Featured

ಮಂಗಳೂರಿನಲ್ಲಿ ನಮ್ಮ ಕುಡ್ಲ ಟಾಕೀಸ್ ಆರಂಭ : ಇನ್ನು ಮನೆಯಲ್ಲೇ ಕುಳಿತು ಹೊಸ ತುಳು ಸಿನಿಮಾ ನೋಡುವ ಅವಕಾಶ -Vishwanews24

ಮಂಗಳೂರಿನಲ್ಲಿ ನಮ್ಮ ಕುಡ್ಲ ಟಾಕೀಸ್ ಆರಂಭ : ಇನ್ನು ಮನೆಯಲ್ಲೇ ಕುಳಿತು ಹೊಸ ತುಳು ಸಿನಿಮಾ ನೋಡುವ ಅವಕಾಶ -Vishwanews24

ಮಂಗಳೂರು : ಅಂತರಾಷ್ಟ್ರೀಯ ಮಾರುಕಟ್ಟೆ ಇರುವ ಓಟಿಟಿ ಪ್ಲ್ಯಾಟ್ ಫಾರಂಗಳಿಗೆ ಪೈಪೋಟಿ ನೀಡಲು ಕರಾವಳಿಯಲ್ಲಿ ಹೊಸ ವೇದಿಕೆಯೊಂದು ಸದ್ದಿಲ್ಲದೆ ತಯಾರಾಗುತ್ತಿದ್ದು, ತುಳು ಸಿನೆಮಾಗಳನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮುನ್ನವೇ ಮನೆಯಲ್ಲೇ ಕುಳಿತು ಇಂಟರನೆಟ್ ಇಲ್ಲದೆ ಕೇಬಲ್ ಮೂಲಕ ನೋಡುವ ಹೊಸ ವೇದಿಕೆ ತಯಾರಾಗುತ್ತಿದೆ.

ಸೀಮಿತ ಮಾರುಕಟ್ಟೆ ಹೊಂದಿರುವ ತುಳು ಚಿತ್ರರಂಗಕ್ಕೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿರುವ ಥಿಯೇಟರ್‌ಗಳೇ ಮುಖ್ಯ ಆದರೆ ಸದ್ಯ ಕರಾವಳಿಯಲ್ಲಿರುವ ಸಿನೆಮಾ ಮಂದಿರಗಳು ಮಾಲ್ ಗಳಾಗಿ ಪರಿವರ್ತನೆ ಹೊಂದುತ್ತಿದ್ದು, ತುಳು ಚಿತ್ರೋದ್ಯಮಕ್ಕೆ ಭಾರಿ ಹೊಡೆತ ನೀಡಿದೆ.

ಮುಂಬೈ:ಕೋವಿಡ್‌ 19 ನಿಯಮಗಳನ್ನು ಪಾಲಿಸದಿದ್ದರೆ ಮತ್ತೆ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡಲಾಗುವುದು : ಉದ್ಧವ್‌ ಠಾಕ್ರೆ -Vishwanews24

ಈ ಹಿನ್ನಲೆ ತುಳುಚಿತ್ರರಂಗದ ಉಳುವಿಗಾಗಿ ಕರಾವಳಿಯ ಸ್ಥಳೀಯ ಚಾನೆಲ್ ನಮ್ಮ ಕುಡ್ಲ ತಂಡವು ತುಳು ಸಿನಿಮಾಗಳನ್ನು ಜನರಿಗೆ ತಲುಪಿಸಲು ಹೊಸ ವೇದಿಕೆಯಲ್ಲಿ ಸೃಷ್ಟಿಸಿದೆ. ಪ್ರಸ್ತುತ ಕೋಸ್ಟಲ್‌ವುಡ್‌ ಎದುರಿಸುತ್ತಿರುವ ಸಮಸ್ಯೆ, ಸವಾಲುಗಳನ್ನು ಅರಿತುಕೊಂಡು ಕರ್ಕೇರ ಸಹೋದರರ ‘ನಮ್ಮ ಕುಡ್ಲ’ ತಂಡವು ಹೊಸ ಭರವಸೆಯನ್ನು ಹುಟ್ಟಿಹಾಕಿದೆ. ಇದೀಗ ‘ನಮ್ಮ ಕುಡ್ಲ ಟಾಕೀಸ್‌’ ಎಂಬ ಹೊಸ ಪರಿಕಲ್ಪನೆಯನ್ನು ಮಾರ್ಚ್‌ನಲ್ಲಿ ಪರಿಚಯಿಸಲಿದೆ. ಚಿತ್ರಮಂದಿರದಲ್ಲಿ ಬಿಡುಗಡೆಯಾಗುವ ಮುಂಚೆಯೇ ತುಳು ಸಿನಿಮಾವನ್ನು ಮನೆಯಲ್ಲಿಯೇ ಕುಟುಂಬದೊಂದಿಗೆ ವೀಕ್ಷಿಸಲು ಅವಕಾಶ ಸಿಗಲಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮಾರ್ಚ್‌ ಮೊದಲ ಭಾನುವಾರವೇ ಹೊಸ ತುಳು ಸಿನಿಮಾವನ್ನು ಕಣ್ತುಂಬಿಕೊಳ್ಳಬಹುದಾಗಿದೆ.

ಮಂಗಳೂರು: ಎ‌.ಜೆ ಆಸ್ಪತ್ರೆ ಹಾಗೂ ಯೆನೆಪೋಯ ಆಸ್ಪತ್ರೆ ಮಾಲೀಕರ ಮನೆ ಮೇಲೆ ಐಟಿ ದಾಳಿ -Vishwanews24

ನಿರ್ಮಾಪಕರು ಬೇಡಿಕೆಯಿಟ್ಟ ಸೆನ್ಸಾರ್‌ ಆದ ಚಿತ್ರಗಳನ್ನು 8 ತಜ್ಞರ ತಂಡ ವೀಕ್ಷಣೆ ಮಾಡಿ, ಗುಣಮಟ್ಟವನ್ನು ಪರಿಶೀಲಿಸುತ್ತದೆ. ಆ ತಂಡವು ಗ್ರೀನ್‌ ಸಿಗ್ನಲ್‌ ನೀಡಿದ ಬಳಿಕ ಚಿತ್ರತಂಡದ ಜತೆ ಒಪ್ಪಂದ ಮಾಡಲಾಗುತ್ತದೆ. ಬಳಿಕ ಒಂದು ತಿಂಗಳ ಮಟ್ಟಿಗೆ ಅದರ ಪ್ರಸಾರದ ಹಕ್ಕನ್ನು ಪಡೆಯುತ್ತೇವೆ. ಅದಕ್ಕೆ ನಿರ್ದಿಷ್ಟ ಹಣವನ್ನು ಚಿತ್ರತಂಡಕ್ಕೆ ನೀಡುತ್ತೇವೆ. ಆ ಸಿನಿಮಾವನ್ನು ಪ್ರತಿ ಭಾನುವಾರ ಮಧ್ಯಾಹ್ನ, ಸಂಜೆ, ರಾತ್ರಿ ಮೂರು ಶೋನಲ್ಲಿ ‘ನಮ್ಮ ಕುಡ್ಲ ಟಾಕೀಸ್‌’ ವಾಹಿನಿಯಲ್ಲಿ ಪ್ರಸಾರ ಮಾಡುತ್ತೇವೆ. ಒಂದು ತಿಂಗಳಲ್ಲಿ ನಾಲ್ಕು ಭಾನುವಾರದಂತೆ ಒಟ್ಟು 12 ಶೋ ಪ್ರಸಾರವಾಗಲಿದೆ. ಗ್ರಾಹಕರು ಕೇಬಲ್ ಆಪರೇಟರ್‌ ಮೂಲಕ ₹ 120 ಪಾವತಿಸಿ, ಸಂಪರ್ಕ ಪಡೆಯಬಹುದು. ಎಚ್‌ಡಿ ಸಂಪರ್ಕಕ್ಕೆ ₹ 160 ನಿಗದಿ ಮಾಡಲಾಗಿದೆ. ಥಿಯೇಟರ್‌ನಲ್ಲಿರುವಂತೆ ಚಿತ್ರದ ಆರಂಭದಲ್ಲಿ, ಮಧ್ಯಂತರದಲ್ಲಿ ಮಾತ್ರ ಜಾಹೀರಾತು ಇರುತ್ತದೆ.

ಬಾಲ ಕಾರ್ಮಿಕರನ್ನು ನೇಮಿಸಿಕೊಂಡಲ್ಲಿ ಅಂತವರಿಗೆ ಎರಡು ವರ್ಷ ಜೈಲು : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

Vishwa News 24

Recent Posts

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ – vishwanews24

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್‌ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…

1 hour ago

ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ – vishwanews24

ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…

2 hours ago

ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ – vishwanews24

‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್…

2 hours ago

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ – vishwanews24

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…

2 hours ago

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ನ ಆಹಾರ ಪರವಾನಗಿ ಅಮಾನತು – vishwanews24

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…

2 hours ago

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

3 hours ago