ಮಂಗಳೂರು: ಮಹಾ ಮಳೆಯಿಂದ ತತ್ತರಿಸಿದ್ದ ಮಂಗಳೂರು ಮತ್ತೆ ಸಹಜ ಸ್ಥಿತಿಗೆ ಮರಳಿದೆ. ಚಂಡಮಾರುತ ಪರಿಣಾಮದಿಂದ ಕೆಲವು ದಿನಗಳಿಂದ ದಿನಪೂರ್ತಿ ಸುರಿದ ಮಳೆರಾಯ ತನ್ನ ಪ್ರತಾಪ ನಿಲ್ಲಿಸಿದ್ದಾನೆ. ಆದರೆ ಈ ಮಳೆಗೆ ಮಂಗಳೂರಿನಲ್ಲಿ ಬರೋಬ್ಬರಿ ಸುಮಾರು 20 ಕೋಟಿ ರೂ.ಗಿಂತ ಅಧಿಕ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಮಳೆಯಿಂದ ರಸ್ತೆ, ಮನೆ, ಮತ್ತು ಸೇತುವೆಗಳು ಸೇರಿದಂತೆ ಒಟ್ಟಾರೆ 20 ಕೋಟಿ ರೂ. ನಷ್ಟ ಆಗಿದೆ. ರಸ್ತೆ ಮತ್ತು ಸೇತುವೆಗಳಿಂದ 16.61 ಕೋಟಿ ರೂ. ನಷ್ಟವಾಗಿದೆ. ಇನ್ನು ಈ ಮಳೆಯಿಂದ 560 ಮನೆಗಳಿಗೆ ಹಾನಿಯಾಗಿದ್ದು, ಸುಮಾರು 4 ಕೋಟಿ ರೂ. ನಷ್ಟ ಆಗಿದೆ ಎಂದು ಅಂದಾಜಿಸಲಾಗಿದೆ. ರಸ್ತೆ ಹಾನಿಯಿಂದ 3.51 ಕೋಟಿ ರೂ., ಸೇತುವೆಯಿಂದ 1 ಕೋಟಿ ರೂ. ಮತ್ತು ವಿದ್ಯುತ್ ತಂತಿ, ಕಂಬ ಹಾಗೂ ಪರಿವರ್ತಕಗಳಿಂದ 1.95 ಕೋಟಿ ರೂ. ನಷ್ಟವಾಗಿದೆ ತಿಳಿದು ಬಂದಿದೆ.
ಮಂಗಳೂರಿನ ಮಹಾಮಳೆ ಹಠಾತ್ ಬ್ರೇಕ್ ಹಾಕಿದ್ದು, ಕರಾವಳಿ ಜನ ದೀರ್ಘ ನಿಟ್ಟುಸಿರು ಬಿಟ್ಟಿದ್ದಾರೆ. ಹವಾಮಾನ ಇಲಾಖೆ ಮಾತ್ರ ಇನ್ನೆರಡು ದಿನವೂ ಮಳೆಯಾಗುವ ಮುನ್ಸೂಚನೆ ನೀಡಿದ್ದು ಜಿಲ್ಲಾಡಳಿತ ಪರಿಸ್ಥಿತಿ ಎದುರಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನೂ ಮಂಗಳೂರಿಗೆ ಕರೆಸಿಕೊಂಡಿದೆ. ನಗರದಲ್ಲಿ ಒತ್ತುವರಿ ಮಾಡಿಕೊಂಡಿರುವ ಬಗ್ಗೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಖಡಕ್ ಆದೇಶ ನೀಡಿದ್ದಾರೆ.
ನಗರದಲ್ಲಿ ಚರಂಡಿ ವ್ಯವಸ್ಥೆ ಸರಿಯಿಲ್ಲದಿರುವುದು, ಕಟ್ಟಡ ನಿರ್ಮಾಣಗಳು ರಸ್ತೆಯಲ್ಲೇ ಆಗಿರೋದು ಹಾಗೂ ಕಾಲುವೆಗಳ ಒತ್ತುವರಿ ಆಗಿದ್ದೇ ಈ ಅವಾಂತರಕ್ಕೆ ಕಾರಣ ಅನ್ನೋದು ಬೆಳಕಿಗೆ ಬಂದಿದೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…