Featured

ಮಂಗಳೂರಿನ ಲೇಡಿ ಹಿಲ್ ವೃತ್ತಕ್ಕೆ ಪರಮ ಪೂಜ್ಯ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನು ಇಡುವುದು ಶತಸಿದ್ದ -Vishwanews24

ಮಂಗಳೂರಿನ ಲೇಡಿ ಹಿಲ್ ವೃತ್ತಕ್ಕೆ ಪರಮ ಪೂಜ್ಯ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನು ಇಡುವುದು ಶತಸಿದ್ದ -Vishwanews24

ಮಂಗಳೂರು : ಮಂಗಳೂರಿನ ಪ್ರತಿಷ್ಠಿತ ವೃತ್ತ ಬ್ರಿಟೀಷರ ಹೆಸರಿನ ಲೇಡಿ ಹಿಲ್ ಸರ್ಕಲ್ ಅನ್ನು ಬದಲಾಯಿಸಿ ಪರಮ ಪೂಜ್ಯ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನು ಮರುನಾಮಕರಣ ಮಾಡುವಂತೆ ಅಖಿಲ ಭಾರತ ಹಿಂದೂ ಮಹಾಸಭಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಸಂಸದೀಯ ಕಾರ‍್ಯದರ್ಶಿ ಶ್ರೀ ಧರ್ಮೆಂದ್ರ ಅವರು ಒತ್ತಾಯಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಬಹುಸಂಖ್ಯಾತ ಹಿಂದುಗಳ ಬಹುದಿನದ ಕನಸಾಗಿರುವ, ಗುಲಾಮಗಿರಿಯ ಸಂಕೇತವೆಂದೇ ಕರೆಸಿಕೊಂಡಿರುವ, ಮಂಗಳೂರಿನ ಪ್ರತಿಷ್ಠಿತ ವೃತ್ತ ಬ್ರಿಟೀಷರ ಹೆಸರಿನ ಲೇಡಿ ಹಿಲ್ ಸರ್ಕಲ್ ಅನ್ನು ಬದಲಾಯಿಸಿ ಪರಮ ಪೂಜ್ಯ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನು ಮರುನಾಮಕರಣ ಮಾಡುವಂತೆ ಸಾಕಷ್ಟು ಬಾರಿ ಒತ್ತಾಯಿಸಿದ್ದರೂ, ಮಂಗಳೂರು ಮಹಾನಗರಪಾಲಿಕೆಯ ಸಭೆಯಲ್ಲಿ ಕಾಂಗ್ರೆಸಿನ ಸದಸ್ಯರು ಈ ಬಗ್ಗೆ ವಿರೋಧವನ್ನು ವ್ಯಕ್ತಪಡಿಸಿದ್ದರೂ, ಆಡಳಿತರೂಡ ಭಾರತೀಯ ಜನತಾ ಪಾರ್ಟಿಯ ಸದಸ್ಯರು ಮೌನಕ್ಕೆ ಶರಣಾಗಿರುವುದು. ಭಾರತೀಯ ಜನತಾ ಪಾರ್ಟಿಯ ಹಿಂದುತ್ವಕ್ಕೆ ಹಿಡಿದ ಕೈಗನ್ನಡಿಯಂತಿದೆ ಯಾವುದೇ ಬೆಲೆ ಇತ್ತಾದರೂ, ಈ ವೃತ್ತಕ್ಕೆ ಪರಮ ಪೂಜ್ಯರ ಹೆಸರನ್ನು ಇಡುವುದು ಶತಸಿದ್ದ ಎಂದಿದ್ದಾರೆ.

