Featured

ಮಂಗಳೂರಿನಲ್ಲಿ ಸ್ಥಾಪನೆಯಾಗಲಿದೆ ‘ಕ್ಷಿಪ್ರ ಕಾರ್ಯಪಡೆ ನೆಲೆ’ ; ಹಿಂಸಾಚಾರ ಮತ್ತು ಗುಂಪು ಘರ್ಷಣೆಗಳನ್ನು ನಿಯಂತ್ರಣ ಮಾಡಲು ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

ನವದೆಹಲಿ, : ಕರ್ನಾಟಕದ ಮಂಗಳೂರು ಸೇರಿದಂತೆ ದೇಶದ ಐದು ನಗರಗಳಲ್ಲಿ ಹೊಸದಾಗಿ ಕ್ಷಿಪ್ರ ಕಾರ್ಯಪಡೆ ನೆಲೆಗಳು ಸ್ಥಾಪನೆಯಾಗಲಿವೆ. ಕೇಂದ್ರ ಸರ್ಕಾರವು ಕಳೆದ ಜನವರಿಯಲ್ಲಿಯೇ ಆರ್ ಎ ಎಫ್ ನ ಐದು ಹೊಸ ಬೆಟಾಲಿಯನ್ ಗಳಿಗೆ ಅನುಮೋದನೆ ನೀಡಿತ್ತು.

ಕೋಮುಗಲಭೆ ಸೇರಿದಂತೆ ಕಾನೂನು ಸುವ್ಯವಸ್ಥೆ ಹದಗೆಟ್ಟಾಗ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುವ, ಕೇಂದ್ರ ಸರಕಾರದ ಅಧೀನದಲ್ಲಿರುವ ಕ್ಷಿಪ್ರ ಕಾರ್ಯಪಡೆ(ಆರ್ ಎ ಎಫ್)ಯು ಕರ್ನಾಟಕದ ಮಂಗಳೂರು ಸಹಿತ ದೇಶದ ಐದು ನಗರಗಳಲ್ಲಿ ಹೊಸದಾಗಿ ಸ್ಥಾಪನೆಯಾಗಲಿದ್ದು, ರಾಜ್ಯದಲ್ಲಿಯೇ ಮೊದಲನೇ ಆರ್ ಎ ಎಫ್ ನೆಲೆ ಇದಾಗಲಿದೆ..

ಈಗ ಈ ಬೆಟಾಲಿಯಾನ್ ಯಾವ್ಯಾವ ಸ್ಥಳಗಳಲ್ಲಿ ಸ್ಥಾಪನೆ ಮಾಡಲಾಗುತ್ತಿದೆ ಎಂಬ ಮಾಹಿತಿಯನ್ನು ಕೇಂದ್ರ ಸರ್ಕಾರ ಹೊರಹಾಕಿದೆ. ಹೀಗಾಗಿ ಈ 5 ಕ್ಷಿಪ್ರ ಕಾರ್ಯಪಡೆ ನೆಲೆ ಸೇರಿಸಿದರೆ ದೇಶದಲ್ಲಿ ಒಟ್ಟಾರೆ 15 ನೆಲೆಗಳು ಸ್ಥಾಪನೆಯಾದಂತೆ ಆಗುತ್ತದೆ.

ಕರ್ನಾಟಕದ ಮಂಗಳೂರು, ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ಉತ್ತರಪ್ರದೇಶದ ವಾರಾಣಸಿ, ರಾಜಸ್ಥಾನದ ಜೈಪುರ, ಬಿಹಾರ ಹಾಜಿಪುರ ಮತ್ತು ಹರಿಯಾಣದ ನುಹ್ ಜಿಲ್ಲೆಗಳಲ್ಲಿ ಹೊಸ ಆರ್‌ಎಎಫ್ ಘಟಕ ಪ್ರಾರಂಭವಾಗಲಿದೆ. ಇದರ ಕಚೇರಿ ಸ್ಥಾಪನೆಗಾಗಿ ಎರಡು ವರ್ಷಗಳ ಹಿಂದೆಯೇ ನಗರದ ಹೊರವಲಯದಲ್ಲಿರುವ ಬಜಪೆ ಮತ್ತು ಮರವೂರಿನಲ್ಲಿ ಜಾಗವನ್ನು ಗುರುತಿಸಿ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿತ್ತು.

