ಮಂಗಳೂರು:ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರಿಗೆ ಕೇಂದ್ರ ಸರಕಾರದಿಂದ ಅವಮಾನ: ವಿನಯ ಕುಮಾರ್ ಸೊರಕೆ  – vishwanews24

Featured, ದಕ್ಷಿಣ ಕನ್ನಡ

ಮಂಗಳೂರು:ಕೇಂದ್ರ ಸರಕಾರ ಪಂಚಾಯತ್‌ನ ಹಕ್ಕನ್ನು ಕಸಿದುಕೊಂಡಿದೆ: ವಿನಯ ಕುಮಾರ್ ಸೊರಕೆ 

‘ಮನರೇಗಾ ಬಚಾವೋ ಸಂಗ್ರಾಮ್‌‘ನ ನಾಲ್ಕನೇ ದಿನದ ಪಾದಯಾತ್ರೆ

ಮಂಗಳೂರು: ಕೇಂದ್ರ ಸರಕಾರ ಮನರೇಗಾ ಬದಲು ಪಂಚಾಯತ್ ವ್ಯವಸ್ಥೆಯನ್ನು ಶಿಥಿಲಗೊಳಿಸುವ ಯೋಜನೆಯನ್ನು ಜಾರಿಗೊಳಿಸಿದೆ. ಆ ಮೂಲಕ ಪಂಚಾಯತ್‌ನ ಹಕ್ಕನ್ನು ಕಸಿದು ಕೊಂಡಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.

ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿರುವ ‘ಮನರೇಗಾ ಬಚಾವೋ ಸಂಗ್ರಾಮ್‌‘ನ ನಾಲ್ಕನೇ ದಿನದ ಪಾದಯಾತ್ರೆಗೆ ಗುರುವಾರ ನಗರದ ಲಾಲ್ ಬಾಗ್ ನಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಇದನ್ನೂ ಓದಿ: 

ಮೂಡುಬಿದಿರೆ : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು – vishwanews24

ಗ್ರಾಮ ಸ್ವರಾಜ್ಯದ ಕಲ್ಪನೆಯನ್ನು ಜಾರಿಗೆ ತಂದವರು ರಾಷ್ಟ್ರಪಿತ ಮಹಾತ್ಮಾ ಗಾಂಧಿ. ಆದರೆ ಗ್ರಾಮೀಣ ಯೋಜನೆಯೊಂದಕ್ಕೆ ಇಟ್ಟಿದ್ದ ಅವರ ಹೆಸರನ್ನೇ ಕೇಂದ್ರ ಸರಕಾರ ತೆಗೆದು ಹಾಕಿದೆ. ಆ ಮೂಲಕ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರಿಗೆ ಅವಮಾನ ಮಾಡಿದೆ ಎಂದರು.

ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕ ಜೆ.ಆರ್. ಲೋಬೊ, ಜಿಲ್ಲಾ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಪ್ಪಿ, ಪರಿಸರ ಪ್ರವಾಸೋದ್ಯಮ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೊ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿಎಸ್ ಗಟ್ಟಿ, ಮಾಜಿ ಮೇಯರ್‌ಗಳಾದ ಎಂ. ಶಶಿಧರ ಹೆಗ್ಡೆ , ಭಾಸ್ಕರ ಕೆ ಮತ್ತು ಕೆ.ಅಶ್ರಫ್, ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಜ್ ,ಪ್ರಮುಖರಾದ ಎಂ.ಎಸ್.ಮುಹಮ್ಮದ್, ಸುರೇಶ್ ಬಳ್ಳಾಲ್, ಪ್ರಕಾಶ್ ಸಾಲ್ಯಾನ್, ಎ.ಸಿ. ವಿನಯರಾಜ್, ಪ್ರವೀಣ್ ಚಂದ್ರ ಆಳ್ವ, ಲ್ಯಾನ್ಸ್ ಲಾಟ್ ಪಿಂಟೊ, ಶುಭೋದಯ ಆಳ್ವ, ನವೀನ್ ಡಿ‘ಸೋಜ, ಡಿ.ಕೆ.ಅಶೋಕ್, ಸಂತೋಷ್ ಕುಮಾರ್, ಟಿ.ಕೆ.ಸುಧೀರ್, ಡೆನಿಸ್ ಡಿ ಸಿಲ್ವ, ಜೋಕಿಂ ಡಿ ಸೋಜ, ಅಬ್ಬಾಸ್ ಅಲಿ, ಸುಹಾನ ಆಳ್ವ, ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ಇದನ್ನೂ ಓದಿ: 

ಮಾರ್ಚ್ 6ರಂದು ರಾಜ್ಯ ಬಜೆಟ್‌ ಮಂಡನೆ – vishwanews24

Leave a Reply