Featured

ಮಂಗಳೂರು:ಎಲ್ಲಾ ರೀತಿಯ ಕಾನೂನುಬಾಹಿರ ಚಟುವಟಿಕೆಗಳಿಗೆ ಕಠಿಣ ಕಾನೂನು ಕ್ರಮ :  ನೂತನ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ -Vishwanews24

ಮಂಗಳೂರು:ಎಲ್ಲಾ ರೀತಿಯ ಕಾನೂನುಬಾಹಿರ ಚಟುವಟಿಕೆಗಳಿಗೆ ಕಠಿಣ ಕಾನೂನು ಕ್ರಮ :  ನೂತನ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ –Vishwanews24

ಮಂಗಳೂರು : ಅಕ್ರಮ ಮರಳುಗಾರಿಕೆ ಸೇರಿದಂತೆ ಕಾನೂನುಬಾಹಿರ ಚಟುವಟಿಕೆ ನಿಯಂತ್ರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಜೊತೆಗೆ ಸರ ಅಪಹರಣ, ಕಳ್ಳತನ ಮೊದಲಾದ ಕೃತ್ಯಗಳನ್ನು ತಡೆಗಟ್ಟಲು ಈಗಾಗಲೇ ನಗರದ ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ. ಅದನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡಲಾಗುವುದು ಎಂದು ಮಂಗಳೂರಿನ ನೂತನ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಹೇಳಿದ್ದಾರೆ.

ಅವರು, ಶುಕ್ರವಾರ ಸಂಜೆ ಮಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ಎನ್ ಶಶಿಕುಮಾರ್ ಅವರು ಅಧಿಕಾರ ಸ್ವೀಕರಿಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು. ಮಂಗಳೂರು ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಬೀಟ್ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸಲಾಗುವುದು. ಮಂಗಳೂರಿನಲ್ಲಿ ಪ್ರಸ್ತುತ ಇರುವ ಬೀಟ್ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಬಲವರ್ಧನೆ ಮಾಡುವೆ ಎಂದರು.

ಕೊರೋನ ನಿಯಂತ್ರಣ ಕಾರ್ಯದಲ್ಲಿ ಪೊಲೀಸರು ಹೆಚ್ಚು ತೊಡಗಿಸಿಕೊಂಡಿದ್ದರಿಂದ ಬೀಟ್ ವ್ಯವಸ್ಥೆ ಅಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳದಿರಬಹುದು. ಬೀಟ್ ವ್ಯವಸ್ಥೆಯನ್ನು ಮತ್ತೆ ಬಲಗೊಳಿಸಲು ಕ್ರಮ ತೆಗೆದುಕೊಳ್ಳುತ್ತೇನೆ.

ನಗರದಲ್ಲಿ ಪೊಲೀಸರ ಮೇಲೆ ದಾಳಿ ನಡೆಸಿದ ಘಟನೆ ಬಗ್ಗೆ ತಿಳಿದಿದೆ. ಇಂತಹ ಕೃತ್ಯವನ್ನು ಯಾವುದೇ ಕಾರಣಕ್ಕೂ ಸಹಿಸದೆ ಅತ್ಯಂತ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪೊಲೀಸರು ಸಾರ್ವಜನಿಕರ ಹಿತದೃಷ್ಟಿಯಿಂದ ಕೆಲಸ ಮಾಡುವಾಗ ಯಾವುದೇ ರೀತಿಯ ಭಯ ಪಡುವ ಅಗತ್ಯವಿಲ್ಲ.

ಸರ ಅಪಹರಣ, ಕಳ್ಳತನ ಮೊದಲಾದ ಕೃತ್ಯಗಳನ್ನು ತಡೆಗಟ್ಟಲು ಈಗಾಗಲೇ ನಗರದ ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ. ಅದನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡಲಾಗುವುದು. ಅಕ್ರಮ ಮರಳುಗಾರಿಕೆ ಸೇರಿದಂತೆ ಕಾನೂನುಬಾಹಿರ ಚಟುವಟಿಕೆ ನಿಯಂತ್ರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಆರಂಭದಲ್ಲಿ ನಗರದ ಪೊಲೀಸ್ ಆಯುಕ್ತಾಲಯದ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಂಗಳೂರಿನ ನೂತನ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರಿಗೆ ನಿರ್ಗಮನ ಕಮಿಷನರ್ ವಿಕಾಸ್ ಕುಮಾರ್ ಅವರು ಅಧಿಕಾರ ಹಸ್ತಾಂತರಿಸಿದರು.

ಈ ವೇಳೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹರಿರಾಂ ಶಂಕರ್, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ವಿನಯ್ ಎ.ಗಾಂವ್ಕರ್ ಉಪಸ್ಥಿತರಿದ್ದರು.

https://bit.ly/3rNNjuchttp://ಮಂಗಳೂರು: ಬಬ್ಬುಸ್ವಾಮಿ ಕ್ಷೇತ್ರದ ಕಾಣಿಕೆ ಡಬ್ಬಿಗಳಲ್ಲಿ ಅವಹೇಳನಕಾರಿ ಬರಹ ಪತ್ತೆ , ನಗರದ ಮೂರು ದೈವಸ್ಥಾನಗಳಲ್ಲಿ ದುಷ್ಕರ್ಮಿಗಳಿಂದ ಇಂತಹ ಕೃತ್ಯ -Vishwanews24

Vishwa News 24

Recent Posts

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 hour ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

1 hour ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

2 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

2 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago