Featured

ಮಂಗಳೂರಿನ ಸಂತ ಜೆರೋಸ ಕಾನ್ವೆಂಟ್ ಶಾಲೆಯಲ್ಲಿ ನಡೆದ ಘಟನೆಯಿಂದಾಗಿ ಕ್ರೈಸ್ತ ಸಮುದಾಯಕ್ಕೆ ನೋವಾಗಿದೆ :ಬೇಸರ ವ್ಯಕ್ತಪಡಿಸಿದ  ಬೆಂಗಳೂರಿನ ಆರ್ಚ್ ಬಿಷಪ್ ಡಾ. ಪೀಟರ್ ಮಚಾದೊ – Vishwanews24

ಮಂಗಳೂರಿನ ಸಂತ ಜೆರೋಸ ಕಾನ್ವೆಂಟ್ ಶಾಲೆಯಲ್ಲಿ ನಡೆದ ಘಟನೆಯಿಂದಾಗಿ ಕ್ರೈಸ್ತ ಸಮುದಾಯಕ್ಕೆ ನೋವಾಗಿದೆ :ಬೇಸರ ವ್ಯಕ್ತಪಡಿಸಿದ  ಬೆಂಗಳೂರಿನ ಆರ್ಚ್ ಬಿಷಪ್ ಡಾ. ಪೀಟರ್ ಮಚಾದೊ

ಬೆಂಗಳೂರು: ಮಂಗಳೂರಿನ ಸಂತ ಜೆರೋಸ ಕಾನ್ವೆಂಟ್ ಶಾಲೆಯಲ್ಲಿ ನಡೆದ ಘಟನೆಯಿಂದಾಗಿ ಕ್ರೈಸ್ತ ಸಮುದಾಯಕ್ಕೆ ನೋವಾಗಿದೆ ಎಂದು ಬೆಂಗಳೂರಿನ ಆರ್ಚ್ ಬಿಷಪ್ ಡಾ. ಪೀಟರ್ ಮಚಾದೊ ಬೇಸರ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಮಂಗಳೂರಿನ ಸಂತ ಜೆರೋಸ ಕಾನ್ವೆಂಟ್ ಶಾಲೆಯಲ್ಲಿ ನಡೆದ ಘಟನೆಯ ನಂತರ ಅಲ್ಲಿನ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಜನರ ಗುಂಪು ಹಿಂದೂ ಧರ್ಮದ ಬಗ್ಗೆ ಹಾಗೂ ರಾಷ್ಟ್ರೀಯ ನಾಯಕರ ವಿರುದ್ಧ ಆಕ್ಷೇಪಾರ್ಹ ಮಾತುಗಳನ್ನು ಆಡಿದ್ದಾರೆ ಎಂದು ಆರೋಪಿಸಲಾಗಿರುವ ಸಿಸ್ಟರ್ (ಧಾರ್ಮಿಕ ಭಗಿನಿ) ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಪ್ರತಿಭಟನೆಯನ್ನು ನಡೆಸಿದೆ. ವಾಸ್ತವವಾಗಿ ಆ ಸಿಸ್ಟರ್ ಏನು ಹೇಳಿದರು ಹಾಗೂ ವಿದ್ಯಾರ್ಥಿಗಳು ತಮ್ಮ ಪೋಷಕರಲ್ಲಿ ಇದನ್ನು ಯಾವ ರೀತಿಯಲ್ಲಿ ವ್ಯಾಖ್ಯಾನಿಸಿದರು ಮತ್ತು ಸಾರ್ವಜನಿಕರು ಇದಕ್ಕೆ ಆಕ್ರೋಶದಿಂದ ವರ್ತಿಸಿದ್ದು ಏಕೆ ಎಂದು ವಸ್ತುನಿಷ್ಠವಾಗಿ ಯಾರಿಗೂ ಗೊತ್ತಿಲ್ಲ ಎಂದು ಹೇಳಿದ ಮಚಾದೊ ಅವರು, ಸುಮಾರು ನೂರು ವರ್ಷಗಳಿಗೂ ಹೆಚ್ಚು ಇತಿಹಾಸವನ್ನು ಹೊಂದಿರುವ ಮಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಜೆರೋಸ ಕಾನ್ವೆಂಟ್ ಶಾಲೆಯನ್ನು ಯಾವುದೋ ಒಂದು ಯಕಶ್ಚಿತ್ ಘಟನೆಯಿಂದ, ಯಾವುದೇ ತನಿಖೆ ನಡೆಸದೆ ಅವಮಾನಕ್ಕೆ ಒಳಪಡಿಸಿರುವುದು ಕ್ರೈಸ್ತ ಸಮುದಾಯಕ್ಕೆ ನೋವನ್ನು ಉಂಟು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮಂಗಳೂರಿನ ಜನತೆಗೆ ಗೊತ್ತಿರುವಂತೆ ಈ ಶಿಕ್ಷಣ ಸಂಸ್ಥೆಯು ಸಮಾಜದ ವಿವಿಧ ಕ್ಷೇತ್ರಗಳಿಗೆ ಅನೇಕ ಮಹನೀಯರನ್ನು ಕೊಡುಗೆಯಾಗಿ ನೀಡಿದೆ. ವಿಶೇಷವಾಗಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಸಮಾಜದ ಎಲ್ಲಾ ಧರ್ಮಗಳ, ಎಲ್ಲಾ ಜಾತಿಗಳ ಜನರಿಗೆ ಯಾವುದೇ ಭೇದ ಭಾವವಿಲ್ಲದೆ ನಮ್ಮ ಕ್ರೈಸ್ತ ಸಂಸ್ಥೆಗಳು ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿರುವುದು ಸಾರ್ವತ್ರಿಕ ಸತ್ಯವಾಗಿದೆ. ಪ್ರಸ್ತುತ ದೇಶ ಹಾಗೂ ವಿದೇಶಗಳಲ್ಲಿ ನೆಲೆಸಿ, ದೊಡ್ಡ ಹುದ್ದೆಗಳಲ್ಲಿರುವ ಹಾಗೂ ಬದುಕಿನಲ್ಲಿ ಯಶಸ್ವಿಯಾಗಿರುವ ಸಾವಿರಾರು ಕ್ರೈಸ್ತೇತರ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡುವ ಮೂಲಕ ನಮ್ಮ ಅಲ್ಪಸಂಖ್ಯಾತ ಸಂಸ್ಥೆಗಳು ಅವರ ಬದುಕನ್ನು ರೂಪಿಸಿವೆ. ಅವರೆಲ್ಲರೂ ಈಗಲೂ ಸಹ ತಾವು ಕಲಿತ ವಿದ್ಯಾಸಂಸ್ಥೆಗೆ ಕೃತಜ್ಞರಾಗಿದ್ದಾರೆ. ಈ ಪ್ರಕರಣದಲ್ಲಿ ಯಾವುದೇ ಸರ್ಕಾರದ ತನಿಖೆ ಇಲ್ಲದೆ ಇದ್ದರೂ ಸಹ, ಈ ಘಟನೆಗೆ ಸಂಬಂಧಿಸಿದ ಶಿಕ್ಷಕಿಯನ್ನು ಅಮಾನತ್ತು ಮಾಡಲಾಗಿದೆ. ಅಲ್ಲದೆ, ಈ ಶಾಲೆಯ ಮುಖ್ಯೋಪಾಧ್ಯಾಯನಿ ಸಿಸ್ಟರ್ ಅವರು ಪ್ರತಿಭಟನಾಕಾರರ ಕ್ಷಮೆಯನ್ನು ಯಾಚಿಸಿದ ನಂತರವೂ, ಸಂಪೂರ್ಣ ನಿಜಾಂಶ ಹೊರಗೆ ಬರುವವರೆಗೂ ಸ್ಥಳೀಯ ಶಾಸಕರಿಗೂ ಹಾಗೂ ಅವರ ಜೊತೆಗೆ ಬಂದಿದ್ದ ಜನರ ಗುಂಪಿಗೂ ತಾಳ್ಮೆ ಇರಲಿಲ್ಲ ಎಂದು ಪೀಟರ್ ಮಚಾದೊ ಅವರು ಹೇಳಿದ್ದಾರೆ.

