Featured

ಮಂಗಳೂರು:ರಾಜ್ಯದ ಮೀನುಗಾರಿಕಾ ಇಲಾಖೆಯಲ್ಲಿ 10 ಸಾವಿರ ಉದ್ಯೋಗ : ನೆಹರೂ ಮೈದಾನದಲ್ಲಿ ಕೋಟ ಶ್ರೀನಿವಾಸ ಪೂಜಾರಿ -Vishwanews24

ಮಂಗಳೂರು: ನಗರದ ನೆಹರೂ ಮೈದಾನದಲ್ಲಿ ಶನಿವಾರ 74ನೇ ಸರಳ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ರಾಷ್ಟ್ರಧ್ವರೋಹಣ ನೆರವೇರಿಸಿದರು.

ನಂತರ ಮಾತನಾಡಿದ ಅವರು, ರಾಜ್ಯದ ಮೀನುಗಾರಿಕಾ ಇಲಾಖೆಯಲ್ಲಿ 10 ಸಾವಿರ ಉದ್ಯೋಗಗಳನ್ನು ಒದಗಿಸಲು ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.

ಜನಸ್ನೇಹಿ ಯೋಜನೆಗಳನ್ನು ಪ್ರತಿ ಮನೆಗೆ ತಲುಪುವಂತೆ ಮಾಡುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ. ಪ್ರತಿಯೊಬ್ಬರು ಇದರ ಬಳಕೆ ಮಾಡಬೇಕು. ಸುಮಾರು 5 ಕೋಟಿ ಜನರು ಆಯುಷ್ಮಾನ್ ಭಾರತ್, ಕಿಸಾನ್‌‌‌ ಸಮ್ಮಾನ್‌‌ ಮುಂತಾದ ಸರ್ಕಾರದ ಯೋಜನೆಗಳನ್ನು ಬಳಸಿಕೊಂಡಿದ್ದಾರೆ. ಬಿ.ಎಸ್‌‌. ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರವು ರೈತರ ಪರವಾಗಿದ್ದು, ರೈತರಿಗೆ ನೆರವಾಗುವ ನಿಟ್ಟಿನಲ್ಲಿ ನಾವು ರೈತರ ಬೆಳೆ ಸಮೀಕ್ಷೆ ಅಪ್ಲಿಕೇಶನ್ 2020-21 ಅನ್ನು ಸಹ ಪ್ರಾರಂಭಿಸಿದ್ದೇವೆ ಎಂದು ಹೇಳಿದರು.

ಮುಖ್ಯಮಂತ್ರಿ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕನ್ನು ನಿಯಂತ್ರಿಸುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ಲಾಕ್‌ಡೌನ್‌ ಸಂದರ್ಭದಲ್ಲಿ ಸಾರ್ವಜನಿಕರಿಗೆ ಪಡಿತರ ಹಾಗೂ ಆಹಾರ ಕಿಟ್‌‌ಗಳನ್ನು ಪೂರೈಕೆ ಮಾಡುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಧಾರ್ಮಿಕ ದತ್ತಿ ಇಲಾಖೆಯೂ ಕೂಡ ಅಗತ್ಯ ಆಹಾರವನ್ನು ಒದಗಿಸಿದೆ. ಇದಲ್ಲದೇ, ಹಲವಾರು ಸಂಸ್ಥೆಗಳು, ಸಾಮಾಜಿಕ ಕಾರ್ಯಕರ್ತರು ಮತ್ತು ಜನರ ಪ್ರತಿನಿಧಿಗಳು ಆಹಾರ ಕಿಟ್ ಮತ್ತು ಔಷಧಿಗಳನ್ನು ವಿತರಿಸುವ ಮೂಲಕ ಲಾಕ್‌ಡೌನ್‌‌ ಸಮಯದಲ್ಲಿ ಜನರಿಗೆ ನೆರವಾಗಲು ಮುಂದೆ ಬಂದಿದ್ದಾರೆ. ಜತೆಗೆ ನಾವು ಅಂತರ ರಾಜ್ಯ ಹಾಗೂ ಅಂತರ ರಾಷ್ಟ್ರೀಯ ಪ್ರಯಾಣಿಕರ ಬರುವಿಕೆಯನ್ನು ನಿರ್ವಹಿಸಿದ್ದೇವೆ ಎಂದರು.

ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಗೆ ₹2,000 ಕೋಟಿ ಹಂಚಿಕೆ ಮಾಡಲಾಗಿದೆ. ಇದರಲ್ಲಿ ₹338 ಕೋಟಿ ಬಿಡುಗಡೆ ಮಾಡಲಾಗಿದ್ದು, ₹100 ಕೋಟಿ ವೆಚ್ಚದ ಕೆಲಸಗಳು ಈವರೆಗೆ ಪೂರ್ಣಗೊಂಡಿವೆ. ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಭಿವೃದ್ಧಿಗಾಗಿ ₹5.83 ಕೋಟಿ ಬಳಸಲಾಗಿದೆ. ₹2.31 ಕೋಟಿ ವೆಚ್ಚದಲ್ಲಿ ಲೇಡಿಗೋಷನ್ ಆಸ್ಪತ್ರೆಯ ಎರಡನೇ ಮಹಡಿಯ ಅಭಿವೃದ್ಧಿಯನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಶಾಸಕರಾದ ವೇದವ್ಯಾಸ್ ಕಾಮತ್‌, ಡಾ.ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಸಂಸದ ನಳಿನ್ ಕುಮಾರ್ ಕಟೀಲ್, ಎಂಎಲ್‌‌ಸಿ ಪ್ರತಾಪ್ ಸಿಂಹ ನಾಯಕ್, ಪೊಲೀಸ್ ಆಯುಕ್ತ ವಿಕಾಸ್‌‌ ಕುಮಾರ್, ಮೇಯರ್ ದಿವಾಕರ್ ಮತ್ತು ಇತರರು ಉಪಸ್ಥಿತರಿದ್ದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago