ಮಂಗಳೂರು: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರನನ್ನು ವೈದ್ಯರು ಉಪಚರಿಸದೆ ಮೃತಪಟ್ಟ ಬಳಿಕ ಆತನ ಮೃತದೇಹವನ್ನು ಗೋಡಾನ್ನಲ್ಲಿ ಮಲಗಿಸಿದ ಅಮಾನವೀಯ ಘಟನೆ ಪುತ್ತೂರು ತಾಲೂಕಿನ ಸಿಟಿ ಆಸ್ಪತ್ರೆಯಲ್ಲಿ ನಡೆದಿದೆ.
ಪುತ್ತೂರಿನ ದರ್ಬೆಯಲ್ಲಿ ಬೈಕ್ ಸವಾರ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆ ತಲುಪುವ ವೇಳೆಗೆ ಪ್ರಾಣ ಪಕ್ಷಿ ಹಾರಿಹೋಗಿತ್ತು. ಆದರೆ ವೈದ್ಯರು ತುರ್ತು ಚಿಕಿತ್ಸೆಯನ್ನೂ ನೀಡದೆ ರೋಗಿಯನ್ನೂ ಗಮನಿಸದೆ ಬದುಕಿದ್ದಾನಾ ಸತ್ತಿದ್ದಾನಾ ಅಂತಾ ಸಾರ್ವಜನಿಕರ ಬಳಿಯೇ ಉಡಾಫೆಯ ಪ್ರಶ್ನೆ ಎತ್ತಿದ್ದಾರೆ.
ಸುಮಾರು ಒಂದು ಗಂಟೆಗಳ ಕಾಲ ಆಸ್ಪತ್ರೆಯ ಕಾರಿಡಾರ್ ನಲ್ಲೇ ಸ್ಟ್ರೇಚ್ಚರ್ ಮೇಲೆ ಇರಿಸಿದ್ದು, ನಂತರ ಆಸ್ಪತ್ರೆಯ ಡಿಸೇಲ್ ಸ್ಟಾಕ್ ಇಡುವ ಸ್ಟೇರ್ ಗ್ರಾಡ್ ಕೆಳಗೆ ಮೃತದೇಹ ಇರಿಸಿದ್ದಾರೆ. ಆಸ್ಪತ್ರೆಗೆ ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ತಂದ ಸಾರ್ವಜನಿಕರ ಮೇಲೆಯೇ ಡ್ಯೂಟಿ ಡಾಕ್ಟರ್ ರೇಗಾಡಿದ್ದು, ಬೇರೆ ಆಸ್ಪತ್ರೆಗೆ ತೆಗೆದುಕೊಂಡು ಹೋಗುವಂತೆ ದಬಾಯಿಸಿದ್ದಾರೆ.
ತುರ್ತು ಚಿಕಿತ್ಸೆಯನ್ನೂ ನೀಡದೆ ಸಾರ್ವಜನಿಕರನ್ನೇ ದಬಾಯಿಸಿ ಕೊನೆಗೆ ಸ್ಟೇರ್ ಕೇಸ್ ನಲ್ಲಿ ಮೃತದೇಹ ಇರಿಸಿದ ಆಸ್ಪತ್ರೆ ಸಿಬ್ಬಂದಿ ವರ್ತನೆಗೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…