ಮಂಗಳೂರು: ದಶಕದ ಇತಿಹಾಸದ ಪಂಪ್ ವೆಲ್ ಪ್ಲೈ ಓವರ್ ನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಲೋಕಾರ್ಪಣೆಗೊಳಿಸಿದ್ದು, ಇಂದಿನಿಂದಲೇ ಜನ ಸಂಚಾರಕ್ಕೆ ಮುಕ್ತವಾಗಿದೆ.
ಸಚಿವರು ಜ.31ರ ಬೆಳಗ್ಗೆ ರಿಬ್ಬನ್ ಕತ್ತರಿಸುವ ಮೂಲಕ ಪಂಪ್ ವೆಲ್ ಪ್ಲೈ ಓವರ್ ಜನ ಸಂಚಾರಕ್ಕೆ ಮುಕ್ತಗೊಳಿಸಿದರು. ಸರಳವಾಗಿ ನಡೆದ ಉದ್ಘಾಟನ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್, ಶಾಸಕ ವೇದವ್ಯಾಸ್ ಕಾಮತ್ , ಶಾಸಕ ವೈ ಭರತ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಇದೀಗ ಮಂಗಳೂರು ನಗರದ ಪಂಪ್ವೆಲ್ ಫ್ಲೈ ಓವರ್ ಲೋಕಾರ್ಪಣೆಗೊಳ್ಳುವ ಮೂಲಕ ದಶಕದ ಯೋಜನೆಯೊಂದು ಪೂರ್ಣಗೊಂಡಂತಾಗಿದೆ. 2010ರಲ್ಲಿ ಆರಂಭಗೊಂಡಿದ್ದ ಪಂಪ್ವೆಲ್ ಕಾಮಗಾರಿ ಬಳಿಕ ಆಮೆಗತಿ ಪಡೆದುಕೊಂಡಿತ್ತು. ಮಧ್ಯೆ ಸ್ವಲ್ಪ ವೇಗ ಪಡೆದುಕೊಂಡರೂ ಕೂಡ ಕಾಮಗಾರಿ ಅಂದುಕೊಂಡಷ್ಟು ವೇಗ ಪಡೆದುಕೊಂಡಿರಲಿಲ್ಲ. ಹತ್ತು ವರ್ಷಗಳ ಕಾಮಗಾರಿ ಅವಧಿ ಪಡೆದುಕೊಂಡ ಪಂಪ್ವೆಲ್ ಮೇಲ್ಸೇತುವೆ ಮಂಗಳೂರು ಸೇರಿದಂತೆ ದೇಶ ವಿದೇಶಗಳ ಜನರಿಗೆ ವಿಡಂಬಣೆಯ ವಿಚಾರವಾಗತೊಡಗಿತು. ಕಾಮಗಾರಿ ಸೇರಿದಂತೆ ಸಂಸದ ನಳಿನ್ ಕುಮಾರ್ ಕೂಡ ಟ್ರೋಲಿಗರ ಆಹಾರವಾಗಿದ್ದರು.
ಇದೀಗ ಪಂಪ್’ವೆಲ್ ಮೇಲ್ಸೇತುವೆ ಬಹುತೇಕ ಪೂರ್ಣಗೊಂಡಿ ಲೋಕರ್ಪಣೆಯಾಗಿದೆ. ಇನ್ನು ಮೇಲ್ಸೇತುವೆ ಜೋಡಿಸಿದ ರಸ್ತೆಗಳಿಗೆ ಡಾಂಬರು ಕೆಲಸ ವೇಗದಿಂದ ನಡೆಯುತ್ತಿದೆ.ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಗಳು ಉಭಯ ಕಡೆಗಳಿಂದಲೂ ಕಾಮಗಾರಿ ಕಾಲಮಿತಿಯಲ್ಲಿ ಮುಗಿಸುವ ಭರವಸೆಯನ್ನು ಜಿಲ್ಲಾಧಿಕಾರಿಗಳಿಗೆ ನೀಡಿದ್ದಾರೆ ಎನ್ನಲಾಗಿದೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಉಡುಪಿ, ದ. ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್, ರೋಹಿಣಿ ಸಿಂಧೂರಿ ನೇಮಕ ಬೆಂಗಳೂರು:…
ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು : ಆಗಸ್ಟ್ 15ರ…
ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ ಮಂಗಳೂರು: ʼಸಾವಿನ ನಂತರವೂ ಬದುಕಬಹುದು, ಸಮಾಜಕ್ಕೆ ಉಪಕಾರವಾಗುವ ಮೂಲಕʼ…
ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ…
ಬೆಳ್ತಂಗಡಿ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ಬಾಲಕಿ ಗಂಭೀರ ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು…
ವಂಚನೆ ಪ್ರಕರಣ : ಝೀನತ್ ಜಾಮೀನು ಅರ್ಜಿ ತಿರಸ್ಕೃತ ಉಡುಪಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪಡುಬಿದ್ರಿಯ ಝೀನತ್ ಇಬ್ರಾಹಿಂ ಜಾಮೀನಿಗಾಗಿ…