ಟೆಕ್ ಪಾರ್ಕ್ಗಾಗಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಇದನ್ನು ಕೈಗೆತ್ತಿಕೊಳ್ಳಲು ಉದ್ದೇಶಿಸಿದ್ದು, ವಿನ್ಯಾಸ, ನಿರ್ಮಾಣ, ಹಣಕಾಸು ಕಾರ್ಯಾಚರಣೆ ಮತ್ತು ವರ್ಗಾವಣೆ (ಡಿಬಿಎಫ್ಒಟಿ)ಗಾಗಿ 30 ವರ್ಷಗಳ ಗುತ್ತಿಗೆ ನೀಡಿದ್ದು, ಹೆಚ್ಚುವರಿಯಾಗಿ 30 ವರ್ಷಗಳ ಕಾಲ ಗುತ್ತಿಗೆ ಅವಧಿ ವಿಸ್ತರಿಸುವ ಅವಕಾಶವನ್ನೂ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…