ಮಂಗಳೂರು: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರನನ್ನು ವೈದ್ಯರು ಉಪಚರಿಸದೆ ಮೃತಪಟ್ಟ ಬಳಿಕ ಆತನ ಮೃತದೇಹವನ್ನು ಗೋಡಾನ್ನಲ್ಲಿ ಮಲಗಿಸಿದ ಅಮಾನವೀಯ ಘಟನೆ ಪುತ್ತೂರು ತಾಲೂಕಿನ ಸಿಟಿ ಆಸ್ಪತ್ರೆಯಲ್ಲಿ ನಡೆದಿದೆ.
ಪುತ್ತೂರಿನ ದರ್ಬೆಯಲ್ಲಿ ಬೈಕ್ ಸವಾರ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆ ತಲುಪುವ ವೇಳೆಗೆ ಪ್ರಾಣ ಪಕ್ಷಿ ಹಾರಿಹೋಗಿತ್ತು. ಆದರೆ ವೈದ್ಯರು ತುರ್ತು ಚಿಕಿತ್ಸೆಯನ್ನೂ ನೀಡದೆ ರೋಗಿಯನ್ನೂ ಗಮನಿಸದೆ ಬದುಕಿದ್ದಾನಾ ಸತ್ತಿದ್ದಾನಾ ಅಂತಾ ಸಾರ್ವಜನಿಕರ ಬಳಿಯೇ ಉಡಾಫೆಯ ಪ್ರಶ್ನೆ ಎತ್ತಿದ್ದಾರೆ.
ಸುಮಾರು ಒಂದು ಗಂಟೆಗಳ ಕಾಲ ಆಸ್ಪತ್ರೆಯ ಕಾರಿಡಾರ್ ನಲ್ಲೇ ಸ್ಟ್ರೇಚ್ಚರ್ ಮೇಲೆ ಇರಿಸಿದ್ದು, ನಂತರ ಆಸ್ಪತ್ರೆಯ ಡಿಸೇಲ್ ಸ್ಟಾಕ್ ಇಡುವ ಸ್ಟೇರ್ ಗ್ರಾಡ್ ಕೆಳಗೆ ಮೃತದೇಹ ಇರಿಸಿದ್ದಾರೆ. ಆಸ್ಪತ್ರೆಗೆ ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ತಂದ ಸಾರ್ವಜನಿಕರ ಮೇಲೆಯೇ ಡ್ಯೂಟಿ ಡಾಕ್ಟರ್ ರೇಗಾಡಿದ್ದು, ಬೇರೆ ಆಸ್ಪತ್ರೆಗೆ ತೆಗೆದುಕೊಂಡು ಹೋಗುವಂತೆ ದಬಾಯಿಸಿದ್ದಾರೆ.
ತುರ್ತು ಚಿಕಿತ್ಸೆಯನ್ನೂ ನೀಡದೆ ಸಾರ್ವಜನಿಕರನ್ನೇ ದಬಾಯಿಸಿ ಕೊನೆಗೆ ಸ್ಟೇರ್ ಕೇಸ್ ನಲ್ಲಿ ಮೃತದೇಹ ಇರಿಸಿದ ಆಸ್ಪತ್ರೆ ಸಿಬ್ಬಂದಿ ವರ್ತನೆಗೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…