Featured

ಮಂಗಳೂರಿನಲ್ಲಿ ಮತ್ತೆ ತಲ್ವಾರ್ ಸದ್ದು : ಹಿಂದು ಮುಖಂಡನ ಹತ್ಯೆಗೆ ಯತ್ನ

ಮಂಗಳೂರು: ಮೂಡಬಿದ್ರೆಯಲ್ಲಿ ತಲ್ವಾರ್ ದಾಳಿ ನಡೆಸಿ ನೆತ್ತರು ಹರಿಸಿದ ಬೆನಲ್ಲೇ ಪ್ರತಿಕಾರವಾಗಿ ಮತ್ತೊಂದು ತಲ್ವಾರ್ ದಾಳಿ ನಡೆದಿದೆ.

ಕೈಕಂಬದ ಸೂರಲ್ಪಾಡಿಯಲ್ಲಿನೆನ್ನೆ ಸಂಜೆ ವೇಳೆ ಪೊಳಲಿ ನಿವಾಸಿ ಹರೀಶ್ ಶೆಟ್ಟಿ (38) ಮೇಲೆ ತಲ್ವಾರ್ ನಿಂದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ಮೂಡುಬಿದ್ರೆಯ ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿ ಇಮ್ತಿಯಾಜ್ ಎಂಬಾತನನ್ನು ಕೊಲೆ ಮಾಡಲು ಯತ್ನಿಸಲಾಗಿತ್ತು. ಈ ವೇಳೆ ಇಮ್ತಿಯಾಜ್ ತಲೆ ಹಾಗೂ ಕಾಲಿಗೆ ತಲ್ವಾರ್ ನಿಂದ ಹಲ್ಲೆ ನಡೆಸಲಾಗಿತ್ತು. ಘಟನೆಯಲ್ಲಿ ತೀವ್ರ ಪ್ರಮಾಣದಲ್ಲಿ ಗಾಯಗೊಂಡಿದ್ದ ಇಮ್ತಿಯಾಜ್‍ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಮ್ತಿಯಾಜ್ ಮೇಲಿನ ಹಲ್ಲೆಯ ಪ್ರತಿಕಾರವಾಗಿ ಸಂಜೆ ವೇಳೆಗೆ ಹರೀಶ್ ಶೆಟ್ಟಿ ಮೇಲೆ ತಲವಾರ್ ದಾಳಿ ನಡೆಸಲಾಗಿದ್ಯಾ ಎಂಬ ಶಂಕೆ ವ್ಯಕ್ತವಾಗಿದೆ.

ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಹರೀಶ್ ಶೆಟ್ಟಿ, ಕೈಕಂಬದಲ್ಲಿ ಬಸ್ ಟೈಂ ಕೀಪರ್ ಆಗಿದ್ದ ಕೆಲಸ ಮಾಡುತ್ತಿದ್ದರು. ಸದ್ಯ ದಾಳಿಯಲ್ಲಿ ಗಾಯಗೊಂಡಿರುವ ಹರೀಶ್ ಶೆಟ್ಟಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆಸ್ಪತ್ರೆಗೆ ಪೊಲೀಸ್ ಕಮೀಷನರ್ ಟಿ.ಆರ್ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಷಯ ತಿಳಿಯ ಹಿಂದೂ ಸಂಘಟನೆಯ ಕಾರ್ಯಕರ್ತರು ಆಸ್ಪತ್ರೆಗೆ ಕಡೆ ಧಾವಿಸಿದ್ರು. ಇದೇ ವೇಳೆ ಶಾಸಕರಾದ ಉಮಾನಾಥ ಕೊಟ್ಯಾನ್, ವೇದವ್ಯಾಸ್ ಕಾಮತ್ ಹಾಗೂ ಭರತ್ ಶೆಟ್ಟಿ ಎಜೆ ಆಸ್ಪತ್ರೆಗೆ ಆಗಮಿಸಿ ಹರೀಶ್ ಶೆಟ್ಟಿ ಬಳಿ ಮಾಹಿತಿ ಪಡೆದ್ರು. ಹತ್ಯೆಗೆ ಯತ್ನಿಸಿದ ದುಷ್ಕರ್ಮಿಗಳನ್ನ ಶೀಘ್ರ ಬಂಧಿಸುವಂತೆ ಪೊಲೀಸ್‌ ಇಲಾಖೆಗೆ ಸೂಚಿಸಿದ್ದಾರೆ. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸೂಕ್ಷ್ಮ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

Vishwa News 24

Recent Posts

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

13 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

22 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

37 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

52 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

3 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago