ಮಂಗಳೂರು: ಜಿಲ್ಲಾಡಳಿತವು ನಗರದ ಹೊರವಲಯದ ಕೆಂಜಾರಿನಲ್ಲಿರುವ ಗೋಶಾಲೆಯನ್ನು ಪೊಲೀಸ್ ಸಹಾಯದಿಂದ ತೆರವುಗೊಳಿಸಿದ್ದು ಸರ್ಕಾರಿ ಭೂಮಿಯಲ್ಲಿ ಅಕ್ರಮ ಗೋಶಾಲೆ ಕಟ್ಟಲಾಗಿದೆ ಎಂದು ಆರೋಪಿಸಿದ್ದಾರೆ. ಜಿಲ್ಲಾಡಳಿತದ ಪ್ರಕಾರ, ಗೋ ಶಾಲೆ ಇರುವ ಭೂಮಿಯನ್ನು ಕರಾವಳಿ ಗಾರ್ಡ್ನ ತರಬೇತಿ ಕೇಂದ್ರಕ್ಕೆ ಮೀಸಲಿಡಲಾಗಿದೆ.
ಫೆಬ್ರವರಿ 22 ರಂದು ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮಾನಿಟರಿಂಗ್ ಸಮಿತಿ (ದಿಶಾ) ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು, ”ಮುಂಬರುವ ವಾರದಲ್ಲಿ ಕರಾವಳಿ ಕಾವಲು ತರಬೇತಿಗಾಗಿ ನಿಗದಿಪಡಿಸಿದ ಅತಿಕ್ರಮಣ ಭೂಮಿಯನ್ನು ಖಾಲಿ ಮಾಡಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ” ಎಂದು ಹೇಳಿದರು.
ಉಡುಪಿ : ಎಂಟು ತಿಂಗಳ ಬಳಿಕ ಮೃತ ವ್ಯಕ್ತಿಯ ಅಸ್ಥಿಪಂಜರ ಪತ್ತೆ -Vishwanews24
ಜಾನುವಾರು ಮಾಲೀಕ ಜಯಪ್ರಕಾಶ್ ಶೆಟ್ಟಿ, “ಯಾವುದೇ ಸೂಚನೆ ನೀಡದೆ ಜಿಲ್ಲಾಡಳಿತವು ದನಗಳ ಆಶ್ರಯವನ್ನು ನೆಲಸಮ ಮಾಡಿದೆ. ನನ್ನ ಗೋಶಾಲೆಯಲ್ಲಿ 300 ದನಗಳಿವೆ. ನಾನು ದನಕರುಗಳಿಗೆ ಎಲ್ಲಿ ಸಾಕುವುದು” ಎಂದು ಅಳಲು ತೋಡಿಕೊಂಡಿದ್ದಾರೆ.
”ಜಮೀನಿನ ಮಾರಾಟ ಪತ್ರವೂ ಸಹ ನನ್ನ ಹೆಸರಿನಲ್ಲಿದೆ. ಸರ್ಕಾರ ಕನಿಷ್ಠ ಗೋಶಾಲೆಗೆ ಪರ್ಯಾಯ ಭೂಮಿಯನ್ನು ಒದಗಿಸಬೇಕು. ಯಾವುದೇ ಸೂಚನೆ ನೀಡದೆಯೇ ಗೋಶಾಲೆ ನೆಲಸಮ ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.
“ಆಡಳಿತ ಮತ್ತು ಪ್ರತಿನಿಧಿಯ ಈ ಕ್ರೂರ ಕೃತ್ಯವು ಹಿಂದುತ್ವ ಮತ್ತು ಮಾನವೀಯತೆಗೆ ಬಗೆದ ದ್ರೋಹವಾಗಿದೆ. ಮೊಘಲ್ ಆಡಳಿತಕ್ಕಿಂತ ಕೆಟ್ಟದಾದ ಆಡಳಿತವಿದು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
”ನಗರದಲ್ಲಿ ಕೆಲವು ಅಕ್ರಮವಾಗಿ ನಿರ್ಮಿಸಲಾದ ಕಟ್ಟಡಗಳು ಇವೆ ಎಂದು ಕೆಲವು ಸಾರ್ವಜನಿಕರು ದೂರಿದ್ದಾರೆ. ಆದರೆ ಅದರ ವಿರುದ್ದ ಯಾವುದೇ ಕ್ರಮ ಕೈಗೊಳ್ಳದ ಜಿಲ್ಲಾಡಳಿತ ಗೋಶಾಲೆಯ ಮೇಲೆ ಕ್ರಮ ಕೈಗೊಂಡಿದೆ. ಈಗ ಈ ಗೋಶಾಲೆಯಲ್ಲಿನ ದನಗಳನ್ನು ಎಲ್ಲಿ, ಯಾರು ನೋಡಿಕೊಳ್ಳುವುದು” ಎಂದು ಜಿಲ್ಲಾಡಳಿತವನ್ನು ಪ್ರಶ್ನಿಸಿದ್ದಾರೆ.
ಇನ್ನು ಫೆಬ್ರವರಿ 22 ರಂದು ನಡೆದ ಸಭೆಯಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರು, ”ಈ ಗೋಶಾಲೆ ಅಕ್ರಮವಾಗಿದ್ದರೆ ಇದರ ವಿರುದ್ದ ಕ್ರಮ ಕೈಗೊಳ್ಳಬಹುದು” ಎಂದು ಹೇಳಿದ್ದರು
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…