Featured

ಮಂಗಳೂರು:ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾಗವಹಿಸಲು ಅಮೆರಿಕಕ್ಕೆ ತೆರಳಿದ ಸಂಸದ ಕ್ಯಾ. ಬ್ರಿಜೇಶ್‌ ಚೌಟ – vishwanews24

ಮಂಗಳೂರು:ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾಗವಹಿಸಲು ಅಮೆರಿಕಕ್ಕೆ ತೆರಳಿದ ಸಂಸದ ಕ್ಯಾ. ಬ್ರಿಜೇಶ್‌ ಚೌಟ

ನ್ಯೂಯಾರ್ಕ್‌ಗೆ ಭೇಟಿ ನೀಡಿರುವ ಭಾರತದ 15 ಮಂದಿಯ ಸರ್ವಪಕ್ಷ ನಿಯೋಗದಲ್ಲಿ ಸ್ಥಾನ ಪಡೆದಿರುವ ದ.ಕ. ಸಂಸದರು

ಮಂಗಳೂರು: ದಕ್ಷಿಣ ಕನ್ನಡ‌ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ನ್ಯೂಯಾರ್ಕ್‌ನಲ್ಲಿ ನಡೆಯುತ್ತಿರುವ 80ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ(UNGA) ಅಧಿವೇಶನದಲ್ಲಿ ಭಾಗವಹಿಸಲು ಬಿಜೆಪಿ ಸಂಸದ ಪಿಪಿ ಚೌಧರಿ ನೇತೃತ್ವದ ನಿಯೋಗದ ಜತೆ ಅಮೆರಿಕ ದೇಶಕ್ಕೆ ತೆರಳಿದ್ದಾರೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.

ಭಾರತದಿಂದ ವಿವಿಧ ಪಕ್ಷಗಳ ಸಂಸದರನ್ನು ಒಳಗೊಂಡಿರುವ ಎರಡು ನಿಯೋಗವು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಈ ಅಧಿವೇಶನದಲ್ಲಿ ಭಾಗವಹಿಸಲಿದೆ. ಆ ಪೈಕಿ ಪಿಪಿ ಚೌಧರಿ ನೇತೃತ್ವದ ಮೊದಲ ನಿಯೋಗವು ಅ.8ರಿಂದ 14ರವರೆಗೆ ನಡೆಯುವ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದು, ಈ ತಂಡದಲ್ಲಿ ಕರ್ನಾಟಕದಿಂದ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಸ್ಥಾನ ಪಡೆದಿದ್ದಾರೆ. ಇವರೊಂದಿಗೆ ಸಂಸದರಾಗಿರುವ ಅನಿಲ್ ಬಲೂನಿ, ಡಾ. ನಿಶಿಕಾಂತ್ ದುಬೆ, ಉಜ್ವಲ್ ನಿಕಮ್, ಎಸ್ ಫಾಂಗ್ನಾನ್ ಕೊನ್ಯಾಕ್, ಡಾ. ಮೇಧಾ ವಿಶ್ರಮ್ ಕುಲಕರ್ಣಿ, ಪೂನಂ ಬೆನ್ ಮಾದಮ್, ವಂಶಿ ಕೃಷ್ಣ ಗದ್ದಾಮ್, ವಿವೇಕ್ ತಂಖಾ, ಡಾ. ಟಿ ಸುಮತಿ, ಎನ್.ಕೆ. ಪ್ರೇಮಚಂದ್ರನ್, ಕುಮಾರಿ ಸೆಲ್ಜಾ, ಮಾತುಕುಮಿಲ್ಲಿ ಶ್ರೀಭರತ್ ಮತ್ತು ರಾಜೀವ್ ರೈ ಅವರು ನಿಯೋಗದಲ್ಲಿ ನ್ಯೂಯಾರ್ಕ್‌ಗೆ ತೆರಳಿದ್ದಾರೆ.

ಸುಮಾರು ಎರಡು ದಶಕಗಳ ಬಳಿಕ ಭಾರತದ ಸಂಸದೀಯ ರಾಜತಾಂತ್ರಿಕತೆಯನ್ನು ಪುನರುಜ್ಜೀವಗೊಳಿಸುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ಈ ನಿಯೋಗವು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜತಾಂತ್ರಿಕ ಸಂಬಂಧಗಳನ್ನು ಉತ್ತಮಪಡಿಸುವುದು, ಜಾಗತಿಕ ಮಟ್ಟದ ಸಭೆಯಲ್ಲಿ ಭಾರತವನ್ನು ಅಧಿಕಾರಿಗಳ ಹೊರತಾಗಿ ಪ್ರತಿನಿಧಿಸುವುದು, ವಿಶ್ವಸಂಸ್ಥೆಯಲ್ಲಿ ಸಂಸದೀಯ ಪ್ರಜಾಪ್ರಭುತ್ವ ದೇಶದ ಪ್ರತಿನಿಧಿಗಳಾಗಿ ಪ್ರಜಾತಂತ್ರದ ಮೌಲ್ಯಗಳನ್ನು ಪ್ರಚುರಪಡಿಸುವುದು ಈ ನಿಯೋಗದ ಉದ್ದೇಶವಾಗಿದೆ. 15 ಸಂಸದರ ಎರಡನೇ ನಿಯೋಗವು ಈ ತಿಂಗಳ ಕೊನೆಯಲ್ಲಿ ಬಿಜೆಪಿ ಸಂಸದೆ ಡಿ. ಪುರಂದೇಶ್ವರಿ ನೇತೃತ್ವದಲ್ಲಿ ನ್ಯೂಯಾರ್ಕ್ ಗೆ ಪ್ರಯಾಣಿಸಲಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

5 minutes ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

23 minutes ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

31 minutes ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

46 minutes ago

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ – vishwanews24

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್‌ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…

3 hours ago

ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ – vishwanews24

ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…

3 hours ago