ಮಂಗಳೂರು: ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಈಗಾಗಲೇ ದ.ಕ. ಜಿಲ್ಲೆಯಲ್ಲಿ ಕೆಲವೊಂದು ನಿರ್ಬಂಧ ಹೇರಲಾಗಿದ್ದು, ಈ ನಡುವೆ ಯಕ್ಷಗಾನ, ಕೋಲ, ನೇಮ, ಪೂಜೆ, ಪುನಸ್ಕಾರಗಳು ಮತ್ತು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳನ್ನು ಕೋವಿಡ್ ನಿಯಮ ಪಾಲನೆಯೊಂದಿಗೆ ನಡೆಸಬಹುದೆಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ದ.ಕ. ಜಿಲ್ಲಾಧಿಕಾರಿಯವರು ಹೊರಡಿಸಿರುವ ಆದೇಶಕ್ಕೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮರು ಸ್ಪಷ್ಟನೆ ನೀಡಲು ಜಿಲ್ಲಾಧಿಕಾರಿಯವರಿಗೆ ತಿಳಿಸಿದ್ದೇನೆ. ಈಗಾಗಲೇ ಹಮ್ಮಿಕೊಂಡಿರುವ ಯಕ್ಷಗಾನ, ಕೋಲ, ನೇಮ, ಪೂಜೆ ಪುನಸ್ಕಾರ ಮತ್ತು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳು ಕೋವಿಡ್ ನಿಯಮ ಪಾಲನೆಯೊಂದಿಗೆ ನಡೆಸಬಹುದೆಂದು ಜಿಲ್ಲಾ ಉಸ್ತುವಾರಿ ಸಚಿವರು ಸ್ಪಷ್ಟಪಡಿಸಿದ್ದಾರೆ.
ಅಲ್ಲದೆ, ಬಯಲು ಪ್ರದೇಶ, ಮೈದಾನ ಪ್ರದೇಶದಲ್ಲಿ ಕಾರ್ಯಕ್ರಮ ನಡೆಸುವ ಸಂದರ್ಭ ಗರಿಷ್ಟ ೫೦೦ ಜನಕ್ಕಿಂತ ಜಾಸ್ತಿ ಜನ ಸೇರಿಸದಂತೆ ಉಲ್ಲೇಖಿಸಿದ್ದಾರೆ. ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸಾರ್ವಜನಿಕರ ಜವಾಬ್ದಾರಿಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…