ಮಂಗಳೂರು: ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಈಗಾಗಲೇ ದ.ಕ. ಜಿಲ್ಲೆಯಲ್ಲಿ ಕೆಲವೊಂದು ನಿರ್ಬಂಧ ಹೇರಲಾಗಿದ್ದು, ಈ ನಡುವೆ ಯಕ್ಷಗಾನ, ಕೋಲ, ನೇಮ, ಪೂಜೆ, ಪುನಸ್ಕಾರಗಳು ಮತ್ತು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳನ್ನು ಕೋವಿಡ್ ನಿಯಮ ಪಾಲನೆಯೊಂದಿಗೆ ನಡೆಸಬಹುದೆಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ದ.ಕ. ಜಿಲ್ಲಾಧಿಕಾರಿಯವರು ಹೊರಡಿಸಿರುವ ಆದೇಶಕ್ಕೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮರು ಸ್ಪಷ್ಟನೆ ನೀಡಲು ಜಿಲ್ಲಾಧಿಕಾರಿಯವರಿಗೆ ತಿಳಿಸಿದ್ದೇನೆ. ಈಗಾಗಲೇ ಹಮ್ಮಿಕೊಂಡಿರುವ ಯಕ್ಷಗಾನ, ಕೋಲ, ನೇಮ, ಪೂಜೆ ಪುನಸ್ಕಾರ ಮತ್ತು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳು ಕೋವಿಡ್ ನಿಯಮ ಪಾಲನೆಯೊಂದಿಗೆ ನಡೆಸಬಹುದೆಂದು ಜಿಲ್ಲಾ ಉಸ್ತುವಾರಿ ಸಚಿವರು ಸ್ಪಷ್ಟಪಡಿಸಿದ್ದಾರೆ.
ಅಲ್ಲದೆ, ಬಯಲು ಪ್ರದೇಶ, ಮೈದಾನ ಪ್ರದೇಶದಲ್ಲಿ ಕಾರ್ಯಕ್ರಮ ನಡೆಸುವ ಸಂದರ್ಭ ಗರಿಷ್ಟ ೫೦೦ ಜನಕ್ಕಿಂತ ಜಾಸ್ತಿ ಜನ ಸೇರಿಸದಂತೆ ಉಲ್ಲೇಖಿಸಿದ್ದಾರೆ. ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸಾರ್ವಜನಿಕರ ಜವಾಬ್ದಾರಿಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…