ಮಂಗಳೂರು : ಮಂಗಳೂರಿನ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ದಿನ ಇದಾಗಿದ್ದು, ತುಳುನಾಡಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಅಭಿವೃದ್ಧಿ ಹಾಗೂ ಮಂಗಳೂರಿನ ಉಜ್ವಲ ಭವಿಷ್ಯಕ್ಕಾಗಿ ಹಲವು ಐತಿಹಾಸಿಕ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ತಮ್ಮ ರಾಜಕೀಯ ಜೀವನದಲ್ಲಿ ಮಂಗಳೂರಿನ ಜನರ ಹಿತಕ್ಕಾಗಿ ಇಂತಹ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ :
‘ನವ ಮಂಗಳೂರು’ ನಿರ್ಮಾಣ ಹಾಗೂ ಕರಾವಳಿಯ ಸರ್ವಾಂಗೀಣ ಪ್ರಗತಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಈ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿರುವ ನಿರ್ಧಾರಗಳು ಕರಾವಳಿಯ ಅಭಿವೃದ್ಧಿಗೆ ಹೊಸ ದಿಕ್ಕು ತೋರಲಿವೆ ಎಂದು ಅವರು ತಿಳಿಸಿದ್ದಾರೆ.
ಈ ಐತಿಹಾಸಿಕ ನಿರ್ಧಾರಗಳಿಗೆ ಸಾಕ್ಷಿಯಾದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಸಂಪುಟದ ಎಲ್ಲಾ ಸಚಿವ ಸಹೋದ್ಯೋಗಿಗಳಿಗೆ ಯು.ಟಿ. ಖಾದರ್ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಇದನ್ನೂ ಓದಿ :
“ಕರಾವಳಿ ಕರುನಾಡಿನ ಹೆಮ್ಮೆ” ಎಂದು ತಮ್ಮ ಪೋಸ್ಟ್ನಲ್ಲಿ ಅವರು ಉಲ್ಲೇಖಿಸಿದ್ದಾರೆ
ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಅಭಿವೃದ್ಧಿ, ಪ್ರವಾಸೋದ್ಯಮಕ್ಕೆ ಆದ್ಯತೆ : ಡಿಸಿಎಂ ಡಾ.ಜಿ.ಪರಮೇಶ್ವರ್ ಉಡುಪಿ : ಉಡುಪಿ ಜಿಲ್ಲೆಯ…
ಕರಾವಳಿಯ ವಾತಾವರಣ ಕೆಡಿಸಲು ಹಾಗೂ ವೋಟ್ ಬ್ಯಾಂಕ್ಗಾಗಿ ಕ್ಯಾಬಿನಟ್ ಸಭೆ : ಯತ್ನಾಳ್ ಲೇವಡಿ ಉಡುಪಿ: ಕರಾವಳಿಯಲ್ಲಿ ನಡೆಯಲಿರುವ ಸಚಿವ…
ಉಡುಪಿ: ವಿದ್ಯಾರ್ಥಿಗಳಿಗೆ MDMA ಮಾರಾಟ: ಇಬ್ಬರ ಬಂಧನ ಉಡುಪಿ: ವಿದ್ಯಾರ್ಥಿಗಳಿಗೆ MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ…
ಬೆಳ್ತಂಗಡಿ: ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಸಿಮೆಂಟ್ ಚಾವಣಿ ಕುಸಿದು ಯುವ ಕಾರ್ಮಿಕ ಸಾವು ಬೆಳ್ತಂಗಡಿ : ಪುಂಜಾಲಕಟ್ಟೆ–ಚಾರ್ಮಾಡಿ ರಾಷ್ಟ್ರೀಯ…
ಮಂಗಳೂರು :ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಎಸ್ಡಿಪಿಐ ಯಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ಮಂಗಳೂರು :ನಗರದಲ್ಲಿ ಕ್ಯಾಬಿನೇಟ್ ಸಭೆ…
ಕರ್ನಾಟಕದ 23 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮುಂದುವರಿದಿರುವ ಮಳೆ ಕೊರತೆ ಹಾಗೂ ಒಣಹವೆ…