ಮಂಗಳೂರು: ಹಲವಾರು ವರ್ಷಗಳಿಂದ ಬೀದಿ ನಾಯಿಗಳಿಗೆ ಪ್ರತಿದಿನ ಆಹಾರ ನೀಡುತ್ತಿರುವ ಮಂಗಳೂರಿನ ಬಲ್ಲಾಳಬಾಗ್ ನಿವಾಸಿ ರಜನಿ ಶೆಟ್ಟಿ ಮೇಲೆ ಅವರ ನೆರೆಮನೆಯ ಮಹಿಳೆ ಮಂಜುಳಾ ಶೆಟ್ಟಿ ಎಂಬಾಕೆ ಹಲ್ಲೆ ನಡೆಸಿದ ಘಟನೆ ನಡೆದಿದೆ
ಕಳೆದ ಹಲವಾರು ತಿಂಗಳುಗಳಿಂದ ರಜನಿ ಶೆಟ್ಟಿಯ ಮೇಲೆ ಹಲ್ಲೆಗೆ ಪ್ರಯತ್ನ ಮಾಡಿದ್ದು, ಅವರು ಮನೆಯ ಕಸವನ್ನು ಇವರ ಮನೆಯ ಮೇಲೆ ಸುರಿಯುವುದು , ನಾಯಿ ಬೆಕ್ಕಿಗೆ ಕೋಲಿನಿಂದ ಥಳಿಸುವುದು, ಇವರ ಮನೆಗೆ ಅತಿಥಿಗಳು, ಪ್ರಾಣಿ ಪ್ರಿಯರು ಬಂದಾಗ ಅವ್ಯಾಚ ಶಬ್ದಗಳಿಂದ ನಿಂದಿಸುವುದು , ಮನೆಯ ಬಳಿಯ ಕಾರ್ಪೋರೇಷನ್ ನೀರಿನ ಪೈಪ್ ಉಪಯೋಗಿಸಲು ಬಿಡದಿರುವುದು ಹಲವಾರು ರೀತಿಯಲ್ಲಿ ತೊಂದರೆಯನ್ನು ನೀಡುತ್ತಿದ್ದರು ಎನ್ನಲಾಗಿದೆ.
ಸೋಮವಾರ ಬೆಳಿಗ್ಗೆ ಏಕಾಏಕಿ ಮಂಜುಳಾ ಶೆಟ್ಟಿ ಅವರು ರಜನಿ ಶೆಟ್ಟಿ ಬಟ್ಟೆ ಒಣಗಿಸುತ್ತಿದ್ದ ವೇಳೆ ಬಂದು ಬಟ್ಟೆಗಳನ್ನೆಲ್ಲಾ ಚೆಲ್ಲಾಡಿ ಪಕ್ಕದಲ್ಲಿದ್ದ ಕಲ್ಲನ್ನು ರಜನಿ ಶೆಟ್ಟಿಯತ್ತ ಎಸೆದು ಹಲ್ಲೆ ನಡೆಸಿದ್ದಾರೆ. ಆಕೆ ಎಸೆದ ಕಲ್ಲು ರಜನಿ ಶೆಟ್ಟಿ ಅವರ ಕೈಗೆ ತಾಗಿ ಗಾಯ ಆಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಮಂಜುಳಾ ಶೆಟ್ಟಿ ಯವರ ಮೇಲೆ ಕ್ರಮ ಜರುಗಿಸುವಂತೆ ಒತ್ತಾಯಿಸಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…