Featured

ಮಂಗಳೂರಿನಲ್ಲಿ ದೇಶದ 2ನೇ ರಾಷ್ಟ್ರೀಯ ಆಯುಷ್‌ ಕ್ರೀಡಾ ಔಷಧ ಕೇಂದ್ರ ; ಕ್ರೀಡಾಪಟುಗಳಿಗೆ ಆಯುಷ್‌ ಚಿಕಿತ್ಸಾ ಸ್ಪರ್ಶ – Vishwanews24

ಮಂಗಳೂರಿನಲ್ಲಿ ದೇಶದ 2ನೇ ರಾಷ್ಟ್ರೀಯ ಆಯುಷ್‌ ಕ್ರೀಡಾ ಔಷಧ ಕೇಂದ್ರ ; ಕ್ರೀಡಾಪಟುಗಳಿಗೆ ಆಯುಷ್‌ ಚಿಕಿತ್ಸಾ ಸ್ಪರ್ಶ – Vishwanews24

ಮಂಗಳೂರು: ರಾಷ್ಟ್ರೀಯ ಆಯುಷ್‌ ಅಭಿಯಾನ ಯೋಜನೆಯಡಿ ಮಂಗಳೂರಿನಲ್ಲಿ ಕ್ರೀಡಾಪಟುಗಳಿಗಾಗಿಯೇ ಪ್ರತ್ಯೇಕ ರಾಷ್ಟ್ರೀಯ ಆಯುಷ್‌ ಕ್ರೀಡಾ ಔಷಧ ಕೇಂದ್ರ (ಆಯುಷ್‌ ಸ್ಪೋರ್ಟ್ಸ್ ಮೆಡಿಸಿನ್‌ ಸೆಂಟರ್‌) ಶೀಘ್ರದಲ್ಲೇ ಆರಂಭವಾಗಲಿದೆ.

ಇದು ರಾಜ್ಯದ ಮೊದಲ ಮತ್ತು ದೇಶದ ಎರಡನೇ ಕೇಂದ್ರವಾಗಲಿದೆ. ಕೇರಳದ ತ್ರಿಶೂರ್‌ನಲ್ಲಿ ಈಗಾಗಲೇ ಇಂಥ ಕೇಂದ್ರವೊಂದು ಕಾರ್ಯಾರಂಭ ಮಾಡಿದೆ.

ರಾಷ್ಟ್ರೀಯ ಆಯುಷ್‌ ಕ್ರೀಡಾ ಔಷಧ ಕೇಂದ್ರ ಆರಂಭಕ್ಕೆ ಜಿಲ್ಲಾ ಆಯುಷ್‌ ಇಲಾಖೆ ಸಲ್ಲಿಸಿದ ಪ್ರಸ್ತಾವಕ್ಕೆ ಕೇಂದ್ರ ಆಯುಷ್‌ ಸಚಿವಾಲಯವು ಹಸಿರು ನಿಶಾನೆ ನೀಡಿದೆ. ಇದಕ್ಕಾಗಿ ₹2.50 ಕೋಟಿ ಅನುದಾನ ಬಿಡುಗಡೆ ಆದೇಶವೂ ಬಂದಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಈ ಕೇಂದ್ರ ಕಾರ್ಯ ನಿರ್ವಹಿಸಲಿದೆ. ಇದು ಕ್ರೀಡಾಪಟುಗಳಿಗಾಗಿಯೇ ಇರುವ ಕೇಂದ್ರವಾಗಿದ್ದು, ಅವರ ದೈಹಿಕ ಕ್ಷಮತೆ (ಫಿಟ್‌ನೆಸ್) ಕಾಪಾಡುವುದು ಮತ್ತು ರೋಗನಿರೋಧಕ ಶಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿದೆ. ಕ್ರೀಡಾಪಟುಗಳ ಕಾರ್ಯಕ್ಷಮತೆ ಹಾಗೂ ಆತ್ಮವಿಶ್ವಾಸ ಹೆಚ್ಚಿಸಿ, ಉತ್ತಮ ಸಾಧನೆ ಮಾಡಲು ನೆರವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಕ್ರೀಡಾಪಟುಗಳ ಆರೋಗ್ಯ ರಕ್ಷಣೆಗೆ ಬೇಕಾದ ಮಾಹಿತಿ, ಮಾರ್ಗದರ್ಶನ, ಅನುಸರಿಸಬೇಕಾದ ದಿನಚರಿ ಸೇರಿದಂತೆ ವಿವಿಧ ಮಾಹಿತಿಗಳನ್ನು ತಜ್ಞ ವೈದ್ಯರು ನೀಡುವರು. ಆಹಾರ ಕ್ರಮ, ಅಭ್ಯಾಸ, ದೈಹಿಕ, ಮಾನಸಿಕ ಆರೋಗ್ಯ ಕಾಪಾಡುವುದು ಈ ಕೇಂದ್ರದ ಹೊಣೆ ಆಗಿದೆ. ಮಂಗಳೂರಿನ ಹ್ಯಾಟ್‌ಹಿಲ್‌ ಆಯುಷ್‌ ಕೇಂದ್ರ ಅಥವಾ ವೆನ್ಲಾಕ್‌ ಆಯುಷ್‌ ಆಸ್ಪತ್ರೆ ವಿಭಾಗದಲ್ಲಿ ಶೀಘ್ರವೇ ಕೇಂದ್ರ ಕಾರ್ಯಾರಂಭ ಮಾಡಲಿದೆ.

ಆಯುರ್ವೇದ, ಯುನಾನಿ, ಹೋಮಿಯೊಪಥಿ ವೈದ್ಯರು ಫಿಸಿಯೊಥೆರಪಿಸ್ಟ್ ಹಾಗೂ ಆಪ್ತ ಸಮಾಲೋಚಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಸೂಚನೆ ನೀಡಿದೆ. ಆಯುರ್ವೇದ ಪದ್ಧತಿಯ ಡಯಟ್‌ ಜತೆಗೆ ಬೇರೆ ಬೇರೆ ಪದ್ಧತಿಯ ಔಷಧಗಳೂ ಲಭ್ಯವಾಗಲಿವೆ. ಕ್ರೀಡಾಪಟುಗಳು ಗಾಯಗೊಂಡರೆ, ಚಿಕಿತ್ಸಾ ಸೌಲಭ್ಯ ಈ ಕೇಂದ್ರದಲ್ಲಿ ಲಭ್ಯವಿರುತ್ತದೆ ಎಂದು ಜಿಲ್ಲಾ ಆಯುಷ್‌ ಅಧಿಕಾರಿ ಡಾ. ಇಕ್ಬಾಲ್‌ ಹೇಳಿದರು.

‘ಎಲ್ಲ ಥೆರಪಿ, ಚಿಕಿತ್ಸೆ ಲಭ್ಯ’

‘ಎರಡು ವರ್ಷಗಳಿಂದ ಪಟ್ಟ ಶ್ರಮಕ್ಕೆ ಫಲ ಸಿಕ್ಕಿದೆ. ಜಿಲ್ಲೆಯ ಸಂಸದ ಹಾಗೂ ಶಾಸಕರ ಪ್ರಯತ್ನದಿಂದ ಮಂಗಳೂರಿಗೆ ಈ ಕೇಂದ್ರ ಮಂಜೂರಾಗಿದೆ. ಬೇರೆ ರಾಜ್ಯಗಳ ಕ್ರೀಡಾಪಟುಗಳೂ ಇಲ್ಲಿ ಚಿಕಿತ್ಸೆ ಪಡೆಯಬಹುದು. ಕಟ್ಟಡ, ಸಿಬ್ಬಂದಿ ನೇಮಕಾತಿ, ಸಂಬಳ, ಸೇರಿದಂತೆ ಮೂಲಸೌಕರ್ಯಗಳಿಗೆ ಸರ್ಕಾರ ₹2.50 ಕೋಟಿ ಅನುದಾನ ನೀಡಿದೆ. ಇನ್ನೂ ಅನುದಾನ ಬಿಡುಗಡೆ ಆಗಲಿದೆ.

ಪಂಚಕರ್ಮ, ಯುನಾನಿ, ನ್ಯಾಚುರೋಪತಿ ವಿವಿಧ ಥೆರಪಿಗಳು ಈ ಕೇಂದ್ರದಲ್ಲಿ ಸಿಗಲಿವೆ. ಬೇರೆ ಬೇರೆ ಕ್ರೀಡಾಪಟುಗಳನ್ನು ಆಹ್ವಾನಿಸಿ ಅವರು ಯಾವ ಚಿಕಿತ್ಸಾ ಕ್ರಮಗಳನ್ನು ಇಷ್ಟ ಪಡುತ್ತಾರೆ ಎಂಬುದನ್ನು ನೋಡಿಕೊಂಡು, ಅಂತಹ ಕ್ರಮವನ್ನು ಅನುಸರಿಸುತ್ತೇವೆ ಎಂದು ಜಿಲ್ಲಾ ಅಯುಷ್‌ ಅಧಿಕಾರಿ ಡಾ. ಇಕ್ಬಾಲ್‌ ಹೇಳಿದರು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

6 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

7 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

7 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

10 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

10 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

11 hours ago