ಆರ್ ಎ ಎಫ್ ಅಂದರೆ ರ್ಯಾಪಿಡ್ ಆಕ್ಷನ್ ಫೋರ್ಸ್ ಅಥವಾ ಕ್ಷಿಪ್ರ ಕಾರ್ಯಪಡೆ ಎಂದು ಕರೆಸಿಕೊಳ್ಳುವ ಇದು ಕೇಂದ್ರ ಮೀಸಲು ಪೊಲೀಸ್ ಪಡೆಯ ಭಾಗ. ಆರ್ ಎ ಎಫ್ ನ ಪ್ರತಿ ನೆಲೆಯಲ್ಲೂ ಒಂದು ಸಾವಿರ ಯೋಧರ ತಂಡವಿರುತ್ತದೆ. ಇವರ ಬಳಿ ಆಕ್ಷನ್ ಗನ್ ಹೊಗೆ ಚಿಮ್ಮಿಸುವ ಗ್ರೇನೆಡ್ ಸೇರಿ ಹಿಂಸಾಚಾರ ನಿಯಂತ್ರಣಕ್ಕೆ ಬೇಕಾದ ಉಪಕರಣವಿರುತ್ತದೆ. ಇಲ್ಲಿಯವರೆಗೂ ದೇಶದಲ್ಲಿ ಒಟ್ಟು 10 ಆರ್‌ಎಎಫ್ ತುಕಡಿಗಳಿವೆ. ಪ್ರತಿ ತುಕಡಿಯಲ್ಲಿ 1,000 ಸಿಬ್ಬಂದಿಗಳಿದ್ದು, ಅವರು ಅತ್ಯಾಧುನಿಕ ತಾಂತ್ರಿಕ ಉಪಕರಣಗಳು, ಮಾರಕವಲ್ಲದ ಶಸ್ತ್ರಾಸ್ತ್ರಗಳು, ಹೊಗೆಸೂಸುವ ಗ್ರೆನೇಡ್ ಗಳು ಹಾಗೂ ಇನ್ನೂ ಮುಂತಾದ ತುರ್ತು ಶಸ್ತ್ರಾಸ್ತ್ರಗಳನ್ನು ಹೊಂದಿರುತ್ತಾರೆ.

ರ್ಯಾಪಿಡ್ ಆಕ್ಷನ್ ಫೋರ್ಸ್ (ಆರ್ ಎ ಎಫ್) ಇರುವುದೇ ಹಿಂಸಾಚಾರ ಮತ್ತು ಗುಂಪು ಘರ್ಷಣೆಗಳ ನಿಯಂತ್ರಣ ಮಾಡುವುದು. ನೀಲಿ ಬಣ್ಣದಿಂದ ಕೂಡಿದ ಸಮವಸ್ತ್ರ ಧರಿಸುವ ಈ ಪಡೆ ಹಿಂಸಾಚಾರ ನಿಯಂತ್ರಿಸುವ ವಿಚಾರದಲ್ಲಿ ಪರಿಣಿತರಾಗಿರುತ್ತಾರೆ. ಇದಲ್ಲದೆ ನೈಸರ್ಗಿಕ ವಿಕೋಪದಗಳಾದ ಭೂಕಂಪ, ಪ್ರವಾಹ, ಚಂಡಮಾರುತ ಸಂದರ್ಭದಲ್ಲೂ ಮಾನವೀಯ ನೆಲೆಯಲ್ಲಿ ವಿಪತ್ತು ನಿರ್ವಹಣಾ ಕಾರ್ಯಪಡೆ ಜತೆಯಾಗಿ ಕೆಲಸ ನಿರ್ವಹಿಸುತ್ತದೆ.

 

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

3 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

6 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

6 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

6 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

6 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

7 hours ago