ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೃಹತ್ ಮಾವಿನ ಮರವೊಂದು ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದ ಘಟನೆ ಕಡಬ ತಾಲೂಕಿನ ರಾಮಕುಂಜದಲ್ಲಿ ನಡೆದಿದೆ.
ಅಬ್ದುಲ್ ಸಲೀಂ ಎಂಬವರು ರಾಮಕುಂಜದ ರಸ್ತೆ ಬದಿ ತನ್ನ ಮಾರುತಿ 800 ಕಾರನ್ನು ನಿಲ್ಲಿಸಿ ಹೊರ ಹೋಗಿದ್ದರು. ಕಾರಿನಲ್ಲಿ ರಹಿಮಾನ್, ಅಬ್ಬಾಸ್ ಹಾಗೂ ರಮ್ಲಾನ್ ಕುಳಿತಿದ್ದರು. ಈ ವೇಳೆ ಮರ ಬೀಳುವ ಶಬ್ದ ಕೇಳಿ ಮೂವರು ಕಾರಿನಿಂದ ಇಳಿದು ದೂರ ಹೋಗಿದ್ದಾರೆ.
ಅಷ್ಟರಲ್ಲೇ ಮಾವಿನ ಮರ ಕಾರಿನ ಮೇಲೆ ಬಿದ್ದಿದೆ. ಕಾರು ಸಂಪೂರ್ಣ ಜಖಂಗೊಂಡು ಹಾನಿಯಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರೆಡ್ ಅಲರ್ಟ್ ಜಾರಿ: ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಐದು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ ವಿಜಯಪುರ ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮೇ 30ರವರೆಗೆ ಮಳೆ ಮುಂದುವರೆಯಲಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…