Featured

ಮಂಗಳೂರು:ರಾಜ್ಯದ ಮೀನುಗಾರಿಕಾ ಇಲಾಖೆಯಲ್ಲಿ 10 ಸಾವಿರ ಉದ್ಯೋಗ : ನೆಹರೂ ಮೈದಾನದಲ್ಲಿ ಕೋಟ ಶ್ರೀನಿವಾಸ ಪೂಜಾರಿ -Vishwanews24

ಮಂಗಳೂರು: ನಗರದ ನೆಹರೂ ಮೈದಾನದಲ್ಲಿ ಶನಿವಾರ 74ನೇ ಸರಳ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ರಾಷ್ಟ್ರಧ್ವರೋಹಣ ನೆರವೇರಿಸಿದರು.

ನಂತರ ಮಾತನಾಡಿದ ಅವರು, ರಾಜ್ಯದ ಮೀನುಗಾರಿಕಾ ಇಲಾಖೆಯಲ್ಲಿ 10 ಸಾವಿರ ಉದ್ಯೋಗಗಳನ್ನು ಒದಗಿಸಲು ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.

ಜನಸ್ನೇಹಿ ಯೋಜನೆಗಳನ್ನು ಪ್ರತಿ ಮನೆಗೆ ತಲುಪುವಂತೆ ಮಾಡುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ. ಪ್ರತಿಯೊಬ್ಬರು ಇದರ ಬಳಕೆ ಮಾಡಬೇಕು. ಸುಮಾರು 5 ಕೋಟಿ ಜನರು ಆಯುಷ್ಮಾನ್ ಭಾರತ್, ಕಿಸಾನ್‌‌‌ ಸಮ್ಮಾನ್‌‌ ಮುಂತಾದ ಸರ್ಕಾರದ ಯೋಜನೆಗಳನ್ನು ಬಳಸಿಕೊಂಡಿದ್ದಾರೆ. ಬಿ.ಎಸ್‌‌. ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರವು ರೈತರ ಪರವಾಗಿದ್ದು, ರೈತರಿಗೆ ನೆರವಾಗುವ ನಿಟ್ಟಿನಲ್ಲಿ ನಾವು ರೈತರ ಬೆಳೆ ಸಮೀಕ್ಷೆ ಅಪ್ಲಿಕೇಶನ್ 2020-21 ಅನ್ನು ಸಹ ಪ್ರಾರಂಭಿಸಿದ್ದೇವೆ ಎಂದು ಹೇಳಿದರು.

ಮುಖ್ಯಮಂತ್ರಿ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕನ್ನು ನಿಯಂತ್ರಿಸುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ಲಾಕ್‌ಡೌನ್‌ ಸಂದರ್ಭದಲ್ಲಿ ಸಾರ್ವಜನಿಕರಿಗೆ ಪಡಿತರ ಹಾಗೂ ಆಹಾರ ಕಿಟ್‌‌ಗಳನ್ನು ಪೂರೈಕೆ ಮಾಡುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಧಾರ್ಮಿಕ ದತ್ತಿ ಇಲಾಖೆಯೂ ಕೂಡ ಅಗತ್ಯ ಆಹಾರವನ್ನು ಒದಗಿಸಿದೆ. ಇದಲ್ಲದೇ, ಹಲವಾರು ಸಂಸ್ಥೆಗಳು, ಸಾಮಾಜಿಕ ಕಾರ್ಯಕರ್ತರು ಮತ್ತು ಜನರ ಪ್ರತಿನಿಧಿಗಳು ಆಹಾರ ಕಿಟ್ ಮತ್ತು ಔಷಧಿಗಳನ್ನು ವಿತರಿಸುವ ಮೂಲಕ ಲಾಕ್‌ಡೌನ್‌‌ ಸಮಯದಲ್ಲಿ ಜನರಿಗೆ ನೆರವಾಗಲು ಮುಂದೆ ಬಂದಿದ್ದಾರೆ. ಜತೆಗೆ ನಾವು ಅಂತರ ರಾಜ್ಯ ಹಾಗೂ ಅಂತರ ರಾಷ್ಟ್ರೀಯ ಪ್ರಯಾಣಿಕರ ಬರುವಿಕೆಯನ್ನು ನಿರ್ವಹಿಸಿದ್ದೇವೆ ಎಂದರು.

ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಗೆ ₹2,000 ಕೋಟಿ ಹಂಚಿಕೆ ಮಾಡಲಾಗಿದೆ. ಇದರಲ್ಲಿ ₹338 ಕೋಟಿ ಬಿಡುಗಡೆ ಮಾಡಲಾಗಿದ್ದು, ₹100 ಕೋಟಿ ವೆಚ್ಚದ ಕೆಲಸಗಳು ಈವರೆಗೆ ಪೂರ್ಣಗೊಂಡಿವೆ. ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಭಿವೃದ್ಧಿಗಾಗಿ ₹5.83 ಕೋಟಿ ಬಳಸಲಾಗಿದೆ. ₹2.31 ಕೋಟಿ ವೆಚ್ಚದಲ್ಲಿ ಲೇಡಿಗೋಷನ್ ಆಸ್ಪತ್ರೆಯ ಎರಡನೇ ಮಹಡಿಯ ಅಭಿವೃದ್ಧಿಯನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಶಾಸಕರಾದ ವೇದವ್ಯಾಸ್ ಕಾಮತ್‌, ಡಾ.ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಸಂಸದ ನಳಿನ್ ಕುಮಾರ್ ಕಟೀಲ್, ಎಂಎಲ್‌‌ಸಿ ಪ್ರತಾಪ್ ಸಿಂಹ ನಾಯಕ್, ಪೊಲೀಸ್ ಆಯುಕ್ತ ವಿಕಾಸ್‌‌ ಕುಮಾರ್, ಮೇಯರ್ ದಿವಾಕರ್ ಮತ್ತು ಇತರರು ಉಪಸ್ಥಿತರಿದ್ದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

14 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

14 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

14 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

15 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

15 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

16 hours ago