ದಕ್ಷಿಣ ಕನ್ನಡ

ಮಂಗಳೂರಿನಲ್ಲಿ ತುಳು ಭಾಷಾ ಕಲಿಕಾ ತರಗತಿ ಉದ್ಘಾಟನೆ

ಮಂಗಳೂರು : ಭಾಷೆಯನ್ನು ಕಲಿಯುವುದರಿಂದ ನಾಡಿನ ಸಂಸ್ಕೃತಿಯ ಪರಿಚಯ ಆಗುವುದು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪುಸ್ತಕ ಬಹುಮಾನ ಪಡೆದಿರುವ ಖ್ಯಾತ ಸಾಹಿತಿ, ನ್ಯೂ ಇಂಡಿಯಾ ಅಶ್ಯುರೆನ್ಸ್ ಕಂಪೆನಿಯ ಅಧಿಕಾರಿ ಕೇಶವ ಕುಡ್ಲ ಅವರು ಹೇಳಿದರು.

ತುಳು ಸಾಹಿತ್ಯ ಆಶ್ರಯದಲ್ಲಿ ತುಳು ಭಾಷಾ ಕಲಿಕಾ ತರಗತಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು ತಾನು ಮೂಲತಃ ಹಾಸನ ಜಿಲ್ಲೆಯವರಾಗಿದ್ದು 25 ವರ್ಷಗಳ ಹಿಂದೆ ಉದ್ಯೋಗ ನಿಮಿತ್ತವಾಗಿ ಬಂದು ತುಳುಭಾಷೆ ಕಲಿತು ಇಂದು ತುಳುನಾಡಿನವನೇ ಆಗಿದ್ದೇನೆ ಎಂದು ಹೇಳಿದರು. ತುಳುವರು ಹೊರಜಿಲ್ಲೆ – ಹೊರನಾಡಿನವರೊಂದಿಗೆ ಪ್ರೀತಿಯಿಂದ ಬೆರೆಯುತ್ತಾರೆ. ನಿರಂತರವಾಗಿ ತುಳು ಮಾತನಾಡುವುದರಿಂದ ಎಲ್ಲರಿಗೂ ತುಳುಭಾಷೆ ಕಲಿಯಲು ಸಾಧ್ಯ ಎಂದರು.

ಭಾಷೆಯನ್ನು ಕಲಿಯುವುದರ ಜತೆ ಇಲ್ಲಿಯ ಕಲೆ, ಸಂಸ್ಕೃತಿ, ಆರಾಧನೆ, ಆಚರಣೆಯ ಬಗ್ಗೆ ತಿಳಿದುಕೊಳ್ಳಬೇಕು. ಯಕ್ಷಗಾನ, ದೈವಾರಾಧನೆ, ಸಿರಿ ಜಾತ್ರೆ ಮೊದಲಾದ ಕಡೆಗಳಲ್ಲಿ ತುಳುಭಾಷೆಯ ಅರಾಧತೆಯ ಅರಿವು ಆಗುವುದು ಎಂದು ಕೇಶವ ಕುಡ್ಲ ನೀಡಿದರು.

ಮೂಡಬಿದ್ರೆಯ ಧವಳಾ ಕಾಲೇಜಿನ ಗ್ರಂಥಾಲಯ ಸಹಾಯಕ, ಸಾಹಿತಿ ಕೊಟ್ರಯ್ಯ ಐ. ಎಂ ಅವರು ತುಳುವಿನಲ್ಲಿ ಗ್ರಂಥರಚನೆಯ ಬಗ್ಗೆ ಮಾಹಿತಿ ನೀಡಿದರು. ದಾವಣಗೆರೆಯಿಂದ ಬಂದು ತುಳುನಾಡಿನ ತುಳುಭಾಷೆ ಕಲಿತು ತುಳು ನಿಘಂಟು ರಚಿಸುವಲ್ಲಿ ಹಲವು ತುಳುವರು ಸಹಕಾರ ನೀಡಿದ್ದಾರೆ ಎಂದು ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎ.ಸಿ. ಭಂಡಾರಿಯವರು ಅಧ್ಯಕ್ಷತೆವಹಿಸಿದ್ದರು. ತುಳುವೇತರರಿಗೆ ತುಳುಭಾಷೆ ಕಲಿಕೆ ಹಾಗೂ ತುಳು ಲಿಪಿ ಕಲಿಕೆಗೆ ಅಕಾಡೆಮಿ ವಿಶೇಷ ಪ್ರಯತ್ನ ಮಾಡುತ್ತಿದ್ದೆ. ತುಳುನಾಡಿಗೆ ಉದ್ಯೋಗ ನಿಮಿತ್ತವಾಗಿ ಬಂದಿರುವ ಹೊರಜಿಲ್ಲೆಯವರಿಗೆ ವ್ಯವಹಾರ ಸುಲಭವಾಗಲು ಇಂತಹ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಹೇಳಿದರು. ಅಕಾಡೆಮಿ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಅಕಾಡೆಮಿ ಸದಸ್ಯ ಎ. ಶಿವಾನಂದ ಕರ್ಕೇರ ಸ್ವಾಗತಿಸಿದರು. ಸುಧಾನಾಗೇಶ್ ವಂದಿಸಿದರು. ತುಳು ಲಿಪಿ ಶಿಕ್ಷಕಿ ವಿದ್ಯಾಶ್ರೀ ಎಸ್ ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

5 minutes ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

11 minutes ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

16 minutes ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

23 minutes ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

33 minutes ago

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

21 hours ago