ನ್ಯೂಯಾರ್ಕ್ಗೆ ಭೇಟಿ ನೀಡಿರುವ ಭಾರತದ 15 ಮಂದಿಯ ಸರ್ವಪಕ್ಷ ನಿಯೋಗದಲ್ಲಿ ಸ್ಥಾನ ಪಡೆದಿರುವ ದ.ಕ. ಸಂಸದರು
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನ್ಯೂಯಾರ್ಕ್ನಲ್ಲಿ ನಡೆಯುತ್ತಿರುವ 80ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ(UNGA) ಅಧಿವೇಶನದಲ್ಲಿ ಭಾಗವಹಿಸಲು ಬಿಜೆಪಿ ಸಂಸದ ಪಿಪಿ ಚೌಧರಿ ನೇತೃತ್ವದ ನಿಯೋಗದ ಜತೆ ಅಮೆರಿಕ ದೇಶಕ್ಕೆ ತೆರಳಿದ್ದಾರೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.
ಭಾರತದಿಂದ ವಿವಿಧ ಪಕ್ಷಗಳ ಸಂಸದರನ್ನು ಒಳಗೊಂಡಿರುವ ಎರಡು ನಿಯೋಗವು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಈ ಅಧಿವೇಶನದಲ್ಲಿ ಭಾಗವಹಿಸಲಿದೆ. ಆ ಪೈಕಿ ಪಿಪಿ ಚೌಧರಿ ನೇತೃತ್ವದ ಮೊದಲ ನಿಯೋಗವು ಅ.8ರಿಂದ 14ರವರೆಗೆ ನಡೆಯುವ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದು, ಈ ತಂಡದಲ್ಲಿ ಕರ್ನಾಟಕದಿಂದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸ್ಥಾನ ಪಡೆದಿದ್ದಾರೆ. ಇವರೊಂದಿಗೆ ಸಂಸದರಾಗಿರುವ ಅನಿಲ್ ಬಲೂನಿ, ಡಾ. ನಿಶಿಕಾಂತ್ ದುಬೆ, ಉಜ್ವಲ್ ನಿಕಮ್, ಎಸ್ ಫಾಂಗ್ನಾನ್ ಕೊನ್ಯಾಕ್, ಡಾ. ಮೇಧಾ ವಿಶ್ರಮ್ ಕುಲಕರ್ಣಿ, ಪೂನಂ ಬೆನ್ ಮಾದಮ್, ವಂಶಿ ಕೃಷ್ಣ ಗದ್ದಾಮ್, ವಿವೇಕ್ ತಂಖಾ, ಡಾ. ಟಿ ಸುಮತಿ, ಎನ್.ಕೆ. ಪ್ರೇಮಚಂದ್ರನ್, ಕುಮಾರಿ ಸೆಲ್ಜಾ, ಮಾತುಕುಮಿಲ್ಲಿ ಶ್ರೀಭರತ್ ಮತ್ತು ರಾಜೀವ್ ರೈ ಅವರು ನಿಯೋಗದಲ್ಲಿ ನ್ಯೂಯಾರ್ಕ್ಗೆ ತೆರಳಿದ್ದಾರೆ.
ಸುಮಾರು ಎರಡು ದಶಕಗಳ ಬಳಿಕ ಭಾರತದ ಸಂಸದೀಯ ರಾಜತಾಂತ್ರಿಕತೆಯನ್ನು ಪುನರುಜ್ಜೀವಗೊಳಿಸುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ಈ ನಿಯೋಗವು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜತಾಂತ್ರಿಕ ಸಂಬಂಧಗಳನ್ನು ಉತ್ತಮಪಡಿಸುವುದು, ಜಾಗತಿಕ ಮಟ್ಟದ ಸಭೆಯಲ್ಲಿ ಭಾರತವನ್ನು ಅಧಿಕಾರಿಗಳ ಹೊರತಾಗಿ ಪ್ರತಿನಿಧಿಸುವುದು, ವಿಶ್ವಸಂಸ್ಥೆಯಲ್ಲಿ ಸಂಸದೀಯ ಪ್ರಜಾಪ್ರಭುತ್ವ ದೇಶದ ಪ್ರತಿನಿಧಿಗಳಾಗಿ ಪ್ರಜಾತಂತ್ರದ ಮೌಲ್ಯಗಳನ್ನು ಪ್ರಚುರಪಡಿಸುವುದು ಈ ನಿಯೋಗದ ಉದ್ದೇಶವಾಗಿದೆ. 15 ಸಂಸದರ ಎರಡನೇ ನಿಯೋಗವು ಈ ತಿಂಗಳ ಕೊನೆಯಲ್ಲಿ ಬಿಜೆಪಿ ಸಂಸದೆ ಡಿ. ಪುರಂದೇಶ್ವರಿ ನೇತೃತ್ವದಲ್ಲಿ ನ್ಯೂಯಾರ್ಕ್ ಗೆ ಪ್ರಯಾಣಿಸಲಿದೆ.
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…
ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…
ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…
ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…