ಮಂಗಳೂರು : ಭಾಷೆಯನ್ನು ಕಲಿಯುವುದರಿಂದ ನಾಡಿನ ಸಂಸ್ಕೃತಿಯ ಪರಿಚಯ ಆಗುವುದು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪುಸ್ತಕ ಬಹುಮಾನ ಪಡೆದಿರುವ ಖ್ಯಾತ ಸಾಹಿತಿ, ನ್ಯೂ ಇಂಡಿಯಾ ಅಶ್ಯುರೆನ್ಸ್ ಕಂಪೆನಿಯ ಅಧಿಕಾರಿ ಕೇಶವ ಕುಡ್ಲ ಅವರು ಹೇಳಿದರು.
ತುಳು ಸಾಹಿತ್ಯ ಆಶ್ರಯದಲ್ಲಿ ತುಳು ಭಾಷಾ ಕಲಿಕಾ ತರಗತಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು ತಾನು ಮೂಲತಃ ಹಾಸನ ಜಿಲ್ಲೆಯವರಾಗಿದ್ದು 25 ವರ್ಷಗಳ ಹಿಂದೆ ಉದ್ಯೋಗ ನಿಮಿತ್ತವಾಗಿ ಬಂದು ತುಳುಭಾಷೆ ಕಲಿತು ಇಂದು ತುಳುನಾಡಿನವನೇ ಆಗಿದ್ದೇನೆ ಎಂದು ಹೇಳಿದರು. ತುಳುವರು ಹೊರಜಿಲ್ಲೆ – ಹೊರನಾಡಿನವರೊಂದಿಗೆ ಪ್ರೀತಿಯಿಂದ ಬೆರೆಯುತ್ತಾರೆ. ನಿರಂತರವಾಗಿ ತುಳು ಮಾತನಾಡುವುದರಿಂದ ಎಲ್ಲರಿಗೂ ತುಳುಭಾಷೆ ಕಲಿಯಲು ಸಾಧ್ಯ ಎಂದರು.
ಭಾಷೆಯನ್ನು ಕಲಿಯುವುದರ ಜತೆ ಇಲ್ಲಿಯ ಕಲೆ, ಸಂಸ್ಕೃತಿ, ಆರಾಧನೆ, ಆಚರಣೆಯ ಬಗ್ಗೆ ತಿಳಿದುಕೊಳ್ಳಬೇಕು. ಯಕ್ಷಗಾನ, ದೈವಾರಾಧನೆ, ಸಿರಿ ಜಾತ್ರೆ ಮೊದಲಾದ ಕಡೆಗಳಲ್ಲಿ ತುಳುಭಾಷೆಯ ಅರಾಧತೆಯ ಅರಿವು ಆಗುವುದು ಎಂದು ಕೇಶವ ಕುಡ್ಲ ನೀಡಿದರು.
ಮೂಡಬಿದ್ರೆಯ ಧವಳಾ ಕಾಲೇಜಿನ ಗ್ರಂಥಾಲಯ ಸಹಾಯಕ, ಸಾಹಿತಿ ಕೊಟ್ರಯ್ಯ ಐ. ಎಂ ಅವರು ತುಳುವಿನಲ್ಲಿ ಗ್ರಂಥರಚನೆಯ ಬಗ್ಗೆ ಮಾಹಿತಿ ನೀಡಿದರು. ದಾವಣಗೆರೆಯಿಂದ ಬಂದು ತುಳುನಾಡಿನ ತುಳುಭಾಷೆ ಕಲಿತು ತುಳು ನಿಘಂಟು ರಚಿಸುವಲ್ಲಿ ಹಲವು ತುಳುವರು ಸಹಕಾರ ನೀಡಿದ್ದಾರೆ ಎಂದು ಹೇಳಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎ.ಸಿ. ಭಂಡಾರಿಯವರು ಅಧ್ಯಕ್ಷತೆವಹಿಸಿದ್ದರು. ತುಳುವೇತರರಿಗೆ ತುಳುಭಾಷೆ ಕಲಿಕೆ ಹಾಗೂ ತುಳು ಲಿಪಿ ಕಲಿಕೆಗೆ ಅಕಾಡೆಮಿ ವಿಶೇಷ ಪ್ರಯತ್ನ ಮಾಡುತ್ತಿದ್ದೆ. ತುಳುನಾಡಿಗೆ ಉದ್ಯೋಗ ನಿಮಿತ್ತವಾಗಿ ಬಂದಿರುವ ಹೊರಜಿಲ್ಲೆಯವರಿಗೆ ವ್ಯವಹಾರ ಸುಲಭವಾಗಲು ಇಂತಹ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಹೇಳಿದರು. ಅಕಾಡೆಮಿ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಅಕಾಡೆಮಿ ಸದಸ್ಯ ಎ. ಶಿವಾನಂದ ಕರ್ಕೇರ ಸ್ವಾಗತಿಸಿದರು. ಸುಧಾನಾಗೇಶ್ ವಂದಿಸಿದರು. ತುಳು ಲಿಪಿ ಶಿಕ್ಷಕಿ ವಿದ್ಯಾಶ್ರೀ ಎಸ್ ಕಾರ್ಯಕ್ರಮ ನಿರೂಪಿಸಿದರು.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…