ಮಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಮಾಡಿದರು.
ನಗರದ ಕೇಂದ್ರ ಮೈದಾನದಲ್ಲಿ ಬಿಜೆಪಿ ಪಕ್ಷದ ಲೋಕಸಭಾ ಚುನಾವಣೆಯ ಪ್ರಚಾರದ ಬೃಹತ್ ಬಹಿರಂಗ ’ಸಂಕಲ್ಪ ಸಮಾವೇಶ ’ ಆರಂಭಗೊಂಡಿದ್ದು ಪ್ರಧಾನಿ ” ನಿಮ್ಮ ಚೌಕಿದಾರ್ ನರೇಂದ್ರ ಮೋದಿಯ ನಮಸ್ಕಾರಗಳು ” ಎಂದು ಕನ್ನಡದಲ್ಲಿ ಹೇಳಿ ಮಾತು ಆರಂಭಿಸಿದ ಮೋದಿ ಇಡೀ ಮಂಗಳೂರು ನಗರ ಕೇಸರಿಮಯವಾಗಿದ್ದು ಜನರ ಪ್ರೀತಿಗೆ ನಾನು ಆಭಾರಿ ಎಂದು ಹೇಳಿದರು.
ವಿಶ್ವ ವೇದಿಕೆಯಲ್ಲಿ ಭಾರತದ ಧ್ವನಿ ಗಟ್ಟಿಗೊಳ್ಳುತ್ತಿದ್ದು, ಇದಕ್ಕೆ ಪ್ರತಿಯೊಬ್ಬ ಮತದಾರನಿಗೂ ಧನ್ಯವಾದ ಅರ್ಪಿಸುವುದಾಗಿ ಪ್ರಧಾನಿ ಮೋದಿ ಹೇಳಿದರು.
21ನೇ ಶತಮಾನದ ಬಳಿಕ ನವಭಾರತದ ಚಹರೆ ಹೇಗಿರಬೇಕು ಎಂಬುದನ್ನು ನಿರ್ಧರಿಸಲು 2019ರ ಲೋಕಸಭೆ ಚುನಾವಣೆ ಅತ್ಯಂತ ಮಹತ್ವದ್ದು ಎಂದು ಮೋದಿ ಬಣ್ಣಿಸಿದರು.
ರಾಜ್ಯದ ಕಾಂಗ್ರೆಸ್-ಜೆಡಿಎಸ್ ಪರಿವಾರವಾದದ ರಾಜಕಾರಣ ಮಾಡಿದರೆ, ಬಿಜೆಪಿ ರಾಷ್ಟ್ರವಾದದ ರಾಜಕಾರಣ ಮಾಡುತ್ತದೆ ಎಂದು ಮೋದಿ ಮೈತ್ರಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಕುಟುಂಬ ಸದಸ್ಯರನ್ನೆಲ್ಲಾ ಚುನಾವಣೆಗೆ ನಿಲ್ಲಿಸಿರುವ ಕಾಂಗ್ರೆಸ್-ಜೆಡಿಎಸ್ ಗೆ , ಓರ್ವ ಚಾಯ್ ವಾಲಾ ಪ್ರಧಾನಿಯಾಗಿರುವುದನ್ನು ನೋಡಲಾಗುತ್ತಿಲ್ಲ ಎಂದು ಪ್ರಧಾನಿ ಹರಿಹಾಯ್ದರು.
ತುಷ್ಠೀಕರಣವನ್ನೇ ರಾಜಕಾರಣದ ಅಡಿಪಾಯ ಮಾಡಿಕೊಂಡಿರುವ ಕಾಂಗ್ರೆಸ್-ಜೆಡಿಎಸ್ ಗೆ ವಿರುದ್ಧವಾಗಿ ಬಿಜೆಪಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಡಿಪಾಯದ ಮೇಲೆ ರಾಜಕಾರಣ ಮಾಡುತ್ತದೆ ಎಂದು ಮೋದಿ ಹೇಳಿದರು.
ಕಾಂಗ್ರೆಸ್-ಜೆಡಿಎಸ್ ನದ್ದು ವಂಶೋದಯ ರಾಜಕಾರಣ ಮಾಡಿದರೆ ಬಿಜೆಪಿ ಅಂತ್ಯೋದಯದ ರಾಜಕಾರಣ ಮಾಡುತ್ತದೆ ಎಂದು ಪ್ರಧಾನಿ ಹೇಳಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…