ಮಂಗಳೂರು: ವಾಮಂಜೂರು ತಿರುವೈಲು ಶಾಲೆಯ ಸಮೀಪದ ಕೆತ್ತಿಕಲ್ ಗುಡ್ಡ ಮಂಗಳವಾರ ಮತ್ತೆ ಕುಸಿತಗೊಂಡಿದ್ದು, ಮಣ್ಣು ಹಾಗೂ ಬಂಡೆ ಕಲ್ಲುಗಳು ರಸ್ತೆಗೆ ಉರುಳಿದೆ.
ಕೆಲವು ದಿನಗಳ ಹಿಂದೆ ಅದೇ ಜಾಗದಲ್ಲಿ ಕುಸಿತವಾಗಿ ಗುಡ್ಡದ ಮಣ್ಣು ಹೆದ್ದಾರಿಗೆ ಬಿದ್ದಿತ್ತು. ಆ ಬಳಿಕ ಹೆದ್ದಾರಿಯಲ್ಲಿ ಏಕಮುಖ ಸಂಚಾರಕ್ಕೆ ಮಾತ್ರವೇ ಅವಕಾಶ ಕಲ್ಪಿಸಲಾಗಿತ್ತು. ಕಳೆದು ಎರಡು ದಿನಗಳಿಂದ ಸುರಿದ ನಿರಂತರ ಮಳೆಗೆ ಮತ್ತೆ ಕುಸಿತವಾಗುತ್ತಿದೆ. ಮಂಗಳವಾರ ಮಧ್ಯಾಹ್ನದ ವೇಳೆ ಭಾರೀ ಪ್ರಮಾಣದಲ್ಲಿ ಮಣ್ಣು ಹಾಗೂ ಬಂಡೆ ಕುಸಿದಿದೆ. ಗುಡ್ಡದ ಮೇಲೆ ಮಣ್ಣು ಹಾಗೂ ಬಂಡೆ ಬಿರುಕು ಬಿಟ್ಟು ನಿಂತಿದ್ದು ಮತ್ತಷ್ಟು ಕುಸಿತದ ಆತಂಕವಿದೆ.
ಅವೈಜ್ಞಾನಿಕ ಕಾಮಗಾರಿಗೆ ಸ್ಥಳೀಯರ ಆಕ್ಷೇಪ
ಕಳೆದ ವರ್ಷ ಭಾರೀ ಮಳೆಯ ಸಂದರ್ಭದಲ್ಲಿ ಕೆತ್ತಿಕಲ್ನ ವಿವಿಧ ಭಾಗಗಳಲ್ಲಿ ಕುಸಿದಿತ್ತು. ಅಸಮರ್ಪಕ ವಾಗಿ ಅಗೆದಿರುವ ಜಾಗಗಳಲ್ಲಿ ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿ ಕಾರಿಯವರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ್ದರು. ಆದರೆ ತಿರುವೈಲು ಶಾಲೆಯ ಸಮೀಪದಲ್ಲಿ ಸಮರ್ಪಕ ರೀತಿಯಲ್ಲಿ ಮುನ್ನೆಚ್ಚರಿಕೆ ವಹಿಸಿಲ್ಲ. ನಿರಂತರವಾಗಿ ಗುಡ್ಡದ ಮಣ್ಣು ಅವೈಜ್ಞಾನಿಕ ರೀತಿಯಲ್ಲಿ ಅಗೆದಿ ರುವುದರಿಂದ ಕುಸಿತ ಮುಂದುವರಿ ದಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುಡ್ಡದ ಮೇಲ್ಬಾಗ ದಲ್ಲೂ ಮನೆಗಳಿದ್ದು, ಅವರೂ ಅಪಾಯವನ್ನು ಎದುರಿಸುತ್ತಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…