Featured

ಮಂಗಳೂರು:ಸರ್ಕಾರಿ ಭೂಮಿಯಲ್ಲಿ ಅಕ್ರಮ ಗೋಶಾಲೆ ಕಟ್ಟಲಾಗಿದೆ ಎಂದು ಆರೋಪಿಸಿ ಕೆಂಜಾರು ಗೋ ಶಾಲೆ ನೆಲಸಮಗೊಳಿಸಿದ ಜಿಲ್ಲಾಡಳಿತ -Vishwanews24

ಮಂಗಳೂರು:ಸರ್ಕಾರಿ ಭೂಮಿಯಲ್ಲಿ ಅಕ್ರಮ ಗೋಶಾಲೆ ಕಟ್ಟಲಾಗಿದೆ ಎಂದು ಆರೋಪಿಸಿ ಕೆಂಜಾರು ಗೋ ಶಾಲೆ ನೆಲಸಮಗೊಳಿಸಿದ ಜಿಲ್ಲಾಡಳಿತ -Vishwanews24

ಮಂಗಳೂರು: ಜಿಲ್ಲಾಡಳಿತವು ನಗರದ ಹೊರವಲಯದ ಕೆಂಜಾರಿನಲ್ಲಿರುವ ಗೋಶಾಲೆಯನ್ನು ಪೊಲೀಸ್ ಸಹಾಯದಿಂದ ತೆರವುಗೊಳಿಸಿದ್ದು ಸರ್ಕಾರಿ ಭೂಮಿಯಲ್ಲಿ ಅಕ್ರಮ ಗೋಶಾಲೆ ಕಟ್ಟಲಾಗಿದೆ ಎಂದು ಆರೋಪಿಸಿದ್ದಾರೆ. ಜಿಲ್ಲಾಡಳಿತದ ಪ್ರಕಾರ, ಗೋ ಶಾಲೆ ಇರುವ ಭೂಮಿಯನ್ನು ಕರಾವಳಿ ಗಾರ್ಡ್‌ನ ತರಬೇತಿ ಕೇಂದ್ರಕ್ಕೆ ಮೀಸಲಿಡಲಾಗಿದೆ.

ಫೆಬ್ರವರಿ 22 ರಂದು ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮಾನಿಟರಿಂಗ್ ಸಮಿತಿ (ದಿಶಾ) ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು, ”ಮುಂಬರುವ ವಾರದಲ್ಲಿ ಕರಾವಳಿ ಕಾವಲು ತರಬೇತಿಗಾಗಿ ನಿಗದಿಪಡಿಸಿದ ಅತಿಕ್ರಮಣ ಭೂಮಿಯನ್ನು ಖಾಲಿ ಮಾಡಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ” ಎಂದು ಹೇಳಿದರು.

ಉಡುಪಿ : ಎಂಟು ತಿಂಗಳ ಬಳಿಕ ಮೃತ ವ್ಯಕ್ತಿಯ ಅಸ್ಥಿಪಂಜರ ಪತ್ತೆ -Vishwanews24

ಜಾನುವಾರು ಮಾಲೀಕ ಜಯಪ್ರಕಾಶ್ ಶೆಟ್ಟಿ, “ಯಾವುದೇ ಸೂಚನೆ ನೀಡದೆ ಜಿಲ್ಲಾಡಳಿತವು ದನಗಳ ಆಶ್ರಯವನ್ನು ನೆಲಸಮ ಮಾಡಿದೆ. ನನ್ನ ಗೋಶಾಲೆಯಲ್ಲಿ 300 ದನಗಳಿವೆ. ನಾನು ದನಕರುಗಳಿಗೆ ಎಲ್ಲಿ ಸಾಕುವುದು” ಎಂದು ಅಳಲು ತೋಡಿಕೊಂಡಿದ್ದಾರೆ.

”ಜಮೀನಿನ ಮಾರಾಟ ಪತ್ರವೂ ಸಹ ನನ್ನ ಹೆಸರಿನಲ್ಲಿದೆ. ಸರ್ಕಾರ ಕನಿಷ್ಠ ಗೋಶಾಲೆಗೆ ಪರ್ಯಾಯ ಭೂಮಿಯನ್ನು ಒದಗಿಸಬೇಕು. ಯಾವುದೇ ಸೂಚನೆ ನೀಡದೆಯೇ ಗೋಶಾಲೆ ನೆಲಸಮ ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.

“ಆಡಳಿತ ಮತ್ತು ಪ್ರತಿನಿಧಿಯ ಈ ಕ್ರೂರ ಕೃತ್ಯವು ಹಿಂದುತ್ವ ಮತ್ತು ಮಾನವೀಯತೆಗೆ ಬಗೆದ ದ್ರೋಹವಾಗಿದೆ. ಮೊಘಲ್‌ ಆಡಳಿತಕ್ಕಿಂತ ಕೆಟ್ಟದಾದ ಆಡಳಿತವಿದು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಮಂಡಲ ಅಧಿವೇಶನ : ಶರ್ಟ್ ಬಿಚ್ಚಿ ಅಸಭ್ಯ ವರ್ತನೆ ತೋರಿದ ಕಾಂಗ್ರೆಸ್ ಶಾಸಕ ಸಂಗಮೇಶ್ ;ಸದನದಿಂದ 1 ವಾರ ಅಮಾನತುಗೊಳಿಸಿದ ಸ್ಪೀಕರ್ -Vishwanews24

”ನಗರದಲ್ಲಿ ಕೆಲವು ಅಕ್ರಮವಾಗಿ ನಿರ್ಮಿಸಲಾದ ಕಟ್ಟಡಗಳು ಇವೆ ಎಂದು ಕೆಲವು ಸಾರ್ವಜನಿಕರು ದೂರಿದ್ದಾರೆ. ಆದರೆ ಅದರ ವಿರುದ್ದ ಯಾವುದೇ ಕ್ರಮ ಕೈಗೊಳ್ಳದ ಜಿಲ್ಲಾಡಳಿತ ಗೋಶಾಲೆಯ ಮೇಲೆ ಕ್ರಮ ಕೈಗೊಂಡಿದೆ. ಈಗ ಈ ಗೋಶಾಲೆಯಲ್ಲಿನ ದನಗಳನ್ನು ಎಲ್ಲಿ, ಯಾರು ನೋಡಿಕೊಳ್ಳುವುದು” ಎಂದು ಜಿಲ್ಲಾಡಳಿತವನ್ನು ಪ್ರಶ್ನಿಸಿದ್ದಾರೆ.

ಇನ್ನು ಫೆಬ್ರವರಿ 22 ರಂದು ನಡೆದ ಸಭೆಯಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್‌ ಅವರು, ”ಈ ಗೋಶಾಲೆ ಅಕ್ರಮವಾಗಿದ್ದರೆ ಇದರ ವಿರುದ್ದ ಕ್ರಮ ಕೈಗೊಳ್ಳಬಹುದು” ಎಂದು ಹೇಳಿದ್ದರು

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

5 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago