ಮಂಗಳೂರು: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರನನ್ನು ವೈದ್ಯರು ಉಪಚರಿಸದೆ ಮೃತಪಟ್ಟ ಬಳಿಕ ಆತನ ಮೃತದೇಹವನ್ನು ಗೋಡಾನ್ನಲ್ಲಿ ಮಲಗಿಸಿದ ಅಮಾನವೀಯ ಘಟನೆ ಪುತ್ತೂರು ತಾಲೂಕಿನ ಸಿಟಿ ಆಸ್ಪತ್ರೆಯಲ್ಲಿ ನಡೆದಿದೆ.
ಪುತ್ತೂರಿನ ದರ್ಬೆಯಲ್ಲಿ ಬೈಕ್ ಸವಾರ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆ ತಲುಪುವ ವೇಳೆಗೆ ಪ್ರಾಣ ಪಕ್ಷಿ ಹಾರಿಹೋಗಿತ್ತು. ಆದರೆ ವೈದ್ಯರು ತುರ್ತು ಚಿಕಿತ್ಸೆಯನ್ನೂ ನೀಡದೆ ರೋಗಿಯನ್ನೂ ಗಮನಿಸದೆ ಬದುಕಿದ್ದಾನಾ ಸತ್ತಿದ್ದಾನಾ ಅಂತಾ ಸಾರ್ವಜನಿಕರ ಬಳಿಯೇ ಉಡಾಫೆಯ ಪ್ರಶ್ನೆ ಎತ್ತಿದ್ದಾರೆ.
ಸುಮಾರು ಒಂದು ಗಂಟೆಗಳ ಕಾಲ ಆಸ್ಪತ್ರೆಯ ಕಾರಿಡಾರ್ ನಲ್ಲೇ ಸ್ಟ್ರೇಚ್ಚರ್ ಮೇಲೆ ಇರಿಸಿದ್ದು, ನಂತರ ಆಸ್ಪತ್ರೆಯ ಡಿಸೇಲ್ ಸ್ಟಾಕ್ ಇಡುವ ಸ್ಟೇರ್ ಗ್ರಾಡ್ ಕೆಳಗೆ ಮೃತದೇಹ ಇರಿಸಿದ್ದಾರೆ. ಆಸ್ಪತ್ರೆಗೆ ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ತಂದ ಸಾರ್ವಜನಿಕರ ಮೇಲೆಯೇ ಡ್ಯೂಟಿ ಡಾಕ್ಟರ್ ರೇಗಾಡಿದ್ದು, ಬೇರೆ ಆಸ್ಪತ್ರೆಗೆ ತೆಗೆದುಕೊಂಡು ಹೋಗುವಂತೆ ದಬಾಯಿಸಿದ್ದಾರೆ.
ತುರ್ತು ಚಿಕಿತ್ಸೆಯನ್ನೂ ನೀಡದೆ ಸಾರ್ವಜನಿಕರನ್ನೇ ದಬಾಯಿಸಿ ಕೊನೆಗೆ ಸ್ಟೇರ್ ಕೇಸ್ ನಲ್ಲಿ ಮೃತದೇಹ ಇರಿಸಿದ ಆಸ್ಪತ್ರೆ ಸಿಬ್ಬಂದಿ ವರ್ತನೆಗೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…