ಈಗಾಗಲೇ ಸಂಬಂಧ ಪಟ್ಟ ಇಲಾಖೆಗಳಿಗೆ ವಿಚಾರವನ್ನು ತಿಳಿಸಿದ್ದು ತಕ್ಷಣ ಈ ಬಗ್ಗೆ ಗೊತ್ತುವಳಿಯನ್ನು ಮಂಡಣೆಮಾಡಿ, ವೃತ್ತದ ಹೆಸರನ್ನು ಮರುನಾಮಕರಣಗೊಳಿಸಿ ಪರಮ ಪೂಜ್ಯ ಗುರುಗಳ ಹೆಸರನ್ನು ಘೋಷಿಸಬೇಕೆಂದು ಅಖಿಲ ಭಾರತ ಹಿಂದೂ ಮಹಾಸಭಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಆಗ್ರಹಿಸುತ್ತಿದೆ. ಈ ಬಗ್ಗೆ, ಚುನಾವಣೆ ಮುಗಿದ ತಕ್ಷಣ, ವೃತ್ತದ ಬಳಿ ಸಂಕೇತಿಕವಾಗಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇದಲ್ಲದೆ, ರಾಷ್ಟ್ರ ವಿರೋಧಿ ಬರಹಗಳನ್ನು ಬರೆಯುವ ದೇಶ ದ್ರೋಹಿಗಳ ಬಗ್ಗೆ ಆತಂಕವಾದ ಅಳಿಸಿ ದೇಶ ಉಳಿಸಿ ಎಂಬ ಘೋಷ ವ್ಯಾಕ್ಯದೊಂದಿಗೆ ಹಿಂದೂ ಮಹಾಸಭಾ ಈ ಹಿಂದೆ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಕರಾವಳಿಯಲ್ಲಿ ಭಯೋತ್ಪಾದನೆ ಚಟುವಟಿಕೆಗಳ ಬಗ್ಗೆ ಮಾಧ್ಯಮ ಹಾಗೂ ಸರಕಾರದ ಗಮನಕ್ಕೆ ತಂದ ಕೆಲವೇ ತಿಂಗಳಲ್ಲಿ ಯಾಸಿ ಭಟ್ಕಳ ಬಂಧನವಾಗಿದ್ದನ್ನು, ತದನಂತರ ಸಾಕಷ್ಟು ಬಂಧನಗಳು ನಡೆದಿದ್ದನ್ನು ಇಲ್ಲಿ ಸ್ಮರಿಸಬಹುದು. ಇದರ ಮುಂದುವರಿದ ಭಾಗವಾಗಿ ಇತ್ತೀಚೆಗೆ ಮಂಗಳೂರಿನ ಕದ್ರಿ ಪೋಲಿಸ್ ಠಾಣೆಯ ಮುಂಭಾಗ ಹಾಗೂ ಕೋರ್ಟ್ ಆವರಣದಲ್ಲಿ ತಾಲಿಬಾನ್ ಜಿಂದಾಬಾದ್ ಲಷ್ಕರ್ ಜಿಂದಾಬಾದ್ ಎಂಬ ಬರವಣಿಗೆ ಮಾಧ್ಯಮಗಳು ಪ್ರಸಾರ ಮಾಡಿದ್ದು ಇದು ಆಡಳಿತದಲ್ಲಿರುವ ಭಾರತೀಯ ಜನತಾ ಪಾರ್ಟಿಯ ವೈಫಲ್ಯತೆಯನ್ನು ಎತ್ತಿ ತೋರಿಸುತ್ತದೆ.

ಹಿಂದು ನಾಯಕರ ಹೇಳಿಕೆಗಳ ವಿರುದ್ಧ ಸ್ವಮೋಟೊ ಕೇಸ್ ದಾಖಲಿಸುವ ಪೋಲಿಸ್ ಇಲಾಖೆ ಈ ವಿಚಾರದಲ್ಲಿ ಯಾವ ಕ್ರಮಕೈಗೊಂಡಿದೆ ಎಂದು ಸ್ಪಷ್ಟಪಡಿಸಬೇಕು, ಹಾಗೂ ಜಾಣ ಕುರುಡು ಪ್ರದರ್ಶಿಸುವ ಸರಕಾರ ಕೂಡಲೇ ಈ ಕೃತ್ಯಕ್ಕೆ ಕಾರಣವಾದ ಭಯೋತ್ಪದಕರನ್ನು/ ಉಗ್ರಗಾಮಿಗಳನ್ನು/ ದೇಶದ್ರೋಹಿಗಳನ್ನು ಬಂಧಿಸಿ ಜನರಲ್ಲಿ ಮೂಡಿರುವ ಭಯ, ಗೊಂದಲವನ್ನು ನಿವಾರಿಸಬೇಕಾಗಿ ಹಿಂದೂ ಮಹಾಸಭಾವು ಆಗ್ರಹಿಸಿತ್ತದೆ. ಇದಕ್ಕೆ ಸಂಬಂದಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಕೀಲರ ಸಂಘಕ್ಕೂ ಮನವಿಯನ್ನು ಮಾಡಿದೆ, ಯಾವುದೇ ಕಾರಣಕ್ಕೂ ಇಂತಹ ಕೃತ್ಯಗಳಲ್ಲಿ ಭಾಗಿಯಾಗುವವರಿಗೆ ಯಾವುದೇ ರೀತಿಯ ಕಾನೂನಿನ ಸಲಹೆ ಅಥವಾ ವಕಾಲತ್ತನ್ನು ವಹಿಸಬಾರದು ಎಂದು ಮತ್ತೊಮ್ಮೆ ಈ ಮಾಧ್ಯಮದ ಮೂಲಕ ವಿನಂತಿಸಿಕೊಂಡಿದ್ದಾರೆ.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

3 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

4 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

4 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

4 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

4 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

6 hours ago