Featured

ಮಂಗಳೂರು:ಇಂಟಕ್‌ನಿಂದ ಕಾಂಗ್ರೆಸ್ ಸ್ಥಾಪನಾ ದಿನಾಚರಣೆ :ಕಾಂಗ್ರೆಸ್  ದೇಶಕ್ಕೆ ಸ್ವಾತಂತ್ರ ಗಳಿಸಿಕೊಟ್ಟ ಪಕ್ಷವಾಗಿದ್ದು ,ಬಡತನ ನಿವಾರಣೆಗೆ ಕಾಂಗ್ರೆಸ್ ಕೊಡುಗೆ ಅಪಾರ : ವಿನಯ ಕುಮಾರ್ ಸೊರಕೆ -Vishwanews24

ಮಂಗಳೂರು:ಇಂಟಕ್‌ನಿಂದ ಕಾಂಗ್ರೆಸ್ ಸ್ಥಾಪನಾ ದಿನಾಚರಣೆ :ಕಾಂಗ್ರೆಸ್  ದೇಶಕ್ಕೆ ಸ್ವಾತಂತ್ರ ಗಳಿಸಿಕೊಟ್ಟ ಪಕ್ಷವಾಗಿದ್ದು ,ಬಡತನ ನಿವಾರಣೆಗೆ ಕಾಂಗ್ರೆಸ್ ಕೊಡುಗೆ ಅಪಾರ : ವಿನಯ ಕುಮಾರ್ ಸೊರಕೆ -Vishwanews24

ಕಾಂಗ್ರೆಸ್ ಸ್ಥಾಪನಾ ದಿನಾಚರಣೆ ಹಾಗೂ ರಾಷ್ಟ್ರೀಯ ಇಂಟಕ್ ನಾಯಕ ರಾಕೇಶ್ ಮಲ್ಲಿ ಅವರ 50ನೇ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಹಾಗೂ ಅಕ್ಕಿ ವಿತರಣಾ ಕಾರ್ಯಕ್ರಮ..

ಮಂಗಳೂರು,: ಇಂಟಕ್ ಹಾಗೂ ಯೂತ್ ಇಂಟಕ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಶ್ರಯದಲ್ಲಿ ರೆಡ್‌ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಲೇಡಿಗೋಶನ್ ಆಸ್ಪತ್ರೆ ಸಹಯೋಗದೊಂದಿಗೆ ಕಾಂಗ್ರೆಸ್ ಸ್ಥಾಪನಾ ದಿನಾಚರಣೆ ಹಾಗೂ ರಾಷ್ಟ್ರೀಯ ಇಂಟಕ್ ನಾಯಕ ರಾಕೇಶ್ ಮಲ್ಲಿ ಅವರ 50ನೇ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಹಾಗೂ ಅಕ್ಕಿ ವಿತರಣಾ ಕಾರ್ಯಕ್ರಮ ನಗರದ ಪುರಭವನದಲ್ಲಿ ಇಂದು ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕೇಂದ್ರ ಸರಕಾರ ಅನುಸರಿಸುತ್ತಿರುವ ಕಾರ್ಮಿಕ, ರೈತ ವಿರೋಧಿ ನೀತಿಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಾರ್ಮಿಕರು ಹಾಗೂ ರೈತರಿಗೆ ಬೆಂಬಲವಾಗಿ ನಿಲ್ಲುವ ಸಂಕಲ್ಪ ತೊಡಬೇಕು ಎಂದರು.

ಕಾಂಗ್ರೆಸ್ ಪಕ್ಷ ದೇಶಕ್ಕೆ ಸ್ವಾತಂತ್ರ ಗಳಿಸಿಕೊಟ್ಟ ಪಕ್ಷವಾಗಿದ್ದು ಸತ್ಯ, ಶಾಂತಿ, ಅಹಿಂಸೆ ಮೂಲಕವೂ ಗೆಲುವು ಸಾಧಿಸಬಹುದು ಎಂಬುದನ್ನು ಜಗತ್ತಿಗೆ ತೋರಿಸಿಕೊಟ್ಟಿದೆ. ದೇಶದ ಏಕತೆ, ಬಡತನ ನಿವಾರಣೆಗೆ ಕಾಂಗ್ರೆಸ್ ಬಹಳಷ್ಟು ಕೊಡುಗೆಗಳನ್ನು ನೀಡಿದೆ ಎಂದವರು ಹೇಳಿದರು.

ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್ ಮಲ್ಲಿ ಅವರು ಮಾತನಾಡಿ, ಕೇಂದ್ರ ಸರಕಾರ ದೇಶದ ಕೈಗಾರಿಕೆ, ಸಂಸ್ಥೆಗಳನ್ನು ಖಾಸಗೀಕರಣ ಮಾಡುತ್ತಿದೆ. ಇದರಿಂದಾಗಿ ದೇಶದ ಜನತೆಗೆ ಉದ್ಯೋಗ ಇಲ್ಲದಂತಾಗಿದೆ. ಇದು ಕಳವಳಕಾರಿ ವಿಚಾರವಾಗಿದೆ. ಇಂಟಕ್‌ನ್ನು ಇನ್ನಷ್ಟು ಬಲಪಡಿಸಿ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಅಭಿಯಾನ ನಡೆಸಲಾಗುವುದು ಎಂದು ಹೇಳಿದರು.

ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕ ಬಿ.ಎ. ಮೊದಿನ್ ಬಾವಾ, ಮಾಜಿ ಮೇಯರ್‌ಗಳಾದ ಭಾಸ್ಕರ್ ಮೊಲಿ, ಶಶಿಧರ ಹೆಗ್ಡೆ, ಕವಿತಾ ಸನಿಲ್, ಯುವ ಇಂಟಕ್ ರಾಜ್ಯಾಧ್ಯಕ್ಷ ವರುಣ್ ಕುಮಾರ್ ಎಸ್.ಕೆ, ಪ್ರಮುಖರಾದ ಕಳ್ಳಿಗೆ ತಾರಾನಾಥ ಶೆಟ್ಟಿ, ಕೋಡಿಜಾಲ್ ಇಬ್ರಾಹಿಂ, ತೇಜಸ್ವಿ ರಾಜ್, ಮಹಾಬಲ ಮಾರ್ಲ, ವಿಶ್ವಾಸ್ ದಾಸ್, ಲಕ್ಷ್ಮೀ ವೆಂಕಟೇಶ್, ಸಿ.ಎ. ರಹೀಂ, ಬಿ.ಕೆ.ಸುರೇಶ್, ಅಬೂಬಕರ್, ಯುವ ಇಂಟಕ್ ಅಧ್ಯಕ್ಷರಾದ ಪುನೀತ್ ಶೆಟ್ಟಿ, ಚಿರಂಜೀವಿ ಅಂಚನ್, ಶಿಪಾಲ್‌ರಾಜ್, ಸಂಪತ್ ಲೋಬೋ, ಪದ್ಮಸ್ಮಿತ್ ಅಧಿಕಾರಿ, ಹರೀಶ್ ರಾವ್, ಸಿದ್ದಿಕ್ ಹಸನ್, ಮೋಹನ್ ಕೋಟ್ಯಾನ್, ಜಯಪ್ರಕಾಶ್, ಶಾಫಿ ಕುತ್ತಮೊಟ್ಟೆ ಮೊದಲಾದವರು ಉಪಸ್ಥಿತರಿದ್ದರು.

ರಾಜ್ಯ ಯುವ ಇಂಟಕ್ ಪ್ರಧಾನ ಕಾರ್ಯದರ್ಶಿ ದಿನಕರ್ ಶೆಟ್ಟಿ ಸ್ವಾಗತಿಸಿದರು. ದ.ಕ ಜಿಲ್ಲಾ ಇಂಟಕ್ ಅಧ್ಯಕ್ಷ ಮನೋಹರ್ ಶೆಟ್ಟಿ ವಂದಿಸಿದರು. ಸಾಹಿಲ್ ರೈ ಮತ್ತು ಬೊಂಡಾಲ ಚಿತ್ತರಂಜನ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು

Vishwa News 24

Recent Posts

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

2 hours ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

3 hours ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

3 hours ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

4 hours ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

4 hours ago

ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ :  18 ತಿಂಗಳ ಮಗು ನಿಧನ  ; ವೈದ್ಯರ ವಿರುದ್ಧ ಪ್ರಕರಣ ದಾಖಲು – vishwanews24

ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ :  18 ತಿಂಗಳ ಮಗು ನಿಧನ  ; ವೈದ್ಯರ ವಿರುದ್ಧ ಪ್ರಕರಣ ದಾಖಲು ತಿರುವನಂತಪುರಂ:…

4 hours ago