Featured

ಮಂಗಳೂರು:ಭಜರಂಗದಳ, ಆರ್‌ಎಸ್‌‌ಎಸ್‌ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ :  ನಳಿನ್ ಕಟೀಲ್  – Vishwanews24

ಮಂಗಳೂರು:ಭಜರಂಗದಳ, ಆರ್‌ಎಸ್‌‌ಎಸ್‌ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ :  ನಳಿನ್ ಕಟೀಲ್

ಮಂಗಳೂರು : ಭಜರಂಗದಳ, ಆರ್‌ಎಸ್‌‌ಎಸ್‌ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ, ಸಿದ್ದರಾಮಯ್ಯ ರಾಜಕೀಯ ಮುಗಿಯುತ್ತೆ. ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆಗೆ ತಾಕತ್ ಇದ್ದರೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನ ಬಂಧಿಸಿ. ನಿಮ್ಮ ಮೆರವಣಿಗೆ, ವಿಜಯೋತ್ಸವ, ಸಭೆಗಳಲ್ಲೇ ಪಾಕಿಸ್ತಾನ ಪರ ಘೋಷಣೆ ಬಂದಿದೆ. ಅದು ಬಿಟ್ಟು ರಾಜ್ಯವನ್ನ ವಿಭಜನಾವಾದದ ಮೂಲಕ ಕಟ್ಟೋದು ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಆರ್‌ಎಸ್‌‌ಎಸ್‌ ಈ ದೇಶದಲ್ಲಿ ರಾಷ್ಟ್ರ ಭಕ್ತಿ ಕಲಿಸಿದೆ. ಕೇಂದ್ರದ ಮಂತ್ರಿಗಳು, ನಾವೆಲ್ಲರೂ ಆರ್.ಎಸ್.ಎಸ್ ಸ್ವಯಂ ಸೇವಕರು. ನೆಹರೂ, ಇಂದಿರಾ ಗಾಂಧಿ ಎಲ್ಲರೂ ನಿಷೇಧಕ್ಕೆ ಕೈ ಹಾಕಿ ಕೈ ಸುಟ್ಟುಕೊಂಡಿದ್ದಾರೆ. ನರಸಿಂಹ ರಾವ್ ಸರ್ಕಾರ, ಯಾವಾಗೆಲ್ಲಾ ಕಾಂಗ್ರೆಸ್ ಸರ್ಕಾರ ಇತ್ತೋ ಆಗೆಲ್ಲಾ ಇದಾಗಿದೆ. ನಿಷೇಧದ ಕೆಲಸ ಮಾಡಿದಾಗಲೆಲ್ಲಾ ದೇಶದಲ್ಲಿ ಕಾಂಗ್ರೆಸ್ ಸರ್ಕಾರವೇ ಬಂದಿಲ್ಲ ಎಂದರು.

ಪ್ರಿಯಾಂಕ್ ಖರ್ಗೆ ಬಾಯಿಗೆ ಹಿಡಿತ ಇಟ್ಟುಕೊಂಡು, ನಾಲಿಗೆ ಹಿಡಿತದಲ್ಲಿ ಮಾತನಾಡಲಿ. ಭಜರಂಗದಳ, ಆರ್.ಎಸ್.ಎಸ್ ನಿಷೇಧ ಮಾಡಲು ನಿಮಗೆ ಹಕ್ಕಿಲ್ಲ. ಪಿಎಫ್ಐ ಅನ್ನ ನಾವು ನಿಷೇಧ ಮಾಡಿದ್ದೇವೆ, ಇವರೇನು ನಿಷೇಧ ಮಾಡೋದು? ಎಂದು ಪ್ರಶ್ನಿಸಿದ್ದಾರೆ.

ಇನ್ನು ಆರ್‌ಎಸ್‌‌ಎಸ್‌ ರಾಷ್ಟ್ರಭಕ್ತಿ ಸಂಕೇತ ಅಂತ ಕಾಂಗ್ರೆಸ್ ನಲ್ಲೇ ಹೇಳಿದ್ದಾರೆ. ವಿಧಾನಸೌಧದಲ್ಲಿ ಡಿಕೆಶಿಯವರೇ ಪ್ರಾರ್ಥನೆ ಹೇಳಿದ್ದಾರೆ, ಅದರಲ್ಲೇ ಇದೆ. ಆ ಪ್ರಾರ್ಥನೆಯಲ್ಲಿ ಏನಿದೆ ಅಂತ ಖರ್ಗೆಯವರು ಡಿಕೆಶಿ ಬಳಿ ಕೇಳಲಿ. ರಾಜ್ಯವನ್ನು ದ್ವೇಷ, ವಿಭಜನೆ ಮೂಲಕ ಕಾಂಗ್ರೆಸ್ ಆಡಳಿತ ಮಾಡ್ತಿದೆ. ಇವರ ಮಂತ್ರಿ ಮಂಡಲದ ಗಲಾಟೆಯಲ್ಲೇ ಕಾಂಗ್ರೆಸ್ ವಿಭಜನೆ ಆಗುತ್ತೆ. ಇದರ ಭಯದಲ್ಲಿ ಆರ್‌ಎಸ್‌‌ಎಸ್‌ ಹೆಸರಲ್ಲಿ ಕಾಂಗ್ರೆಸ್ ಗಟ್ಟಿ ಮಾಡ್ತಾ ಇದ್ದಾರೆ. ಇವರ ಜಗಳ ಹೊರ ಬಾರದಂತೆ ಮಾಡಲು ಇದು ಷಡ್ಯಂತ್ರ ಎಂದು ವಾಗ್ದಾಳಿ ನಡೆಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

5 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

5 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago