Featured

ಮಂಗಳೂರಿನಿಂದ ಎರ್ನಾಕುಲಂಗೆ ನ.28 ರಿಂದ ಮಲ್ಟಿ ಆಕ್ಸೆಲ್ ಬಸ್ ಸಂಚಾರ ಆರಂಭ – Vishwanews24

ಮಂಗಳೂರಿನಿಂದ ಎರ್ನಾಕುಲಂಗೆ ನ.28 ರಿಂದ ಮಲ್ಟಿ ಆಕ್ಸೆಲ್ ಬಸ್ ಸಂಚಾರ ಆರಂಭ – Vishwanews24

ಮಂಗಳೂರು: ಕೋವಿಡ್-19 ಸಂದರ್ಭದಲ್ಲಿ ಮಂಗಳೂರಿನಿಂದ ಕೇರಳದ ಎರ್ನಾಕುಲಂಗೆ ವೋಲ್ವೋ ಮಲ್ಟಿಆಕ್ಸೆಲ್ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ಪ್ರಸ್ತುತ ಲಾಕ್ಡೌನ್ ಸಡಿಲಗೊಂಡ ಹಿನ್ನಲೆಯಲ್ಲಿ ಮತ್ತು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಬೇಡಿಕೆಗನುಗುಣವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು-ಎರ್ನಾಕುಲಂ (ಮಂಗಳೂರಿನಿಂದ ಕಾಸರಗೋಡು, ಕ್ಯಾಲಿಕಟ್, ತ್ರಿಶ್ಯೂರ್, ಅಳಪೆ ಮಾರ್ಗವಾಗಿ ಎರ್ನಾಕುಲಂ) ಮಾರ್ಗದಲ್ಲಿ ವೋಲ್ವೋ ಮಲ್ಟಿಆಕ್ಸಲ್ ಸಾರಿಗೆ ಸೌಲಭ್ಯವನ್ನು ಇದೇ ನ.28 ರಿಂದ ಪುನಃ ಪ್ರಾರಂಭಿಸಿ ಕಾರ್ಯಾಚರಣೆ ಮಾಡಲಾಗುತ್ತಿದೆ.

ಮಂಗಳೂರಿನಿಂದ ಎರ್ನಾಕುಲಂ ರಾತ್ರಿ 9 ಗಂಟೆಗೆ ಮತ್ತು ಎರ್ನಾಕುಲಂ ನಿಂದ ಮಂಗಳೂರು ರಾತ್ರಿ 8.35 ಕ್ಕೆ ಹೊರಡಲಿದೆ.

ಮಂಗಳೂರಿನಿಂದ ಎರ್ನಾಕುಲಂಗೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣ ದರ 760 ರೂ.ಗಳು. ಪ್ರಯಾಣಿಕರಿಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಹತ್ತಿರದ ರಿಸರ್ವೇಶನ್ ಕೌಂಟರ್ ಅನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗೆ ಮಂಗಳೂರು ಬಸ್ಸು ನಿಲ್ದಾಣ ದೂ.ಸಂ: 7760990720, ಮಂಗಳೂರು ಮುಂಗಡ ಬುಕ್ಕಿಂಗ್ ಕೌಂಟರ್ ದೂ.ಸಂ: 9663211553 ಸಂಪರ್ಕಿಸಬಹುದು ಎಂದು ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

1 hour ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

1 hour ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

3 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

4 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

5 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

5 hours ago