Featured

ಮಂಗಳೂರಿನಿಂದ ಮಂತ್ರಾಲಯಕ್ಕೆ ವಿಶೇಷ ರೈಲು ಆರಂಭ – vishwanews24

ಮಂಗಳೂರಿನಿಂದ ಮಂತ್ರಾಲಯಕ್ಕೆ ವಿಶೇಷ ರೈಲು ಆರಂಭ

ಮಂಗಳೂರು : ಜೂನ್ ತಿಂಗಳ ಪ್ರವಾಸ ಮತ್ತು ಉದ್ಯೋಗದ ನಿಮಿತ್ತ ರೈಲುಗಳಲ್ಲಿ ಉಂಟಾಗಿರುವ ಜನದಟ್ಟನೆಯನ್ನು ನಿಯಂತ್ರಿಸಲು ಭಾರತೀಯ ರೈಲ್ವೆ ಇಲಾಖೆಯು ಪ್ರಯಾಣಿಕರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ.

ಹೈದರಾಬಾದ್ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಹೆಚ್ಚುವರಿ ಸೀಟುಗಳ ಬೇಡಿಕೆಯನ್ನು ಪೂರೈಸಲು 4 ರೌಂಡ್ ಟ್ರಿಪ್‌ಗಳ (ನಾಲ್ಕು ವಾರಗಳ ಕಾಲ) ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ಪ್ರಕಟಿಸಲಾಗಿದೆ. ಈ ರೈಲು ತೆಲಂಗಾಣ, ಕರ್ನಾಟಕ ಹಾಗೂ ಕೇರಳ ಮೂರೂ ರಾಜ್ಯಗಳ ಪ್ರಯಾಣಿಕರಿಗೆ ನೆರವಾಗಲಿದೆ.

ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗ ಹೊರಡಿಸಿರುವ ಪ್ರಕಟಣೆಯ ಪ್ರಕಾರ, ರೈಲು ಸಂಖ್ಯೆ 07097 ಹೈದರಾಬಾದ್-ಮಂಗಳೂರು ಸೆಂಟ್ರಲ್ ವಿಶೇಷ ಎಕ್ಸ್‌ಪ್ರೆಸ್ ಜೂನ್ 3 ರಿಂದ ಜೂನ್ 24 ರವರೆಗೆ ಪ್ರತಿ ಬುಧವಾರದಂದು ಸಂಚಾರಿಸಲಿದೆ. ಈ ರೈಲು ಹೈದರಾಬಾದ್‌ನಿಂದ ಮುಂಜಾನೆ 4:20 ಕ್ಕೆ ಹೊರಟು, ಮರುದಿನ ಬೆಳಗ್ಗೆ 9:30 ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ.

ಮತ್ತೆ ಪ್ರಯಾಣಕ್ಕಾಗಿ, ರೈಲು ಸಂಖ್ಯೆ 07098 ಮಂಗಳೂರು ಸೆಂಟ್ರಲ್-ಹೈದರಾಬಾದ್ ವಿಶೇಷ ಎಕ್ಸ್‌ಪ್ರೆಸ್ ಜೂನ್ 4 ರಿಂದ ಜೂನ್ 25 ರವರೆಗೆ ಪ್ರತಿ ಗುರುವಾರ ಸಂಜೆ 8:00 ಗಂಟೆಗೆ ಮಂಗಳೂರಿನಿಂದ ಹೊರಟು, ಶನಿವಾರ ಮುಂಜಾನೆ 4:00 ಗಂಟೆಗೆ ಹೈದರಾಬಾದ್ ತಲುಪಲಿದೆ.

ಪ್ರಯಾಣಿಕರ ಬಜೆಟ್ ಮತ್ತು ಆದ್ಯತೆಗಳಿಗೆ ತಕ್ಕಂತೆ ಈ ವಿಶೇಷ ರೈಲಿನಲ್ಲಿ ಒಟ್ಟು 24 ಬೋಗಿಗಳನ್ನು ಅಳವಡಿಸಲಾಗಿದೆ. ಈ ಬಗ್ಗೆ ಇಲ್ಲಿದೆ ನೋಡಿ.

3 ಎಸಿ 2-ಟೈರ್ ಕೋಚ್‌ಗಳು

5 ಎಸಿ 3-ಟೈರ್ ಕೋಚ್‌ಗಳು

10 ಸ್ಲೀಪರ್ ಕ್ಲಾಸ್ ಕೋಚ್‌ಗಳು

4 ಸಾಮಾನ್ಯ ದ್ವಿತೀಯ ದರ್ಜೆ ಕೋಚ್‌ಗಳು

2 ಲಗೇಜ್ ಹಾಗೂ ಬ್ರೇಕ್ ವ್ಯಾನ್‌ಗಳು ಇರಲಿವೆ.

ಈ ರೈಲು ತನ್ನ ಪ್ರಯಾಣದ ಅವಧಿಯಲ್ಲಿ ಬೇಗಂಪೇಟೆ, ಲಿಂಗಂಪಲ್ಲಿ, ವಿಕಾರಾಬಾದ್, ಸೇಡಂ, ಯಾದಗಿರಿ, ರಾಯಚೂರು, ಮಂತ್ರಾಲಯಂ ರೋಡ್, ಗುಂತಕಲ್, ಅನಂತಪುರ, ಧರ್ಮಾವರಂ, ಹಿಂದೂಪುರ ಸೇರಿದಂತೆ ಕರ್ನಾಟಕದ ರಾಜಧಾನಿ ಬೆಂಗಳೂರಿನ ಯೆಲಹಂಕ ಮತ್ತು ಕೃಷ್ಣರಾಜಪುರಂ (ಕೆಆರ್ ಪುರಂ), ಬಂಗಾರಪೇಟೆ ಹಾಗೂ ತಮಿಳುನಾಡು-ಕೇರಳದ ಸೇಲಂ, ಈರೋಡ್, ಪಾಲ್ಘಾಟ್, ಕೋಜಿಕೋಡ್, ಕಣ್ಣೂರು ಮತ್ತು ಕಾಸರಗೋಡು ನಿಲ್ದಾಣಗಳಲ್ಲಿ ನಿಲ್ಲಲಿದೆ.

ನಿಯಮಿತ ರೈಲುಗಳಲ್ಲಿನ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಪ್ರವಾಸೋದ್ಯಮ ಹಾಗೂ ಮನೆಯವರನ್ನು ನೋಡಲು ಬರುವ ಜನರಿಗೆ ಜೂನ್ ತಿಂಗಳಲ್ಲಿ ಪ್ರಯಾಣಿಸುವ ಜನರಿಗೆ ಈ ವಿಶೇಷ ಸೇವೆ ಅತ್ಯಂತ ಆರಾಮದಾಯಕ ಪ್ರಯಾಣದ ಅನುಭವವನ್ನು ನೀಡಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

15 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

16 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

16 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

17 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

18 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

18 hours ago