ಕ್ರೈಸ್ತ ಸಮುದಾಯವಾದ ನಾವು, ವಿಶೇಷವಾಗಿ ಗುರುಗಳು ಧಾರ್ಮಿಕ ಬಕಿನರು ಎಂದಿಗೂ ಎಲ್ಲಾ ಧರ್ಮಗಳನ್ನು ಗೌರವಿಸಿ ಅವುಗಳ ಮೌಲ್ಯಗಳನ್ನು ಎತ್ತಿ ಹಿಡಿಯುತ್ತೇವೆ. ಕೆಲವೊಮ್ಮೆ ಕೆಲವು ಧಾರ್ಮಿಕ ಮೂಲಭೂತವಾಗಿ ಗುಂಪುಗಳು ಮತ್ತೊಂದು ಧರ್ಮದ ಮೇಲೆ ಸೇಡನ್ನು ತೀರಿಸಿಕೊಳ್ಳಲು ಅವರ ಮೇಲೆ ಸುಳ್ಳು ಆರೋಪಗಳನ್ನು ಹಬ್ಬಿಸುವ ಮೂಲಕ ಸಾರ್ವಜನಿಕರಲ್ಲಿ ವಿಭಜನೆಯನ್ನು ಸೃಷ್ಟಿಸುತ್ತಿದ್ದಾರೆ. ಇದು ಸಹ ಈ ಘಟನೆಗೆ ಕಾರಣವಾಗಿರಬಹುದು ಎಂದು ಅವರು ಹೇಳಿದ್ದಾರೆ.

