Featured

ಮಂಗಳೂರಿನಲ್ಲಿ ಗಾಂಜಾ ದಂಧೆ ; ಎಂಬಿಬಿಎಸ್ ವಿದ್ಯಾರ್ಥಿಗಳು ಸೇರಿ 10 ಮಂದಿ ಬಂಧನ – Vishwanews24

ಮಂಗಳೂರಿನಲ್ಲಿ ಗಾಂಜಾ ದಂಧೆ ; ಎಂಬಿಬಿಎಸ್ ವಿದ್ಯಾರ್ಥಿಗಳು ಸೇರಿ 10 ಮಂದಿ ಬಂಧನ

ಮಂಗಳೂರು : ಅತ್ಯಂತ ಅಘಾತಕಾರಿ ಘಟನೆಯೊಂದರಲ್ಲಿ ನಗರದಲ್ಲಿ ನಡೆಯುತ್ತಿದ್ದ ಗಾಂಜಾ ದಂಧೆ ಪ್ರಕರಣದಲ್ಲಿ ಹತ್ತು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರ ಪೈಕಿ ಒಂಬತ್ತು ಮಂದಿ ವೈದ್ಯಕೀಯ ವಿದ್ಯಾರ್ಥಿಗಳಾಗಿದ್ದಾರೆ ಎನ್ನುವ ವಿಚಾರ ಕಳವಳಕಾರಿಯಾಗಿದೆ.

ಬಂಧನದ ಕುರಿತು ನಗರ ಪೊಲೀಸ್ ಕಮಿಷನರ್ ಎನ್ . ಶಶಿಕುಮಾರ್ ಅವರು ಬುಧವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ್ದು, ದೂರಿನ ಆಧಾರದ ಮೇಲೆ ನೀಲ್ ಕಿಶೋರಿಲಾಲ್ ರಾಮ್ ಜಿ ಶಾ ಎಂಬಾತನನ್ನು ಮೊದಲು ಬಂಧಿಸಲಾಗಿದೆ. ಈತ ಯುಕೆಯ ಪ್ರಜೆಯಾಗಿದ್ದು, ಎನ್ ಆರ್ ಐ ಕೋಟಾದಲ್ಲಿ ಡೆಂಟಲ್ ವಿದ್ಯಾರ್ಥಿಯಾಗಿದ್ದು ಕಳೆದ ಹದಿನೈದು ವರ್ಷಗಳಿಂದಲೂ ವಿದ್ಯಾಭ್ಯಾಸ ಮಾಡುತ್ತಿದ್ದು,ಆತನಿಗೆ ಶಿಕ್ಷಣ ಇನ್ನೂ ಪೂರ್ಣ ಗೊಳಿಸಲು ಸಾಧ್ಯವಾಗಿಲ್ಲ. ಗಾಂಜಾ ಪೆಡ್ಲರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿಸಿದ್ದಾರೆ.

ನೀಲ್ ಕಿಶೋರಿಲಾಲ್ ವಿದ್ಯಾರ್ಥಿನಿಯರು ಮತ್ತು ವೈದ್ಯರಿಗೆ ಗಾಂಜಾ ಸರಬರಾಜು ಮಾಡುತ್ತಿದ್ದು, ಸಾಕಷ್ಟು ಪೂರಕ ಸಾಕ್ಷಧಾರಗಳಿಂದ ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

ಬಂಧಿತ ಆರೋಪಿಗಳು,ಕೇರಳ ಮೂಲದ ಡಾ ಸಮೀರ್ (32), ಡಾ. ನಾಡಿಯಾ ಸಿರಾಜ್ (24), ತಮಿಳುನಾಡಿನ ಡಾ ಮಣಿಮಾರನ್ ಮುತ್ತು (28), ಆಂಧ್ರದ ಡಾ ವರ್ಷಿಣಿ ಪ್ರತಿ (26),ಚಂಡಿಘಡ,ಪಂಜಾಬ್ ನ ಡಾ ಭಾನು ಧಾಹಿಯಾ (27), ಚಂಡಿಘಡದ ಡಾ ರಿಯಾ ಚಡ್ಡಾ (22), ದೆಹಲಿಯ ಡಾ. ಕ್ಷಿತಿಜ್ ಗುಪ್ತಾ (25), ಮಹಾರಾಷ್ಟ್ರದ ಡಾ ಇರಾ ಬಸಿನ್ (23) ಮತ್ತು ಬಂಟ್ವಾಳ ಮಾರಿಪಳ್ಳದ ಮೊಹಮ್ಮದ್ ರೌಫ್ ಗೌಸ್ (34) ಎಂದು ಪೊಲೀಸರು ವಿವರಗಳನ್ನು ನೀಡಿದ್ದಾರೆ.

ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಅವರ ನೇತೃತ್ವದಲ್ಲಿ ದಾಳಿ ನಡೆಸಿ ನೀಲ್ ಕಿಶೋರಿಲಾಲ್ ರಾಮ್ ಜಿ ಶಾನನ್ನ ಮೊದಲು ಬಂಧಿಸಲಾಗಿದೆ. ಆತನ ಬಳಿ 50 ಸಾವಿರ ಮೌಲ್ಯದ 2 ಕೆಜಿ ಗಾಂಜಾ, ಮೊಬೈಲ್ ಮತ್ತು ನಗದನ್ನು ಮತ್ತು ಆಟಿಕೆ ಪಿಸ್ತೂಲನ್ನು ವಶಕ್ಕೆ ಪಡೆಯಲಾಗಿದೆ. ಆ ಬಳಿಕ ಕಾರ್ಯಾಚರಣೆ ನಡೆಸಿ ಉಳಿಸವರನ್ನು ಪಿಜಿಗಳು, ಹಾಸ್ಟೆಲ್ ಮತ್ತು ಬಾಡಿಗೆ ಮನೆಗಳಿಂದ ಬಂಧಿಸಲಾಗಿದೆ.

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

20 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

20 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago