ಮಂಗಳೂರು: ಹಲವಾರು ವರ್ಷಗಳಿಂದ ಬೀದಿ ನಾಯಿಗಳಿಗೆ ಪ್ರತಿದಿನ ಆಹಾರ ನೀಡುತ್ತಿರುವ ಮಂಗಳೂರಿನ ಬಲ್ಲಾಳಬಾಗ್ ನಿವಾಸಿ ರಜನಿ ಶೆಟ್ಟಿ ಮೇಲೆ ಅವರ ನೆರೆಮನೆಯ ಮಹಿಳೆ ಮಂಜುಳಾ ಶೆಟ್ಟಿ ಎಂಬಾಕೆ ಹಲ್ಲೆ ನಡೆಸಿದ ಘಟನೆ ನಡೆದಿದೆ
ಕಳೆದ ಹಲವಾರು ತಿಂಗಳುಗಳಿಂದ ರಜನಿ ಶೆಟ್ಟಿಯ ಮೇಲೆ ಹಲ್ಲೆಗೆ ಪ್ರಯತ್ನ ಮಾಡಿದ್ದು, ಅವರು ಮನೆಯ ಕಸವನ್ನು ಇವರ ಮನೆಯ ಮೇಲೆ ಸುರಿಯುವುದು , ನಾಯಿ ಬೆಕ್ಕಿಗೆ ಕೋಲಿನಿಂದ ಥಳಿಸುವುದು, ಇವರ ಮನೆಗೆ ಅತಿಥಿಗಳು, ಪ್ರಾಣಿ ಪ್ರಿಯರು ಬಂದಾಗ ಅವ್ಯಾಚ ಶಬ್ದಗಳಿಂದ ನಿಂದಿಸುವುದು , ಮನೆಯ ಬಳಿಯ ಕಾರ್ಪೋರೇಷನ್ ನೀರಿನ ಪೈಪ್ ಉಪಯೋಗಿಸಲು ಬಿಡದಿರುವುದು ಹಲವಾರು ರೀತಿಯಲ್ಲಿ ತೊಂದರೆಯನ್ನು ನೀಡುತ್ತಿದ್ದರು ಎನ್ನಲಾಗಿದೆ.
ಸೋಮವಾರ ಬೆಳಿಗ್ಗೆ ಏಕಾಏಕಿ ಮಂಜುಳಾ ಶೆಟ್ಟಿ ಅವರು ರಜನಿ ಶೆಟ್ಟಿ ಬಟ್ಟೆ ಒಣಗಿಸುತ್ತಿದ್ದ ವೇಳೆ ಬಂದು ಬಟ್ಟೆಗಳನ್ನೆಲ್ಲಾ ಚೆಲ್ಲಾಡಿ ಪಕ್ಕದಲ್ಲಿದ್ದ ಕಲ್ಲನ್ನು ರಜನಿ ಶೆಟ್ಟಿಯತ್ತ ಎಸೆದು ಹಲ್ಲೆ ನಡೆಸಿದ್ದಾರೆ. ಆಕೆ ಎಸೆದ ಕಲ್ಲು ರಜನಿ ಶೆಟ್ಟಿ ಅವರ ಕೈಗೆ ತಾಗಿ ಗಾಯ ಆಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಮಂಜುಳಾ ಶೆಟ್ಟಿ ಯವರ ಮೇಲೆ ಕ್ರಮ ಜರುಗಿಸುವಂತೆ ಒತ್ತಾಯಿಸಲಾಗಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…