ಮಂಗಳೂರು : ಅತ್ಯಂತ ಅಘಾತಕಾರಿ ಘಟನೆಯೊಂದರಲ್ಲಿ ನಗರದಲ್ಲಿ ನಡೆಯುತ್ತಿದ್ದ ಗಾಂಜಾ ದಂಧೆ ಪ್ರಕರಣದಲ್ಲಿ ಹತ್ತು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರ ಪೈಕಿ ಒಂಬತ್ತು ಮಂದಿ ವೈದ್ಯಕೀಯ ವಿದ್ಯಾರ್ಥಿಗಳಾಗಿದ್ದಾರೆ ಎನ್ನುವ ವಿಚಾರ ಕಳವಳಕಾರಿಯಾಗಿದೆ.
ಬಂಧನದ ಕುರಿತು ನಗರ ಪೊಲೀಸ್ ಕಮಿಷನರ್ ಎನ್ . ಶಶಿಕುಮಾರ್ ಅವರು ಬುಧವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ್ದು, ದೂರಿನ ಆಧಾರದ ಮೇಲೆ ನೀಲ್ ಕಿಶೋರಿಲಾಲ್ ರಾಮ್ ಜಿ ಶಾ ಎಂಬಾತನನ್ನು ಮೊದಲು ಬಂಧಿಸಲಾಗಿದೆ. ಈತ ಯುಕೆಯ ಪ್ರಜೆಯಾಗಿದ್ದು, ಎನ್ ಆರ್ ಐ ಕೋಟಾದಲ್ಲಿ ಡೆಂಟಲ್ ವಿದ್ಯಾರ್ಥಿಯಾಗಿದ್ದು ಕಳೆದ ಹದಿನೈದು ವರ್ಷಗಳಿಂದಲೂ ವಿದ್ಯಾಭ್ಯಾಸ ಮಾಡುತ್ತಿದ್ದು,ಆತನಿಗೆ ಶಿಕ್ಷಣ ಇನ್ನೂ ಪೂರ್ಣ ಗೊಳಿಸಲು ಸಾಧ್ಯವಾಗಿಲ್ಲ. ಗಾಂಜಾ ಪೆಡ್ಲರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿಸಿದ್ದಾರೆ.
ನೀಲ್ ಕಿಶೋರಿಲಾಲ್ ವಿದ್ಯಾರ್ಥಿನಿಯರು ಮತ್ತು ವೈದ್ಯರಿಗೆ ಗಾಂಜಾ ಸರಬರಾಜು ಮಾಡುತ್ತಿದ್ದು, ಸಾಕಷ್ಟು ಪೂರಕ ಸಾಕ್ಷಧಾರಗಳಿಂದ ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
ಬಂಧಿತ ಆರೋಪಿಗಳು,ಕೇರಳ ಮೂಲದ ಡಾ ಸಮೀರ್ (32), ಡಾ. ನಾಡಿಯಾ ಸಿರಾಜ್ (24), ತಮಿಳುನಾಡಿನ ಡಾ ಮಣಿಮಾರನ್ ಮುತ್ತು (28), ಆಂಧ್ರದ ಡಾ ವರ್ಷಿಣಿ ಪ್ರತಿ (26),ಚಂಡಿಘಡ,ಪಂಜಾಬ್ ನ ಡಾ ಭಾನು ಧಾಹಿಯಾ (27), ಚಂಡಿಘಡದ ಡಾ ರಿಯಾ ಚಡ್ಡಾ (22), ದೆಹಲಿಯ ಡಾ. ಕ್ಷಿತಿಜ್ ಗುಪ್ತಾ (25), ಮಹಾರಾಷ್ಟ್ರದ ಡಾ ಇರಾ ಬಸಿನ್ (23) ಮತ್ತು ಬಂಟ್ವಾಳ ಮಾರಿಪಳ್ಳದ ಮೊಹಮ್ಮದ್ ರೌಫ್ ಗೌಸ್ (34) ಎಂದು ಪೊಲೀಸರು ವಿವರಗಳನ್ನು ನೀಡಿದ್ದಾರೆ.
ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಅವರ ನೇತೃತ್ವದಲ್ಲಿ ದಾಳಿ ನಡೆಸಿ ನೀಲ್ ಕಿಶೋರಿಲಾಲ್ ರಾಮ್ ಜಿ ಶಾನನ್ನ ಮೊದಲು ಬಂಧಿಸಲಾಗಿದೆ. ಆತನ ಬಳಿ 50 ಸಾವಿರ ಮೌಲ್ಯದ 2 ಕೆಜಿ ಗಾಂಜಾ, ಮೊಬೈಲ್ ಮತ್ತು ನಗದನ್ನು ಮತ್ತು ಆಟಿಕೆ ಪಿಸ್ತೂಲನ್ನು ವಶಕ್ಕೆ ಪಡೆಯಲಾಗಿದೆ. ಆ ಬಳಿಕ ಕಾರ್ಯಾಚರಣೆ ನಡೆಸಿ ಉಳಿಸವರನ್ನು ಪಿಜಿಗಳು, ಹಾಸ್ಟೆಲ್ ಮತ್ತು ಬಾಡಿಗೆ ಮನೆಗಳಿಂದ ಬಂಧಿಸಲಾಗಿದೆ.
ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.
ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…
ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…
ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…
ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…
ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್ನಿಂದ…
ಪುತ್ತೂರು: ಡಿವೈಡರ್ ಗೆ ಬೈಕ್ ಡಿಕ್ಕಿ ; ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್ಗಳ…