Featured

ಮಂಗಳೂರಿನಲ್ಲಿ ಗಾಂಜಾ ದಂಧೆ ; ಎಂಬಿಬಿಎಸ್ ವಿದ್ಯಾರ್ಥಿಗಳು ಸೇರಿ 10 ಮಂದಿ ಬಂಧನ – Vishwanews24

ಮಂಗಳೂರಿನಲ್ಲಿ ಗಾಂಜಾ ದಂಧೆ ; ಎಂಬಿಬಿಎಸ್ ವಿದ್ಯಾರ್ಥಿಗಳು ಸೇರಿ 10 ಮಂದಿ ಬಂಧನ

ಮಂಗಳೂರು : ಅತ್ಯಂತ ಅಘಾತಕಾರಿ ಘಟನೆಯೊಂದರಲ್ಲಿ ನಗರದಲ್ಲಿ ನಡೆಯುತ್ತಿದ್ದ ಗಾಂಜಾ ದಂಧೆ ಪ್ರಕರಣದಲ್ಲಿ ಹತ್ತು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರ ಪೈಕಿ ಒಂಬತ್ತು ಮಂದಿ ವೈದ್ಯಕೀಯ ವಿದ್ಯಾರ್ಥಿಗಳಾಗಿದ್ದಾರೆ ಎನ್ನುವ ವಿಚಾರ ಕಳವಳಕಾರಿಯಾಗಿದೆ.

ಬಂಧನದ ಕುರಿತು ನಗರ ಪೊಲೀಸ್ ಕಮಿಷನರ್ ಎನ್ . ಶಶಿಕುಮಾರ್ ಅವರು ಬುಧವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ್ದು, ದೂರಿನ ಆಧಾರದ ಮೇಲೆ ನೀಲ್ ಕಿಶೋರಿಲಾಲ್ ರಾಮ್ ಜಿ ಶಾ ಎಂಬಾತನನ್ನು ಮೊದಲು ಬಂಧಿಸಲಾಗಿದೆ. ಈತ ಯುಕೆಯ ಪ್ರಜೆಯಾಗಿದ್ದು, ಎನ್ ಆರ್ ಐ ಕೋಟಾದಲ್ಲಿ ಡೆಂಟಲ್ ವಿದ್ಯಾರ್ಥಿಯಾಗಿದ್ದು ಕಳೆದ ಹದಿನೈದು ವರ್ಷಗಳಿಂದಲೂ ವಿದ್ಯಾಭ್ಯಾಸ ಮಾಡುತ್ತಿದ್ದು,ಆತನಿಗೆ ಶಿಕ್ಷಣ ಇನ್ನೂ ಪೂರ್ಣ ಗೊಳಿಸಲು ಸಾಧ್ಯವಾಗಿಲ್ಲ. ಗಾಂಜಾ ಪೆಡ್ಲರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿಸಿದ್ದಾರೆ.

ನೀಲ್ ಕಿಶೋರಿಲಾಲ್ ವಿದ್ಯಾರ್ಥಿನಿಯರು ಮತ್ತು ವೈದ್ಯರಿಗೆ ಗಾಂಜಾ ಸರಬರಾಜು ಮಾಡುತ್ತಿದ್ದು, ಸಾಕಷ್ಟು ಪೂರಕ ಸಾಕ್ಷಧಾರಗಳಿಂದ ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

ಬಂಧಿತ ಆರೋಪಿಗಳು,ಕೇರಳ ಮೂಲದ ಡಾ ಸಮೀರ್ (32), ಡಾ. ನಾಡಿಯಾ ಸಿರಾಜ್ (24), ತಮಿಳುನಾಡಿನ ಡಾ ಮಣಿಮಾರನ್ ಮುತ್ತು (28), ಆಂಧ್ರದ ಡಾ ವರ್ಷಿಣಿ ಪ್ರತಿ (26),ಚಂಡಿಘಡ,ಪಂಜಾಬ್ ನ ಡಾ ಭಾನು ಧಾಹಿಯಾ (27), ಚಂಡಿಘಡದ ಡಾ ರಿಯಾ ಚಡ್ಡಾ (22), ದೆಹಲಿಯ ಡಾ. ಕ್ಷಿತಿಜ್ ಗುಪ್ತಾ (25), ಮಹಾರಾಷ್ಟ್ರದ ಡಾ ಇರಾ ಬಸಿನ್ (23) ಮತ್ತು ಬಂಟ್ವಾಳ ಮಾರಿಪಳ್ಳದ ಮೊಹಮ್ಮದ್ ರೌಫ್ ಗೌಸ್ (34) ಎಂದು ಪೊಲೀಸರು ವಿವರಗಳನ್ನು ನೀಡಿದ್ದಾರೆ.

ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಅವರ ನೇತೃತ್ವದಲ್ಲಿ ದಾಳಿ ನಡೆಸಿ ನೀಲ್ ಕಿಶೋರಿಲಾಲ್ ರಾಮ್ ಜಿ ಶಾನನ್ನ ಮೊದಲು ಬಂಧಿಸಲಾಗಿದೆ. ಆತನ ಬಳಿ 50 ಸಾವಿರ ಮೌಲ್ಯದ 2 ಕೆಜಿ ಗಾಂಜಾ, ಮೊಬೈಲ್ ಮತ್ತು ನಗದನ್ನು ಮತ್ತು ಆಟಿಕೆ ಪಿಸ್ತೂಲನ್ನು ವಶಕ್ಕೆ ಪಡೆಯಲಾಗಿದೆ. ಆ ಬಳಿಕ ಕಾರ್ಯಾಚರಣೆ ನಡೆಸಿ ಉಳಿಸವರನ್ನು ಪಿಜಿಗಳು, ಹಾಸ್ಟೆಲ್ ಮತ್ತು ಬಾಡಿಗೆ ಮನೆಗಳಿಂದ ಬಂಧಿಸಲಾಗಿದೆ.

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

Vishwa News 24

Recent Posts

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ – vishwanews24

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…

50 minutes ago

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ – vishwanews24

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…

60 minutes ago

ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ – vishwanews24

ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ಬೆಂಗಳೂರು: ಚಿಕನ್ ಪ್ರಿಯರೇ ಎಚ್ಚರವಾಗೀರಿ. ರಾಜ್ಯಕ್ಕೆ H5N1 ವೈರಸ್…

2 hours ago

ಕಾಪು : ಕಾರು-ಲಾರಿ ಮಧ್ಯೆ ಭೀಕರ ಅಪಘಾತ  – ಓರ್ವ ಸಾವು, ಇಬ್ಬರು ಗಂಭೀರ – vishwanews24

ಕಾಪು : ಕಾರು-ಲಾರಿ ಮಧ್ಯೆ ಭೀಕರ ಸ್ತೆ  ಅಪಘಾತ  - ಓರ್ವ ಸಾವು, ಇಬ್ಬರು ಗಂಭೀರ ಕಾಪು: ಮಂಗಳೂರು-ಉಡುಪಿ ರಾಷ್ಟ್ರೀಯ…

3 hours ago

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ – vishwanews24

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ…

23 hours ago

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ – vishwanews24

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…

23 hours ago