ರಾಜಕೀಯವಾಗಿ ಆಯ್ಕೆಯಾದ ನಾಯಕರು ಸಮಾಜದಲ್ಲಿ ಸಾಮರಸ್ಯ ಹಾಗೂ ಏಕತೆಯ ಪ್ರತಿನಿಧಿಗಳಾಗುವ ಬದಲು ಅನೇಕ ಬಾರಿ ವಿಭಜನೆಯ ನಾಯಕರಾಗುತ್ತಿದ್ದಾರೆ. ಕ್ರಿಸ್ಮಸ್ ಹಬ್ಬದ ದಿನ ದೆಹಲಿಯಲ್ಲಿ ಪ್ರಧಾನಮಂತ್ರಿಗಳು ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಕ್ರೈಸ್ತ ಸಮುದಾಯವು ನೀಡಿರುವ ನಿಸ್ವಾರ್ಥ ಕೊಡುಗೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ನಂತರವೂ ಸಹ ಅವರ ಪಕ್ಷದ ಸದಸ್ಯರು ದೇಶದಾದ್ಯಂತ ಇದನ್ನು ಅರ್ಥ ಮಾಡಿಕೊಳ್ಳುವ ಬದಲಿಗೆ, ದ್ವೇಷ ಭಾಷಣ ಮಾಡುವುದರಲ್ಲಿ ನಿರತರಾಗಿದ್ದಾರೆ. ಅಲ್ಲದೆ ಸಂಕುಚಿತ ರಾಜಕಾರಣದಲ್ಲಿ ಮಗ್ನರಾಗಿದ್ದಾರೆ ಎಂದು ಆರ್ಚ್‍ಬಿಷಪ್ ಪೀಟರ್ ಮಚಾದೊ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುಂಪು ರಾಜಕೀಯವೇ ದೇಶದಲ್ಲಿ ಕಾನೂನಾಗಿದೆಯೇ? ಅಥವಾ ಸಮಾಜದಲ್ಲಿ ಶಾಂತಿ ಹಾಗೂ ಸಾಮರಸ್ಯವನ್ನು ಕಾಪಾಡುವ ನಿಟ್ಟಿನಲ್ಲಿ ನಾವು ನ್ಯಾಯದ ಪ್ರಕ್ರಿಯೆಯಲ್ಲಿ ನಂಬಿಕೆಯನ್ನು ಇಡಬಹುದೇ? ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಗಳ ಪಾತ್ರವನ್ನು ಸಹ ನಾವು ವಿಮರ್ಶೆಗೆ ಒಳಪಡಿಸಬೇಕು. ನಾಗರೀಕರು ಹಾಗೂ ಸಂಸ್ಥೆಗಳು ಅಸಹಾಯಕ ಸ್ಥಿತಿಯಲ್ಲಿರುವಾಗ ಮಧ್ಯಪ್ರವೇಶಿಸಿ, ಸಮಸ್ಯೆಯನ್ನು ನ್ಯಾಯಾತ್ಮಕವಾಗಿ ಬಗೆಹರಿಸಿ, ಇವರ ಬೆಂಬಲಕ್ಕೆ ನಿಲ್ಲುವುದು ಅವರ ಕರ್ತವ್ಯವಲ್ಲವೇ?. ಕ್ರೈಸ್ತ ಸಮುದಾಯದ ಹಾಗೂ ಅದರ ನಾಯಕರ ವಿರುದ್ಧ ಸುಳ್ಳು ಆರೋಪಗಳು ಹೊರಿಸಿದ ಹಾಗೂ ಅವಮಾನ ಮಾಡಿದ ನಂತರವೂ ಸಹ ನಾವು ಸಮಾಜಕ್ಕೆ ಸೇವೆ ಮಾಡುವುದನ್ನು ಮುಂದುವರಿಸುತ್ತೇವೆ. ವಿಶೇಷವಾಗಿ ಬಡವರು, ಶೋಷಿತರು ಹಾಗೂ ದಮನಿತರಿಗೆ ಉತ್ತಮ ಗುಣಮಟ್ಟದ ಸೇವೆಯನ್ನು ನೀಡುತ್ತೇವೆ ಮಾತ್ರವಲ್ಲದೆ ನಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸುವವರಿಗೆ ಹಾಗೂ ನಮಗೆ ನೋವನ್ನು ಉಂಟುಮಾಡುವವರಿಗೆ ಯೇಸುಕ್ರಿಸ್ತರೇ ಹೇಳಿದಂತೆ “ತಂದೆಯೇ ಇವರನ್ನು ಕ್ಷಮಿಸಿರಿ ಇವರು ಏನು ಮಾಡುತ್ತಿದ್ದಾರೆಂದು ಅರಿಯರು” ಎಂದು ಹೇಳಿ ಪ್ರಾರ್ಥಿಸುತ್ತೇವೆ ಎಂದು ಕರ್ನಾಟಕ ಪ್ರಾಂತ್ಯ ಕಥೋಲಿಕ ಧರ್ಮಾಧ್ಯಕ್ಷರ ಮಂಡಳಿಯ ಅಧ್ಯಕ್ಷರೂ ಆದ ಡಾ. ಪೀಟರ್ ಮಚಾದೊ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

13 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

13 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

13 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

14 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

15 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

15 hours ago