ಮಂಗಳೂರು: ಮಹಾ ಮಳೆಯಿಂದ ತತ್ತರಿಸಿದ್ದ ಮಂಗಳೂರು ಮತ್ತೆ ಸಹಜ ಸ್ಥಿತಿಗೆ ಮರಳಿದೆ. ಚಂಡಮಾರುತ ಪರಿಣಾಮದಿಂದ ಕೆಲವು ದಿನಗಳಿಂದ ದಿನಪೂರ್ತಿ ಸುರಿದ ಮಳೆರಾಯ ತನ್ನ ಪ್ರತಾಪ ನಿಲ್ಲಿಸಿದ್ದಾನೆ. ಆದರೆ ಈ ಮಳೆಗೆ ಮಂಗಳೂರಿನಲ್ಲಿ ಬರೋಬ್ಬರಿ ಸುಮಾರು 20 ಕೋಟಿ ರೂ.ಗಿಂತ ಅಧಿಕ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಮಳೆಯಿಂದ ರಸ್ತೆ, ಮನೆ, ಮತ್ತು ಸೇತುವೆಗಳು ಸೇರಿದಂತೆ ಒಟ್ಟಾರೆ 20 ಕೋಟಿ ರೂ. ನಷ್ಟ ಆಗಿದೆ. ರಸ್ತೆ ಮತ್ತು ಸೇತುವೆಗಳಿಂದ 16.61 ಕೋಟಿ ರೂ. ನಷ್ಟವಾಗಿದೆ. ಇನ್ನು ಈ ಮಳೆಯಿಂದ 560 ಮನೆಗಳಿಗೆ ಹಾನಿಯಾಗಿದ್ದು, ಸುಮಾರು 4 ಕೋಟಿ ರೂ. ನಷ್ಟ ಆಗಿದೆ ಎಂದು ಅಂದಾಜಿಸಲಾಗಿದೆ. ರಸ್ತೆ ಹಾನಿಯಿಂದ 3.51 ಕೋಟಿ ರೂ., ಸೇತುವೆಯಿಂದ 1 ಕೋಟಿ ರೂ. ಮತ್ತು ವಿದ್ಯುತ್ ತಂತಿ, ಕಂಬ ಹಾಗೂ ಪರಿವರ್ತಕಗಳಿಂದ 1.95 ಕೋಟಿ ರೂ. ನಷ್ಟವಾಗಿದೆ ತಿಳಿದು ಬಂದಿದೆ.
ಮಂಗಳೂರಿನ ಮಹಾಮಳೆ ಹಠಾತ್ ಬ್ರೇಕ್ ಹಾಕಿದ್ದು, ಕರಾವಳಿ ಜನ ದೀರ್ಘ ನಿಟ್ಟುಸಿರು ಬಿಟ್ಟಿದ್ದಾರೆ. ಹವಾಮಾನ ಇಲಾಖೆ ಮಾತ್ರ ಇನ್ನೆರಡು ದಿನವೂ ಮಳೆಯಾಗುವ ಮುನ್ಸೂಚನೆ ನೀಡಿದ್ದು ಜಿಲ್ಲಾಡಳಿತ ಪರಿಸ್ಥಿತಿ ಎದುರಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನೂ ಮಂಗಳೂರಿಗೆ ಕರೆಸಿಕೊಂಡಿದೆ. ನಗರದಲ್ಲಿ ಒತ್ತುವರಿ ಮಾಡಿಕೊಂಡಿರುವ ಬಗ್ಗೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಖಡಕ್ ಆದೇಶ ನೀಡಿದ್ದಾರೆ.
ನಗರದಲ್ಲಿ ಚರಂಡಿ ವ್ಯವಸ್ಥೆ ಸರಿಯಿಲ್ಲದಿರುವುದು, ಕಟ್ಟಡ ನಿರ್ಮಾಣಗಳು ರಸ್ತೆಯಲ್ಲೇ ಆಗಿರೋದು ಹಾಗೂ ಕಾಲುವೆಗಳ ಒತ್ತುವರಿ ಆಗಿದ್ದೇ ಈ ಅವಾಂತರಕ್ಕೆ ಕಾರಣ ಅನ್ನೋದು ಬೆಳಕಿಗೆ ಬಂದಿದೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…