Featured

ಮಂಗಳೂರು:ಗರ್ಭಿಣಿ ಮಹಿಳೆಯರಿಗೆ ತಾಯಿ ಕಾರ್ಡ್ ವಿತರಣೆ ಮಾಡುವುದು ಕಡ್ಡಾಯ : ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ -Vishwanews24

ಮಂಗಳೂರು:ಗರ್ಭಿಣಿ ಮಹಿಳೆಯರಿಗೆ ತಾಯಿ ಕಾರ್ಡ್ ವಿತರಣೆ ಮಾಡುವುದು ಕಡ್ಡಾಯ : ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ -Vishwanews24

ಮಂಗಳೂರು: ಗರ್ಭಪೂರ್ವ ಹಾಗೂ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಮಾಡುವುದು ಕಾನೂನು ಬಾಹಿರವಾಗಿದ್ದು, ಇದನ್ನು ಉಲ್ಲಂಘಿಸಿದವರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದರು.

ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಗರ್ಭ ಪೂರ್ವ ಮತ್ತು ಜನನ ಪೂರ್ವ ಲಿಂಗ ನಿರ್ಣಯ ತಡೆ ಕಾಯಿದೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಸಕ್ಷಮ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.2012 ರ ಜನಗಣತಿ ಆಧಾರದಲ್ಲಿ ಜಿಲ್ಲೆಯು 0-6 ಮಕ್ಕಳ ಲಿಂಗಾನುಪಾತ (ಸಿ.ಎಸ್.ಆರ್) ವಿವರದಂತೆ ರೆಡ್ ಜೋನ್‍ನಲ್ಲಿ ಇದೆ. 2020ನೇ ಸಾಲಿನ ಏಪ್ರಿಲ್ ನಿಂದ 2021ನೇ ಸಾಲಿನ ಜನವರಿ ಮಾಹೆಯ ವರೆಗೆ 11,463 ಗಂಡು ಮಕ್ಕಳು ಹಾಗೂ 10,993 ಹೆಣ್ಣು ಮಕ್ಕಳ ಜನನವಾಗಿದೆ. ಜಿಲ್ಲೆಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ಅನುಪಾತದಲ್ಲಿ ಅಸಮತೋಲನ ಉಂಟಾಗುವುದನ್ನು ತಡೆಗಟ್ಟಬೇಕು ಎಂದರು.ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಮಾಡುವುದು ಕಾನೂನು ಬಾಹಿರವಾಗಿದ್ದು, ಇದನ್ನು ಉಲ್ಲಂಘಿಸಿದವರಿಗೆ 3 ವರ್ಷ ಜೈಲು ಶಿಕ್ಷೆ ಹಾಗೂ 10,000 ದಂಡ ವಿಧಿಸಲಾಗುವುದು ಎಂದ ಅವರು, ಯಾವುದೇ ಸ್ಕ್ಯಾನಿಂಗ್ ಸೆಂಟರ್‍ಗಳಲ್ಲಿ ಇಂತಹ ಪ್ರಕರಣಗಳು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಅಂತಹ ಸೆಂಟರ್‍ಗಳ ಪರವಾನಿಗೆಯನ್ನು ಯಾವುದೇ ಸೂಚನೆ ನೀಡದೇ ರದ್ದುಪಡಿಸಲಾಗುವುದು ಎಂದರು.

\ಉಚ್ಚಿಲ-ಪಣಿಯೂರು : 7 ಕೋಟಿ ರೂ. ಅನುದಾನದ ದ್ವಿಪಥ ರಸ್ತೆ ಕಾಮಗಾರಿಯ ಅವ್ಯವಸ್ಥೆ; ವ್ಯಾಪಾರಸ್ಥರು, ನಿವಾಸಿಗಳಿಗೆ ಧೂಳು ತಿನ್ನುವ ಸಂಕಟ, ವಾಹನ ಸವಾರರಿಗೆ ಸಂಚಾರದ ಸಂಕಟ -Vishwanews24

ಗರ್ಭಿಣಿಯಾದ ಮಹಿಳೆಯರಿಗೆ ತಾಯಿ ಕಾರ್ಡ್ ವಿತರಣೆ ಮಾಡುವುದು ಕಡ್ಡಾಯವಾಗಬೇಕು, ಇದರಿಂದ ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಮಾಡುವುದನ್ನು ಕಡಿಮೆ ಮಾಡಬಹುದಾಗಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಎಷ್ಟು ಒಪಿಡಿಯಲ್ಲಿ, ಡೆಲಿವರಿ ಕೇಸ್‍ಗಳು ಬಂದಿವೆ ಎಂಬುದನ್ನು ಸಂಗ್ರಹಣೆ ಮಾಡಬೇಕು. ತಾಯಿ ಕಾರ್ಡ್ ಇಲ್ಲದವರ ಹೆರಿಗೆಯಾದ ಸಂದರ್ಭದಲ್ಲಿ ಅವರನ್ನು ತಪಾಸಣೆ ಮಾಡಿದ ವೈದ್ಯರು ಹಾಗೂ ಹೆರಿಗೆಯಾದ ಮಹಿಳೆಯ ಹೆಸರು, ಊರು ಇನ್ನಿತರ ವಿಳಾಸದ ಬಗ್ಗೆ ಮಾಹಿತಿ ಸಂಗ್ರಹಣೆ ಮಾಡಬೇಕು ಎಂದ ಅವರು, ಬಾಲಿಕಾ ಸಾಪ್ಟ್‍ವೇರ್‍ನಲ್ಲಿ ಗರ್ಭಿಣಿ ಮಹಿಳೆಯರ ನೋಂದಣಿಯಾಗುವುದರಿಂದ ಆಶಾಕಾರ್ಯಕರ್ತೆಯರಿಗೆ ಅವರ ಬಗ್ಗೆ ಮಾಹಿತಿ ನೀಡಲು ಹಾಗೂ ತಾಯಿ ಕಾರ್ಡ್ ವಿತರಿಸಲು ಅನುಕೂಲವಾಗುವುದು ಎಂದು ಹೇಳಿದರು.

ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಸ್ಕ್ಯಾನಿಂಗ್ ಸೆಂಟರ್‍ಗಳ ವಿರುದ್ದ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಲಾಗುವುದು ಎಂದ ಅವರು ಆಸ್ಪತ್ರೆಗಳಲ್ಲಿ ಭ್ರೂಣ ಲಿಂಗ ಪತ್ತೆ ಕಾರ್ಯ ಕಂಡು ಬಂದಂತಹಾ ಸಂದರ್ಭದಲ್ಲಿ ಸ್ಕ್ಯಾನಿಂಗ್ ಯಂತ್ರವನ್ನು ಸೀಲ್ ಮಾಡಲಾಗುವುದಲ್ಲದೇ ಆಸ್ಪತ್ರೆಯ ವಿರುದ್ದ ಪ್ರಕರಣ ದಾಖಲಿಸಲಾಗುವುದು ಎಂದರು.ಅಧಿಕಾರಿಗಳು ವಿಶೇಷ ತಂಡಗಳನ್ನು ರಚನೆ ಮಾಡಿ, ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ಅನಿರೀಕ್ಷಿತ ಬೇಟಿಗಳನ್ನು ಆಗಿಂದಾಗ್ಗೆ ಮಾಡುವುದರೊಂದಿಗೆ ಅಕ್ರಮಗಳನ್ನು ಪತ್ತೆ ಹಚ್ಚಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಚಂದ್ರ ಬಾಯಾರಿ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 174 ಸ್ಕ್ಯಾನಿಂಗ್ ಸೆಂಟರ್‍ಗಳು ನೊಂದಣಿಯಾಗಿದ್ದು, ಅವುಗಳಲ್ಲಿ 159 ಕಾರ್ಯನಿರ್ವಹಿಸುತಿದ್ದು, 15 ಸ್ಕ್ಯಾನಿಂಗ್ ಸೆಂಟರ್‍ಗಳಲ್ಲಿ ಬೇರೆ ಬೇರೆ ಕಾರಣಗಳಿಂದ ಸ್ಕ್ಯಾನಿಂಗ್ ಕಾರ್ಯ ನಡೆಸುತ್ತಿಲ್ಲ ಎಂದರು.

ಉಡುಪಿ : ಸೇನಾ ನೇಮಕಾತಿ ರ‍್ಯಾಲಿಗೆ ಸಂಪೂರ್ಣ ಸಿದ್ದತೆ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಜಿಲ್ಲಾ ತಪಾಸಣ ಮತ್ತು ಮೇಲ್ವಿಚಾರಣಾ ಸಮಿತಿಯು 148 ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳು 87 ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ. ಇದೇ ಸಂದರ್ಭದಲ್ಲಿ ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆ ಕಾನೂನುಗಳ ಅನುಷ್ಠಾನದಲ್ಲಿ ಕೆಲವು ನ್ಯೂನ್ಯತೆಗಳು ಕಂಡುಬಂದಿದ್ದು, ಅಂತಹ ಸಂಸ್ಥೆಗಳಿಗೆ ಸರಿಪಡಿಸುವಂತೆ ಸೂಚನೆ ನೀಡಲಾಗಿದೆ ಹಾಗೂ ಅವರು ನಿರ್ವಹಿಸಬೇಕಾದ ದಾಖಲೆಗಳ ಪ್ರತಿಯನ್ನು ನೀಡಲಾಗಿರುತ್ತದೆ ಎಂದರು. ಪ್ರತಿ ಸ್ಕ್ಯಾನಿಂಗ್ ಸೆಂಟರ್‍ಗಳಲ್ಲಿ ಗರ್ಭಿಣಿಯರ ನೋಂದಣಿ ದಾಖಲಾತಿ ಪುಸ್ತಕಗಳನ್ನು ನಿರ್ವಹಿಸಬೇಕು ಮತ್ತು ಸ್ಕ್ಯಾನಿಂಗ್ ಇಮೇಜನ್ನು 2 ವರ್ಷದವರೆಗೆ ಕಡ್ಡಾಯವಾಗಿ ಸಂಗ್ರಹಿಸಿ ಇಡಬೇಕು ಎಂದ ಅವರು, ಫಾರಂ ಬಿ ಅನುಮತಿ ಪತ್ರ ಮತ್ತು ಎಂಪ್ಯಾನೆಲ್‍ಮೆಂಟ್ ಲಿಸ್ಟ್ ಅನ್ನು ಸ್ಕ್ಯಾನಿಂಗ್ ಕೊಠಡಿಯೊಳಗೆ ಪ್ರದರ್ಶಿಸಬೇಕು ಹಾಗೂ ಸ್ಕ್ಯಾನಿಂಗ್ ಕೊಠಡಿಯೊಳಗೆ ಭ್ರೂಣಲಿಂಗ ಪತ್ತೆ ಮಾಡುವುದಿಲ್ಲ ಎನ್ನುವ ಸೂಚನಾ ಫಲಕಗಳನ್ನು ಪ್ರದರ್ಶಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷೆ ಡಾ. ದೀಪಾ ಪ್ರಭು, ಜಿಲ್ಲಾ ತಪಾಸಣಾ ಮೇಲ್ವಿಚಾರಣಾ ಸಮಿತಿಯ ಸದಸ್ಯರಾದ ಡಾ.ಅನಿತಾರಾಜ್ ಭಟ್, ಡಾ. ಚಿದಾನಂದ್ ಮೂರ್ತಿ, ಡಾ. ಅಮೃತ ಭಂಡಾರಿ, ಜಿಲ್ಲಾ ಸಲಹಾ ಸಮಿತಿಯ ಅಧ್ಯಕ್ಷೆ ಡಾ. ವತ್ಸಲಾ ಕಾಮತ್, ಜಿಲ್ಲಾ ಸಲಹಾ ಸಮಿತಿಯ ಸದಸ್ಯರಾದ ಡಾ. ಶೈಲಜಾ, ಡಾ. ರವಿಚಂದ್ರ, ಶೆರ್ಲಿ. ಟಿ. ಬಾಬು, ವಸಂತ ಪೆರಾಜೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago