ಮಂಗಳೂರು: ಕೇಂದ್ರ ಸರಕಾರ ಮನರೇಗಾ ಬದಲು ಪಂಚಾಯತ್ ವ್ಯವಸ್ಥೆಯನ್ನು ಶಿಥಿಲಗೊಳಿಸುವ ಯೋಜನೆಯನ್ನು ಜಾರಿಗೊಳಿಸಿದೆ. ಆ ಮೂಲಕ ಪಂಚಾಯತ್ನ ಹಕ್ಕನ್ನು ಕಸಿದು ಕೊಂಡಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿರುವ ‘ಮನರೇಗಾ ಬಚಾವೋ ಸಂಗ್ರಾಮ್‘ನ ನಾಲ್ಕನೇ ದಿನದ ಪಾದಯಾತ್ರೆಗೆ ಗುರುವಾರ ನಗರದ ಲಾಲ್ ಬಾಗ್ ನಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಇದನ್ನೂ ಓದಿ:
ಗ್ರಾಮ ಸ್ವರಾಜ್ಯದ ಕಲ್ಪನೆಯನ್ನು ಜಾರಿಗೆ ತಂದವರು ರಾಷ್ಟ್ರಪಿತ ಮಹಾತ್ಮಾ ಗಾಂಧಿ. ಆದರೆ ಗ್ರಾಮೀಣ ಯೋಜನೆಯೊಂದಕ್ಕೆ ಇಟ್ಟಿದ್ದ ಅವರ ಹೆಸರನ್ನೇ ಕೇಂದ್ರ ಸರಕಾರ ತೆಗೆದು ಹಾಕಿದೆ. ಆ ಮೂಲಕ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರಿಗೆ ಅವಮಾನ ಮಾಡಿದೆ ಎಂದರು.
ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕ ಜೆ.ಆರ್. ಲೋಬೊ, ಜಿಲ್ಲಾ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಪ್ಪಿ, ಪರಿಸರ ಪ್ರವಾಸೋದ್ಯಮ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೊ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿಎಸ್ ಗಟ್ಟಿ, ಮಾಜಿ ಮೇಯರ್ಗಳಾದ ಎಂ. ಶಶಿಧರ ಹೆಗ್ಡೆ , ಭಾಸ್ಕರ ಕೆ ಮತ್ತು ಕೆ.ಅಶ್ರಫ್, ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಜ್ ,ಪ್ರಮುಖರಾದ ಎಂ.ಎಸ್.ಮುಹಮ್ಮದ್, ಸುರೇಶ್ ಬಳ್ಳಾಲ್, ಪ್ರಕಾಶ್ ಸಾಲ್ಯಾನ್, ಎ.ಸಿ. ವಿನಯರಾಜ್, ಪ್ರವೀಣ್ ಚಂದ್ರ ಆಳ್ವ, ಲ್ಯಾನ್ಸ್ ಲಾಟ್ ಪಿಂಟೊ, ಶುಭೋದಯ ಆಳ್ವ, ನವೀನ್ ಡಿ‘ಸೋಜ, ಡಿ.ಕೆ.ಅಶೋಕ್, ಸಂತೋಷ್ ಕುಮಾರ್, ಟಿ.ಕೆ.ಸುಧೀರ್, ಡೆನಿಸ್ ಡಿ ಸಿಲ್ವ, ಜೋಕಿಂ ಡಿ ಸೋಜ, ಅಬ್ಬಾಸ್ ಅಲಿ, ಸುಹಾನ ಆಳ್ವ, ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ಇದನ್ನೂ ಓದಿ:
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…