Featured

ಮಂಗಳೂರು:ನೂತನ ಮೋಟಾರು ವಾಹನ ತಿದ್ದುಪಡಿ ಕಾಯಿದೆಯ ವಿರುದ್ದ ಪ್ರತಿಭಟನೆ -Vishwanews24

ಮಂಗಳೂರು: ಕೇಂದ್ರ ಸರಕಾರ ಜಾರಿಗೆ ತಂದಿರುವ ನೂತನ ಮೋಟಾರು ಕಾಯ್ದೆ ಹಾಗೂ ಸುರತ್ಕಲ್ ಅಕ್ರಮ ಟೋಲ್ ಗೇಟ್ ಸಹಿತ ಹೆದ್ದಾರಿ ಸಮಸ್ಯೆಯನ್ನು ಮುಂದಿಟ್ಟು ವಿವಿಧ ಚಾಲಕ, ಸಾರಿಗೆ ಯೂನಿಯನ್‌ಗಳು, ಸಾಮಾಜಿಕ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು.

ನಗರದ ಮಿನಿ ವಿಧಾನಸೌಧದ ಬಳಿಯಿಂದ ಮೆರವಣಿಗೆಯಲ್ಲಿ ಹೊರಟ ನೂರಾರು ಸಂಖ್ಯೆಯ ವಿವಿಧ ವಿಭಾಗದ ಚಾಲಕರು ಹಾಗೂ ಸಾರ್ವಜನಿಕರು, “ಚಾಲಕ ವರ್ಗದ ಬದುಕನ್ನು ನಾಶ ಮಾಡಿದ ಮಾರಕ ಕಾಯಿದೆ ಬೇಡವೇ ಬೇಡ,ಮಾಡದ ತಪ್ಪಿಗೆ ಜೈಲಿಗೆ ಕಳುಹಿಸುವ ಕೇಂದ್ರದ ನೀತಿಗೆ ಧಿಕ್ಕಾರ,ಕಳಪೆ ರಸ್ತೆಗಳನ್ನು ಮುಂದಿಟ್ಟು ಅಕ್ರಮ ಟೋಲ್ ಸಂಗ್ರಹಿಸುವ ದರೋಡೆ ನೀತಿಗೆ ಧಿಕ್ಕಾರ” ಘೋಷಣೆಗಳನ್ನು ಕೂಗುತ್ತಾ ಸಾಗಿದರು.

ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯೆದುರು ಜಮಾವಣೆಗೊಂಡ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕೇಂದ್ರ ಸರಕಾರವು ಇಡೀ ದೇಶಕ್ಕೆ ಅನ್ವಯವಾಗುವಂತೆ ಏಕಾಏಕಿ ಮೋಟಾರು ವಾಹನ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿದೆ. ಚಾಲಕರನ್ನು ದಮನಿಸಲು ಹೊರಟ ಕೇಂದ್ರ ಸರಕಾರವು ಜಾರಿಗೆ ತಂದಿರುವ ಮಾರಕ ಕಾಯಿದೆಯು ದೇಶದ ದುಡಿಯುವ ವರ್ಗದ ಮೇಲೆ ನಡೆಸಿರುವ ತೀವ್ರ ಧಾಳಿಯಾಗಿದೆ.ಯಾವುದೇ ಕಾರಣಕ್ಕೂ ಇಂತಹ ಅಮಾನವೀಯ,ಕ್ರೂರ ಕಾಯಿದೆಗಳನ್ನು ಒಪ್ಪಲು ಸಾದ್ಯವಿಲ್ಲ.ಸಂಘಟಿತ ಹೋರಾಟವೊಂದೇ ಇದಕ್ಕೆ ಉತ್ತರವಾಗಬೇಕು. ಇದರ ಹಿಂದೆ ಕಾರ್ಪೊರೇಟ್ ಶಕ್ತಿಗಳನ್ನು ರಕ್ಷಿಸುವ, ಖಾಸಗೀಕರಣಗೊಳಿಸುವ ಹುನ್ನಾರ ಇದೆ. ನೂತನ ವಾಹನ ತಿದ್ದುಪಡಿ ಕಾಯ್ದೆಯನ್ನು ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಸುರತ್ಕಲ್ ಅಕ್ರಮ ಟೋಲ್ ಗೇಟ್ ಹಲವು ಗಡವುಗಳ ನಂತರವೂ ವಾಹನ ಸವಾರರ ಸುಲಿಗೆಯನ್ನು ಮುಂದುವರಿಸಿದೆ. ಈ ನವೆಂಬರ್‌ನಲ್ಲಿ ಇದರ ಸುಂಕ ಸಂಗ್ರಹದ ಗುತ್ತಿಗೆ ಕೊನೆಗೊಳ್ಳುತ್ತಿದ್ದು ಈಗಲಾದರು ಹೆದ್ದಾರಿ ಪ್ರಾಧಿಕಾರ ಅಕ್ರಮ ಟೋಲ್ ಗೇಟ್ ತೆರವುಗೊಳಿಸುವ ತನ್ನ ತೀರ್ಮಾನವನ್ನು ಜಾರಿಗೊಳಿಸಬೇಕು. ಆ ಮೂಲಕ ಜನಾಗ್ರಹಕ್ಕೆ, ಹೆದ್ದಾರಿ ನಿಯಮಗಳಿಗೆ ಗೌರವ ಸೂಚಿಸಬೇಕು ಎಂದು ಅವರು ಒತ್ತಾಯಿಸಿದರು.

ಪ್ರತಿಭಟನೆ ಮೊದಲು ಮಿನಿ ವಿಧಾನ ಸೌಧದಿಂದ ಜಿಲ್ಲಾಧಿಕಾರಿ ಕಚೇರಿವರಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಕಾರ್ಮಿಕ ಮುಖಂಡರಾದ ಸುನೀಲ್ ಕುಮಾರ್ ಬಜಾಲ್, ಬೊಂಡಾಲ ಚಿತ್ತ ರಂಜನ್ ಶೆಟ್ಟಿ, ಅಲಿ ಹಸನ್, ದಿನೇಶ್ ಕುಂಪಲ, ಬಿ.ಕೆ.ಇಮ್ತಿಯಾಝ್, ಪ್ರಕಾಶ್ ಡಿಸೋಜ, ಪ್ರಮೋದ್ ಉಳ್ಳಾಲ, ವಿ. ಕುಕ್ಯಾನ್, ಎಚ್.ವಿ.ರಾವ್, ಕೃಷ್ಣಪ್ಪ ಸಾಲ್ಯಾನ್, ಪದ್ಮಾವತಿ ಶೆಟ್ಟಿ, ಸ್ಟೀವನ್ ಡಿಸೋಜ, ಖಾಲಿದ್ ಉಜಿರೆ, ಅಕ್ಷಿತ್ ಸುವರ್ಣ ಮತ್ತಿತರರು ಭಾಗವಹಿಸಿದ್ದರು.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago