ಮಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಮಾಡಿದರು.
ನಗರದ ಕೇಂದ್ರ ಮೈದಾನದಲ್ಲಿ ಬಿಜೆಪಿ ಪಕ್ಷದ ಲೋಕಸಭಾ ಚುನಾವಣೆಯ ಪ್ರಚಾರದ ಬೃಹತ್ ಬಹಿರಂಗ ’ಸಂಕಲ್ಪ ಸಮಾವೇಶ ’ ಆರಂಭಗೊಂಡಿದ್ದು ಪ್ರಧಾನಿ ” ನಿಮ್ಮ ಚೌಕಿದಾರ್ ನರೇಂದ್ರ ಮೋದಿಯ ನಮಸ್ಕಾರಗಳು ” ಎಂದು ಕನ್ನಡದಲ್ಲಿ ಹೇಳಿ ಮಾತು ಆರಂಭಿಸಿದ ಮೋದಿ ಇಡೀ ಮಂಗಳೂರು ನಗರ ಕೇಸರಿಮಯವಾಗಿದ್ದು ಜನರ ಪ್ರೀತಿಗೆ ನಾನು ಆಭಾರಿ ಎಂದು ಹೇಳಿದರು.
ವಿಶ್ವ ವೇದಿಕೆಯಲ್ಲಿ ಭಾರತದ ಧ್ವನಿ ಗಟ್ಟಿಗೊಳ್ಳುತ್ತಿದ್ದು, ಇದಕ್ಕೆ ಪ್ರತಿಯೊಬ್ಬ ಮತದಾರನಿಗೂ ಧನ್ಯವಾದ ಅರ್ಪಿಸುವುದಾಗಿ ಪ್ರಧಾನಿ ಮೋದಿ ಹೇಳಿದರು.
21ನೇ ಶತಮಾನದ ಬಳಿಕ ನವಭಾರತದ ಚಹರೆ ಹೇಗಿರಬೇಕು ಎಂಬುದನ್ನು ನಿರ್ಧರಿಸಲು 2019ರ ಲೋಕಸಭೆ ಚುನಾವಣೆ ಅತ್ಯಂತ ಮಹತ್ವದ್ದು ಎಂದು ಮೋದಿ ಬಣ್ಣಿಸಿದರು.
ರಾಜ್ಯದ ಕಾಂಗ್ರೆಸ್-ಜೆಡಿಎಸ್ ಪರಿವಾರವಾದದ ರಾಜಕಾರಣ ಮಾಡಿದರೆ, ಬಿಜೆಪಿ ರಾಷ್ಟ್ರವಾದದ ರಾಜಕಾರಣ ಮಾಡುತ್ತದೆ ಎಂದು ಮೋದಿ ಮೈತ್ರಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಕುಟುಂಬ ಸದಸ್ಯರನ್ನೆಲ್ಲಾ ಚುನಾವಣೆಗೆ ನಿಲ್ಲಿಸಿರುವ ಕಾಂಗ್ರೆಸ್-ಜೆಡಿಎಸ್ ಗೆ , ಓರ್ವ ಚಾಯ್ ವಾಲಾ ಪ್ರಧಾನಿಯಾಗಿರುವುದನ್ನು ನೋಡಲಾಗುತ್ತಿಲ್ಲ ಎಂದು ಪ್ರಧಾನಿ ಹರಿಹಾಯ್ದರು.
ತುಷ್ಠೀಕರಣವನ್ನೇ ರಾಜಕಾರಣದ ಅಡಿಪಾಯ ಮಾಡಿಕೊಂಡಿರುವ ಕಾಂಗ್ರೆಸ್-ಜೆಡಿಎಸ್ ಗೆ ವಿರುದ್ಧವಾಗಿ ಬಿಜೆಪಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಡಿಪಾಯದ ಮೇಲೆ ರಾಜಕಾರಣ ಮಾಡುತ್ತದೆ ಎಂದು ಮೋದಿ ಹೇಳಿದರು.
ಕಾಂಗ್ರೆಸ್-ಜೆಡಿಎಸ್ ನದ್ದು ವಂಶೋದಯ ರಾಜಕಾರಣ ಮಾಡಿದರೆ ಬಿಜೆಪಿ ಅಂತ್ಯೋದಯದ ರಾಜಕಾರಣ ಮಾಡುತ್ತದೆ ಎಂದು ಪ್ರಧಾನಿ ಹೇಳಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…