Featured

ಮಂಗಳೂರು:ಮಂಗಳೂರು : ನಾರಾಯಣಗುರುಗಳ ಸ್ತಬ್ಧಚಿತ್ರ ನಿರಾಕರಣೆ ನನ್ನ ಮನಸ್ಸಿಗೆ ತುಂಬಾ ನೋವು ತಂದಿದೆ : ಜನಾರ್ದನ ಪೂಜಾರಿ – Vishwanews24

ಮಂಗಳೂರು : ನಾರಾಯಣಗುರುಗಳ ಸ್ತಬ್ಧಚಿತ್ರ ನಿರಾಕರಣೆ ನನ್ನ ಮನಸ್ಸಿಗೆ ತುಂಬಾ ನೋವು ತಂದಿದೆ : ಜನಾರ್ದನ ಪೂಜಾರಿ – Vishwanews24

26ರಂದು ಜನಾರ್ದನ ಪೂಜಾರಿ ನೇತೃತ್ವದಲ್ಲಿ ಜಾಥಾ..

ಮಂಗಳೂರು: ಹೊಸದಿಲ್ಲಿಯಲ್ಲಿ ಗಣರಾಜ್ಯೋತ್ಸವದ ಪರೇಡ್‌ನ‌ಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರ ನಿರಾಕರಣೆ ನನ್ನ ಮನಸ್ಸಿಗೆ ತುಂಬಾ ನೋವು ತಂದಿದೆ.

ಜ. 26ರಂದು ಅವಿಭಜಿತ ದ.ಕ. ಜಿಲ್ಲೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಕೂಡುವಿಕೆಯಿಂದ ಪ್ರತೀ ತಾಲೂಕುಗಳಲ್ಲಿ ಆಯೋಜಿಸಲಾದ ಟ್ಯಾಬ್ಲೋ ಮೆರವಣಿಗೆ ಜಾತಿ, ಮತ, ಪಂಥ ಭೇದ ಮರೆತು ಎಲ್ಲರೂ ಬೆಂಬಲಿಸಬೇಕಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ತಿಳಿಸಿದ್ದಾರೆ.

ಗುರುಗಳ ವಿಷಯದಲ್ಲಿ ರಾಜಕೀಯ ಸಲ್ಲದು. ಈ ಬಗ್ಗೆ ಗುರುಗಳ ಅನುಯಾಯಿಗಳು ಕೇಂದ್ರದ ನಿರ್ಧಾರವನ್ನು ಖಂಡಿಸಬೇಕು. ಜ.26ರಂದು ನಡೆಯುವ ಜಾಥಾವನ್ನು ಜಾತಿ, ಮತ, ಪಂಥ ಮರೆತು ಬೆಂಬಲಿಸೋಣ. ಗುರುಗಳ ತತ್ತ್ವದಂತೆ ಸಂಘರ್ಷ ರಹಿತವಾಗಿ ನಾವು ನಮ್ಮ ಹಕ್ಕು ಮಂಡಿಸೋಣ. ಇದು ಯಾರ ವಿರುದ್ಧವೂ ಪ್ರತಿಭಟನೆಯಲ್ಲ, ಗುರುದೇವರ ಭಕ್ತರಿಗೆ ಸ್ವಾಭಿಮಾನ ದಿನವಾಗಲಿ ಎಂದು ತಿಳಿಸಿದ್ದಾರೆ.

ಅಂದಿನ ದಿನ ಹಳದಿ ವಸ್ತ್ರಧಾರಣೆ ಮಾಡಿ ಎಲ್ಲ ನಾರಾಯಣ ಗುರು ಸಂಘಗಳಲ್ಲಿ ಗುರುದೇವರಿಗೆ ಪ್ರಾರ್ಥನೆ ಸಲ್ಲಿಸಿ ವಿಶೇಷ ಪೂಜೆ ಮಾಡಬೇಕಿದೆ. ಇದು ಯಾರ ವಿರುದ್ಧವೂ ಪ್ರತಿಭಟನೆ ಅಲ್ಲ; ಇದು ಗುರುದೇವರ ಭಕ್ತರಿಗೆ ಸ್ವಾಭಿಮಾನ ದಿನ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಹೊಸದಿಲ್ಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ನಾರಾಯಣ ಗುರುಗಳ ಪ್ರತಿಕೃತಿ ನಿರಾಕರಣೆ ಮಾಡಿರುವ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿ ಜ.26ರಂದು ಕಾಂಗ್ರೆಸ್ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಮಾರ್ಗದರ್ಶನದಲ್ಲಿ ಜಿಲ್ಲೆಯಾದ್ಯಂತ ಜಾಥಾ ನಡೆಯಲಿದೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

1 hour ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

1 hour ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

2 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

2 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

2 hours ago